ಡಾ.ಕೆ.ಸುಧಾಕರ್‌ ಗೆಲುವು ಹಿನ್ನೆಲೆಯಲ್ಲಿ ನೆಲಮಂಗಲದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಹಾಜರಿದ್ದವರು ಮದ್ಯ ಸಂಗ್ರಹಿಸಿದರು. 
ರಾಜಕೀಯ

ಸುಧಾಕರ್‌ ಅಭಿನಂದನಾ ಸಮಾರಂಭದಲ್ಲಿ ಮದ್ಯ ಹಂಚಿಕೆ: ಜಗದೀಶ್ ಚೌಧರಿ 6 ವರ್ಷ BJPಯಿಂದ ಉಚ್ಚಾಟನೆ

ಜುಲೈ 7 ರಂದು ನೆಲಮಂಗಲದಲ್ಲಿ ಆಯೋಜಿಸಲಾಗಿದ್ದ ಚಿಕ್ಕಬಳ್ಳಾಪುರ ಸಂಸದ ಡಾ. ಕೆ. ಸುಧಾಕರ್ ಸನ್ಮಾನ ಸಮಾರಂಭದಲ್ಲಿ ಘಟನೆ ನಡೆದಿತ್ತು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಾರ್ವಜನಿಕರಿಗೆ ಮದ್ಯ ಹಂಚಿಕೆ ಮಾಡಲಾಗಿತ್ತು.

ಬೆಂಗಳೂರು: ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ಅಭಿನಂದನಾ ಸಮಾರಂಭದಲ್ಲಿ ಮದ್ಯ ವಿತರಿಸಿದ ಆರೋಪದ ಮೇಲೆ ನೆಲಮಂಗಲದ ಬಿಜೆಪಿ ಅಧ್ಯಕ್ಷ ಜಗದೀಶ್ ಚೌಧರಿ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಕೃಷ್ಣ ಮಾತನಾಡಿ, ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದಕ್ಕಾಗಿ ರಾಜ್ಯಾಧ್ಯಕ್ಷರ ನಿರ್ದೇಶನದ ಮೇರೆಗೆ ಜಗದೀಶ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಹೇಳಿದರು.

ಜುಲೈ 7 ರಂದು ನೆಲಮಂಗಲದಲ್ಲಿ ಆಯೋಜಿಸಲಾಗಿದ್ದ ಚಿಕ್ಕಬಳ್ಳಾಪುರ ಸಂಸದ ಡಾ. ಕೆ. ಸುಧಾಕರ್ ಸನ್ಮಾನ ಸಮಾರಂಭದಲ್ಲಿ ಘಟನೆ ನಡೆದಿತ್ತು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಾರ್ವಜನಿಕರಿಗೆ ಮದ್ಯ ಹಂಚಿಕೆ ಮಾಡಲಾಗಿತ್ತು. ಅಲ್ಲದೇ, ಎಣ್ಣೆಗಾಗಿ ಸಾರ್ವಜನಿಕರು ಸಹ ಮುಗಿಬಿದ್ದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರೀ ಟೀಕೆಗಳು ವ್ಯಕ್ತವಾಗಿದ್ದವು.

ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೂಚನೆ ಮೇರೆಗೆ ಜಗದೀಶ್ ಚೌಧರಿ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಂತ್ಯ ಸನ್ನಿಹಿತ?: ಇರಾನ್ ನತ್ತ ಮುಖ ಮಾಡಿದ ಅಮೆರಿಕದ ಅತ್ಯಂತ ವಿಧ್ವಂಸಕ ಕ್ಷಿಪಣಿ

Open The F*cking Strait, You Bast*rds: ಹತಾಶ ಅಮೆರಿಕ ಅಧ್ಯಕ್ಷರಿಂದ ಇರಾನ್ ಗೆ ಅಶ್ಲೀಲ ನಿಂದನೆ, ಬೈಗುಳ

IPL ಅನ್ನೂ ಮೀರಿಸಿ PSL 'ವಿಶ್ವದ ನಂಬರ್ ಒನ್ ಲೀಗ್' ಆಗುತ್ತದೆ: Mohsin Naqvi

ಟಿಕೆಟ್ ಆಕಾಂಕ್ಷಿಗಳಿಂದ 50 ಸಾವಿರ ಸಂಗ್ರಹ; ಚುನಾವಣೆಯಿಂದ MNM ಹಿಂದೆ ಸರಿದು ಮಹಾಮೋಸ: ಕಮಲ್ ಹಾಸನ್ ವಿರುದ್ಧ ಭುಗಿಲೆದ್ದ ಆಕ್ರೋಶ!

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ: ಹಿಂದೂ ಯುವತಿಯ ಹಲವು ವಿಡಿಯೋ ವೈರಲ್

SCROLL FOR NEXT