ಡಿ.ಕೆ.ಶಿವಕುಮಾರ್ 
ರಾಜಕೀಯ

ಲೋಕಸಭೆ ಚುನಾವಣೆಯಲ್ಲಿ ಯಾವ ಹೊಂದಾಣಿಕೆ ರಾಜಕಾರಣವೂ ನಡೆದಿಲ್ಲ: ಡಿ ಕೆ ಶಿವಕುಮಾರ್

ಪಕ್ಷ ಒಗ್ಗಟ್ಟಾಗಿ ಕೆಲಸ ಮಾಡಲಿ ಎಂದು ನಾವೇ ಒಂದಷ್ಟು ಜನ ಮಂತ್ರಿಗಳಿಗೆ ತಮ್ಮ ಕುಟುಂಬದ ಸದಸ್ಯರನ್ನು ಚುನಾವಣೆಗೆ ನಿಲ್ಲಿಸಿ ಎಂದು ಹೇಳಿದ್ದೆವು. ಇದರಲ್ಲಿ ಒಂದಷ್ಟು ಜನ ಗೆದ್ದಿದ್ದಾರೆ. ಒಂದಷ್ಟು ಜನ ಸೋತಿದ್ದಾರೆ.

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಯಾವ ಹೊಂದಾಣಿಕೆ ರಾಜಕಾರಣವೂ ನಡೆದಿಲ್ಲ. ಎಲ್ಲವೂ ಸುಳ್ಳು. ರಾಜ್ಯದಲ್ಲಿ ಎಲ್ಲಾ ಕಾರ್ಯಕರ್ತರು ಒಟ್ಟಾಗಿ ದುಡಿದಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಲೋಕಸಭಾ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿದೆ ಎಂಬ ಆರೋಪ ಸಂಬಂಧ ಪ್ರತಿಕ್ರಿಯಿಸಿದರು. “ಚುನಾವಣೆ ಹೊತ್ತಿನಲ್ಲಿ ತಳಮಟ್ಟದ ಪರಿಸ್ಥಿತಿಯನ್ನು ಸರಿಯಾಗಿ ಅರಿಯಲು ಆಗಲಿಲ್ಲ. ಎಲ್ಲಾ ಕಾರ್ಯಕರ್ತರು ಒಟ್ಟಾಗಿ ದುಡಿದಿದ್ದಾರೆ.

ಪಕ್ಷ ಒಗ್ಗಟ್ಟಾಗಿ ಕೆಲಸ ಮಾಡಲಿ ಎಂದು ನಾವೇ ಒಂದಷ್ಟು ಜನ ಮಂತ್ರಿಗಳಿಗೆ ತಮ್ಮ ಕುಟುಂಬದ ಸದಸ್ಯರನ್ನು ಚುನಾವಣೆಗೆ ನಿಲ್ಲಿಸಿ ಎಂದು ಹೇಳಿದ್ದೆವು. ಇದರಲ್ಲಿ ಒಂದಷ್ಟು ಜನ ಗೆದ್ದಿದ್ದಾರೆ. ಒಂದಷ್ಟು ಜನ ಸೋತಿದ್ದಾರೆ. ಮುಂದಕ್ಕೆ ಇವರುಗಳು ಪಕ್ಷಕ್ಕೆ ದೊಡ್ಡ ಆಸ್ತಿಯಾಗಿ ಬೆಳೆಯುತ್ತಾರೆ ಎಂದರು.

ಎಲ್ಲಾ ಕಾರ್ಯಕರ್ತರು, ಮುಖಂಡರು, ಗೆದ್ದವರು, ಸೋತವರು ಎಲ್ಲರು ಸೇರಿ ಎಐಸಿಸಿ ಸತ್ಯಶೋದನಾ ಸಮಿತಿಗೆ ಪರಿಸ್ಥಿತಿ ಅರಿಯಲು ಅಹವಾಲು ಸಲ್ಲಿಸಿದ್ದೆವು. ಅದರಂತೆ ಎಲ್ಲರು ಸಮಿತಿಯ ಮುಂದೆ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಮುಂದಕ್ಕೆ ಯಾವ ರೀತಿ ಕಾರ್ಯನಿರ್ವಹಿಸಬೇಕು ಎನ್ನುವ ತೀರ್ಮಾನ ತೆಗೆದುಕೊಳ್ಳಲಾಗಿದೆ” ಎಂದು ಹೇಳಿದರು.

ಮುಡಾ ಹಗರಣದ ವಿರುದ್ದ ಬಿಜೆಪಿ ಪ್ರತಿಭಟನೆ ವಿಚಾರವಾಗಿ ಕೇಳಿದಾಗ “ವಿಧಾನಸಭಾ ಕಲಾಪ ಬರುತ್ತಿರುವ ಕಾರಣ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ. ಅವರು ಮಾಡಿರುವ ದರಿದ್ರವನ್ನು ಅವರೇ ಬಯಲು ಮಾಡುತ್ತಿದ್ದಾರೆ. ಇದಕ್ಕೆ ಸದನದಲ್ಲಿ ಏನು ಉತ್ತರ ಕೊಡಬೇಕೊ ಅದನ್ನು ಕೊಡುತ್ತೇವೆ ಎಂದು ಖಾರವಾಗಿ ಉತ್ತರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ