ಇ.ತುಕಾರಾಂ  
ರಾಜಕೀಯ

ಸಂಸದ ಸ್ಥಾನದಿಂದ ಇ.ತುಕಾರಾಂ ಅನರ್ಹಗೊಳಿಸಿ: ಬಿಜೆಪಿ ಆಗ್ರಹ

ವಾಲ್ಮೀಕಿ ನಿಗಮದ ಹಗರಣದಲ್ಲಿ ಭಾಗಿಯಾಗಿ ಬಂಧಿತರಾಗಿರುವ ನಾಗೇಂದ್ರ ಅವರು ಜಾರಿ ನಿರ್ದೇಶನಾಲಯದ ನ್ಯಾಯಾಲಯಕ್ಕೆ ಸಲ್ಲಿಸಿದ ರಿಮಾಂಡ್‌ ಅರ್ಜಿಯಲ್ಲಿ ಚುನಾವಣೆಗೆ ರೂ.29.19 ಕೋಟಿ ಬಳಕೆ ಆಗಿದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ.

ಬೆಂಗಳೂರು: ವಾಲ್ಮೀಕಿ ನಿಗಮದ ಹಣ ಅಕ್ರಮವಾಗಿ ಬಳಕೆ ಮಾಡಿಕೊಂಡು ಸಂಸದರಾಗಿ ಆಯ್ಕೆಯಾದ ಇ.ತುಕಾರಾಂ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಬಿಜೆಪಿ ಸೋಮವಾರ ಆಗ್ರಹಿಸಿದೆ.

ವಾಲ್ಮೀಕಿ ನಿಗಮದ ಹಗರಣದಲ್ಲಿ ಭಾಗಿಯಾಗಿ ಬಂಧಿತರಾಗಿರುವ ನಾಗೇಂದ್ರ ಅವರು ಜಾರಿ ನಿರ್ದೇಶನಾಲಯದ ನ್ಯಾಯಾಲಯಕ್ಕೆ ಸಲ್ಲಿಸಿದ ರಿಮಾಂಡ್‌ ಅರ್ಜಿಯಲ್ಲಿ ಚುನಾವಣೆಗೆ ರೂ.29.19 ಕೋಟಿ ಬಳಕೆ ಆಗಿದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ.

ನಾಗೇಂದ್ರ ಅವರು ರೂ.29.19 ಕೋಟಿಯನ್ನು ಲೋಕಸಭಾ ಚುನಾವಣೆಗೆ ದುರ್ಬಳಕೆ ಮಾಡಿದಕ್ಕೆ ದಾಖಲೆ ಸಿಕ್ಕಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಒಪ್ಪಿಗೆ ಮತ್ತು ಕುಮ್ಮಕ್ಕು ಇಲ್ಲದೇ ಈ ಹಣವನ್ನು ಬಳಸಲು ಸಾಧ್ಯವೇ ಇಲ್ಲ. ಹೀಗಾಗಿ ಚುನಾವಣಾ ಅಕ್ರಮದ ಕುರಿತು ಇನ್ನಷ್ಟು ಆಳವಾದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದೆ.

ಬಡವರ ಹಣವನ್ನು ಚುನಾವಣೆಗೆ ಬಳಸಿಕೊಂಡು ಯಾರು ಸಂಸದರಾಗಿ ಆಯ್ಕೆಯಾಗಿದ್ದಾರೋ ಅವರ ಆಯ್ಕೆಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದೆ.

ತುಕಾರಾಂ ಅವರನ್ನು ಅನರ್ಹಗೊಳಿಸುವಂತೆ ಆಗ್ರಹಿಸಿ ಇತ್ತೀಚೆಗೆ ಮಾಜಿ ಸಚಿವ ಶ್ರೀರಾಮುಲು ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಶೀಘ್ರದಲ್ಲೇ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ಬಳ್ಳಾರಿ ಜಿಲ್ಲಾಧಿಕಾರಿ ಮೂಲಕ ಮನವಿ ಪತ್ರ ಸಲ್ಲಿಸಲಾಗುವುದು ಎಂದೂ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

RSS ದಾಖಲೆಗಳನ್ನು ಸಲ್ಲಿಸದಿದ್ದರೆ ಕಾನೂನು ಕ್ರಮ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸುಳಿವು

ಉದ್ಯಮಿ ಸಾವಿಗೆ ಬಿಗ್ ಟ್ವಿಸ್ಟ್: ಫೋಟೋಶೂಟ್‌ ವೇಳೆ ಪ್ರಿಯಕರನ ಜತೆ ಸೇರಿ ಭಾವಿ ಪತಿಯನ್ನೇ ಪ್ರಪಾತಕ್ಕೆ ತಳ್ಳಿ ಕೊಂದ ವಧು!

ಪೆರಿಯಾರ್ ಹೇಳಿದ್ದೆಲ್ಲವನ್ನೂ ನಾವು ಒಪ್ಪಲ್ಲ; ನಮಗೆ ದೇವರ ಮೇಲೆ ನಂಬಿಕೆ ಇದೆ- ವಿಧಾನಸಭೆಯಲ್ಲಿ ತಮಿಳುನಾಡು ಸಿಎಂ ವಿಜಯ್

ಅಸಹ್ಯ, ಥೂ..ಕೇಂದ್ರದ ಮಂತ್ರಿಯಾಗಿ ಕ್ಷುಲ್ಲಕ ಹೇಳಿಕೆ: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಶಾಸಕ ಹೆಚ್. ಸಿ ಬಾಲಕೃಷ್ಣ ಕಿಡಿ!

NEET ವಿದ್ಯಾರ್ಥಿಗಳಿಗೆ ಪರೀಕ್ಷೆ ತಪ್ಪಲು ಕಾಂಗ್ರೆಸ್ ಕಾರ್ಯಕ್ರಮದ ಟ್ರಾಫಿಕ್ ಕಾರಣ?: Bengaluru police Fact chek ಹೇಳೋದೇನು?