ವಿಧಾನಪರಿಷತ್ (ಸಂಗ್ರಹ ಚಿತ್ರ) online desk
ರಾಜಕೀಯ

ವಾಲ್ಮೀಕಿ ನಿಗಮ ಹಗರಣ: ತನಿಖೆ ಪೂರ್ಣಗೊಳ್ಳುವವರೆಗೂ ಸಿಎಂ ಕೆಳಗಿಳಿಯಲಿ; BJP-JDS ಆಗ್ರಹ

ಅಧಿವೇಶನದ ಆರಂಭದಿಂದಲೂ ಮಹರ್ಷಿ ವಾಲ್ಮೀಕಿ ನಿಗಮದ ರೂ,187 ಕೋಟಿ ಅಕ್ರಮದ ಕುರಿತಂತೆ ವಿರೋಧ ಪಕ್ಷ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ.

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪಂಗಡ ಅಭಿವೃದ್ಧಇ ನಿಗಮದ ಅಕ್ರಮದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಬಿಗಿಪಟ್ಟು ಹಿಡಿದಿರುವ ವಿರೋಧ ಪಕ್ಷಗಳು, ಗುರುವಾರವೂ ವಿಧಾನಪರಿಷತ್ತಿನಲ್ಲಿ ಅಕ್ರಮದ ತನಿಖೆ ಮುಗಿಯುವವರೆಗೆ ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿಯುವಂತೆ ಆಗ್ರಹಿಸಿದವು.

ಅಧಿವೇಶನದ ಆರಂಭದಿಂದಲೂ ಮಹರ್ಷಿ ವಾಲ್ಮೀಕಿ ನಿಗಮದ ರೂ,187 ಕೋಟಿ ಅಕ್ರಮದ ಕುರಿತಂತೆ ವಿರೋಧ ಪಕ್ಷ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ.

ಗುರುವಾರ ಪ್ರಶ್ನೋತ್ತರ ಕಲಾಪದ ನಂತರ ನಿಯಮ 68ರ ಅಡಿಯಲ್ಲಿ ಮುಂದುವರೆದ ಚರ್ಚೆಯಲ್ಲಿ ಜೆಡಿಎಸ್ ನಾಯಕ ಭೋಜೇಗೌಡ, ರಾಜು, ಬಿಜೆಪಿಯ ಡಿ.ಎಸ್.ಅರುಣ್, ಸಂಕನೂರು, ಭಾರತಿ ಶೆಟ್ಟಿ ಸೇರಿದಂತೆ ಇತರರು ಮಾತನಾಡಿ, ಪ್ರಕರಣ ಗಂಭೀರತೆಯನ್ನು ಅರಿಸು ಎಸ್ಐಟಿ ರದ್ದು ಮಾಡಿ ತನಿಖೆಯ ಹೊಣೆಯನ್ನು ಸಿಬಿಐಗೆ ನೀಡಬೇಕು ಎಂದು ಒತ್ತಾಯಿಸಿದರು. ಜೊತೆಗೆ ಅಕ್ರಮ ತಡೆಯಲು ಸಿದ್ದರಾಮಯ್ಯ ವಿಫಲವಾಗಿದ್ದು, ಅದರ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವಂತೆಯೂ ಒತ್ತಾಯಿಸಿದರು. ಇದೇ ವೇಳೆ ಅಕ್ರಮಗಳ ಬಗ್ಗೆ ಗಮನ ಹರಿಸದ ಹಣಕಾಸು ಇಲಾಖೆಯನ್ನು ತರಾಟೆಗೆ ತೆಗೆದುಕೊಂಡರು.

ಬಿಜೆಪಿಯ ನವೀನ್ ಕುಮಾರ್ ಮಾತನಾಡಿ, ಸರ್ಕಾರದ ಕಣ್ಗಾವಲಿನಲ್ಲಿರಬೇಕಾದ ನಿಗಮಗಳ ಹಣ ಮದ್ಯದಂಗಡಿ, ಆಭರಣದಂಗಡಿಗಳಿಗೆ ಸೇರಿದೆ. ಚುನಾವಣಾ ವೆಚ್ಚಕ್ಕೆ ಬಳಕೆಯಾಗಿದೆ. ಜನರು ಕಷ್ಟಪಟ್ಟು ಸರ್ಕಾರದ ಖಜಾನೆ ತುಂಬಿದ ಹಣ ಸಿದ್ದರಾಮಯ್ಯ ಅವರ ಜೇಬು ಸೇರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅದಕ್ಕೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಸದಸ್ಯರು, ಬಿಜೆಪಿ ಸರ್ಕಾರದ ಅವಧಿಯಲ್ಲಾದ ಭೋವಿ ಅಭಿವೃದ್ಧಿ ನಿಗಮ, ದೇವರಾಜ ಅರಸು ಟ್ರಕ್ ಟರ್ಮಿನಲ್ ಸೇರಿದಂತೆ ಇನ್ನಿತರ ನಿಗಮಗಳಲ್ಲಾಗಿರುವ ಅಕ್ರಮಗಳು ಬಿಜೆಪಿಯ ಯಾವ ನಾಯಕರ ಜೇಬು ತುಂಬಿಸಿದ್ದವು ಎಂದು ತಿರುಗೇಟು ನೀಡಿದರು. ಜೊತೆಗೆ ಸಿದ್ದರಾಮಯ್ಯ ಅವರ ಹೆಸರನ್ನು ಕಡತದಿಂದ ತೆಗೆಯುವಂತೆಯೂ ಆಗ್ರಹಿಸಿದರು. ಅದಕ್ಕೆ ಸ್ಪಂದಿಸಿದ ಸಭಾಪತಿಗಳು ಸಿಎಂ ಪದವನ್ನು ಉಳಿಸಿಕೊಂಡು ಸಿದ್ದರಾಮಯ್ಯ ಹೆಸರನ್ನು ಕಡತದಿಂದ ತೆಗೆಯುವಂತೆ ಸೂಚಿಸಿದರು.

ಬಿಜೆಪಿ ಸದಸ್ಯರ ಆರೋಪಗಳಿಗೆ ಕಾಂಗ್ರೆಸ್ ನ ಐವಾನ್ ಡಿಸೋಜಾ, ಯು.ಬಿ.ವೆಂಕಟೇಶ್ ತಮ್ಮ ಭಾಷಣದಲ್ಲಿ ತಿರುಗೇಟು ನೀಡಿ, ವಾಲ್ಮೀಕಿ ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷಿಸಲು ಸರ್ಕಾರ ಸಿದ್ಧವಿದೆ. ಕಾಣೆಯಾಗಿದ್ದ ನಿಗಮದ 89 ಕೋಟಿ ರೂಗಳಲ್ಲಿ ಈಗಾಗಲೇ ರೂ.85.25 ಕೋಟಿ ಗಳನ್ನು ಎಸ್ಐಟಿ ಹಿಂಪಡೆದಿದೆ. ವಾಲ್ಮೀಕಿ ಅಕ್ರಮದ ಬಗ್ಗೆ ಮಾತನಾಡುವ ಬಿಜೆಪಿ ಸದಸ್ಯರು ತಮ್ಮ ಅವಧಿಯಲ್ಲಾಗಿರುವ ಹಗರಣಗಳ ಬಗ್ಗೆಯೂ ಗಂಭೀರವಾಗಿ ಮಾತನಾಡಿ ತನಿಖೆಗೆ ಆಗ್ರಹಿಸಬೇಕು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT