ಡಿ.ಕೆ ಶಿವಕುಮಾರ್ 
ರಾಜಕೀಯ

ಅಧಿಕಾರಿಗಳ ತಪ್ಪಿಗೆ ಸಿದ್ದರಾಮಯ್ಯ ಏಕೆ ರಾಜೀನಾಮೆ ನೀಡಬೇಕು?: ಡಿ.ಕೆ ಶಿವಕುಮಾರ್

ಬ್ಯಾಂಕ್​ ಅಧಿಕಾರಿ ಒಂದೇ ದಿನದಲ್ಲಿ ಆರೋಪಿಗಳಿಗೆ ಸಾಲ ಮಂಜೂರು ಮಾಡಿದ್ದಾರೆ. ಇದಕ್ಕೆ ಕೇಂದ್ರ ಹಣಕಾಸು ಸಚಿವರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆಯೇ?

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆಯಲ್ಲಿ ತಪ್ಪು ಮಾಡಿರುವುದು ಬ್ಯಾಂಕ್ ಮ್ಯಾನೇಜರ್. ಇದಕ್ಕೆ ಸಿದ್ದರಾಮಯ್ಯನವರು ಏಕೆ ರಾಜೀನಾಮೆ ಕೊಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಈ ಹಗರಣಕ್ಕೂ ಸಿದ್ದರಾಮಯ್ಯನವರಿಗೂ ಏನು ಸಂಬಂಧ?. ಅಧಿಕಾರಿ ತಪ್ಪು ಮಾಡಿದರೆ ಮುಖ್ಯಮಂತ್ರಿಗಳು ಹೇಗೆ ಜವಾಬ್ದಾರರಾಗುತ್ತಾರೆ?. ಬ್ಯಾಂಕ್​ ಅಧಿಕಾರಿ ಒಂದೇ ದಿನದಲ್ಲಿ ಆರೋಪಿಗಳಿಗೆ ಸಾಲ ಮಂಜೂರು ಮಾಡಿದ್ದಾರೆ. ಇದಕ್ಕೆ ಕೇಂದ್ರ ಹಣಕಾಸು ಸಚಿವರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆಯೇ? ಎಂದು ಹೇಳಿದರು. ಪ್ರತಿಪಕ್ಷಗಳಿಗೆ ಸದನದ ಕಲಾಪಗಳ ನಡಾವಳಿಗಳ ಕುರಿತು ತಿಳುವಳಿಕೆಯಿಲ್ಲ. ಅವರಿಗೆ ನಾವು ಮಾತನಾಡಲು ಅವಕಾಶ ನೀಡಿದ್ದೇವೆ. ಮುಖ್ಯಮಂತ್ರಿಗಳಿಗೆ ಮಾತನಾಡಲು ಅವಕಾಶ ನೀಡಬೇಕಿತ್ತು, ಆದರೆ ನೀಡಿಲ್ಲ. ಈ ವಿಚಾರದಲ್ಲಿ ಪ್ರತಿಪಕ್ಷಗಳು ರಾಜಕೀಯ ಮಾಡುತ್ತಿದ್ದು, ನಮಗೂ ರಾಜಕೀಯ ಮಾಡಲು ಬರುತ್ತದೆ ಎಂದು ತಿಳಿಸಿದರು.

ನಾವು ಯಾವುದೇ ತಪ್ಪು ಮಾಡಿಲ್ಲ. ಸರ್ಕಾರ ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ. ಕೆಲವು ಅಧಿಕಾರಿಗಳು ತಪ್ಪು ಮಾಡಿದ್ದು, ಇದನ್ನು ರಾಜಕೀಯವಾಗಿ ನಮ್ಮ ವಿರುದ್ಧ ಬಳಸಿಕೊಳ್ಳುತ್ತಿದ್ದಾರೆ. ಎಸ್​ಐಟಿ ರಚಿಸಿದ್ದೇವೆ. ಇಡಿ, ಸಿಬಿಐನಿಂದ ತನಿಖೆ ನಡೆಸಲಾಗುತ್ತಿದೆ. ದೊಡ್ಡ ಕಾರ್ಪೊರೇಟ್​​ ಕಂಪನಿಯಲ್ಲಿ ಯಾರೋ ನೌಕರ ತಪ್ಪು ಮಾಡುತ್ತಾನೆ. ಅದಕ್ಕೆ ಕಂಪನಿಯ ಮುಖ್ಯಸ್ಥನನ್ನು ಗುರಿ ಮಾಡಲು ಆಗುತ್ತದೆಯೇ? ಎಂದು ಇದೇ ವೇಳೆ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT