ರಾಜಕೀಯ

ಮುಡಾ, ವಾಲ್ಮೀಕಿ ನಿಗಮ ಹಗರಣ: ಸಿದ್ದರಾಮಯ್ಯ ಸಿಬಿಐ ತನಿಖೆ ಎದುರಿಸಬೇಕು- ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

'ಪಂಡಿತ್ ಜವಾಹರಲಾಲ್ ನೆಹರೂ ಅವರಿಂದ ಹಿಡಿದು ದೇಶದ ಎಲ್ಲ ಕಾಂಗ್ರೆಸ್ ಪ್ರಧಾನಿಗಳ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಭ್ರಷ್ಟಾಚಾರವನ್ನು ಈಗ ಹಗರಣಗಳು ಎಂದು ಕರೆಯಲಾಗುತ್ತಿದೆ. ಈಗ ಸಿದ್ದರಾಮಯ್ಯನವರ ಅವಧಿಯಲ್ಲಿ ವಾಲ್ಮೀಕಿ ನಿಗಮದಲ್ಲಿ ಹಗರಣ ನಡೆದಿದೆ.

ಬೆಳಗಾವಿ: 'ಕಾಂಗ್ರೆಸ್ ಪಕ್ಷದ ಡಿಎನ್‌ಎಯಲ್ಲಿ ಭ್ರಷ್ಟಾಚಾರ ಇದೆ. ಇದು ದೇಶದಲ್ಲಿ 'ರಕ್ತ-ಬಿಜಾಸುರ' ರೀತಿಯಲ್ಲಿ ಪ್ರಾರಂಭವಾಗಿದೆ. ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಡಿಎನ್‌ಎ ಹೊಂದಿದ್ದಾರೆ. ಅವರು ಮೊದಲು ರಾಜೀನಾಮೆ ನೀಡಬೇಕು ಮತ್ತು ಮುಡಾ ಮತ್ತು ವಾಲ್ಮೀಕಿ ನಿಗಮ ಹಗರಣದಲ್ಲಿ ಸಿಬಿಐ ತನಿಖೆ ಎದುರಿಸಬೇಕು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ಬೆಳಗಾವಿಯಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಪಂಡಿತ್ ಜವಾಹರಲಾಲ್ ನೆಹರೂ ಅವರಿಂದ ಹಿಡಿದು ದೇಶದ ಎಲ್ಲ ಕಾಂಗ್ರೆಸ್ ಪ್ರಧಾನಿಗಳ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಭ್ರಷ್ಟಾಚಾರವನ್ನು ಈಗ ಹಗರಣಗಳು ಎಂದು ಕರೆಯಲಾಗುತ್ತಿದೆ. ಈಗ ಸಿದ್ದರಾಮಯ್ಯನವರ ಅವಧಿಯಲ್ಲಿ ವಾಲ್ಮೀಕಿ ನಿಗಮದಲ್ಲಿ ಹಗರಣ ನಡೆದಿದೆ. ಆದರೆ, ಸಿದ್ದರಾಮಯ್ಯ ಯಾವುದೇ ಹಿಂಜರಿಕೆ ಮತ್ತು ನಾಚಿಕೆ ಇಲ್ಲದೆ ತಮ್ಮನ್ನು ಮತ್ತು ತಮ್ಮ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ ಎಂದರು.

ಅಧಿಕಾರಿಗಳಿಂದಲೇ ಹಗರಣ ನಡೆದಿದ್ದರೆ, ಸಚಿವ ನಾಗೇಂದ್ರ ರಾಜೀನಾಮೆ ಏಕೆ? ಎಸ್‌ಐಟಿಯಿಂದ ತನಿಖೆ ನಡೆಸುವ ಅಗತ್ಯ ಏನಿತ್ತು? ಎಂದು ಪ್ರಶ್ನಿಸಿದ ಜೋಶಿ, 'ಡೆತ್ ನೋಟ್‌ನಲ್ಲಿ ಸಚಿವ ನಾಗೇಂದ್ರ ಅವರ ಹೆಸರಿದ್ದು, ವ್ಯವಸ್ಥಾಪಕ ನಿರ್ದೇಶಕರು ಹಾಗೂ ಉದ್ಯೋಗಿಗಳ ಫೋನ್ ಸಂಭಾಷಣೆ ಸಾಬೀತಾಗಿದೆ. ಬ್ಯಾಂಕ್ ಅಧಿಕಾರಿಗಳು ಸರ್ಕಾರದ ನಿರ್ಣಯಗಳ ಮೇಲೆ ಕೆಲಸ ಮಾಡಿದ್ದಾರೆ. ಬ್ಯಾಂಕ್ ಉದ್ಯೋಗಿಗಳ ಕೈವಾಡವಿದ್ದರೆ, ಅವರನ್ನು ತನಿಖೆ ಮಾಡೋಣ. ಈ ಹಗರಣದ ಕುರಿತು ಕೇಂದ್ರ ತನಿಖಾ ಸಂಸ್ಥೆಯಿಂದ ನ್ಯಾಯಯುತ ಮತ್ತು ಪಾರದರ್ಶಕ ತನಿಖೆಗೆ ಸಿಎಂ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

ಮುಡಾ ಪ್ರಕರಣದಲ್ಲೂ ಅದೇ ಭ್ರಷ್ಟಾಚಾರ ನಡೆದಿದೆ. ಸಿಎಂ ಸಿದ್ದರಾಮಯ್ಯ ಅವರ ನೇರ ಪ್ರಭಾವ ಹಾಗೂ ಶಾಮೀಲಾಗಿ ಈ ಹಗರಣಗಳು ನಡೆದಿವೆ. ಅವರು ರಾಜೀನಾಮೆ ನೀಡಿ ಸಿಬಿಐ ತನಿಖೆ ಎದುರಿಸಬೇಕು ಮತ್ತು ಒಂದು ವೇಳೆ ಅವರಿಗೆ ಕ್ಲಿನ್ ಚಿಟ್ ದೊರೆತರೆ ಕಾಂಗ್ರೆಸ್ ಪಕ್ಷ ಅವರನ್ನು ಮತ್ತೆ ಸಿಎಂ ಮಾಡಬೇಕು' ಎಂದರು.

ಮಳೆಯಿಂದ ಮನೆ ಕುಸಿದ ಕುಟುಂಬಗಳಿಗೆ 5 ಲಕ್ಷ ರೂಪಾಯಿ ನೀಡುವ ಯೋಜನೆಯನ್ನು ಮುಂದುವರಿಸಲು ಸಾಧ್ಯವಿಲ್ಲ ಎನ್ನುತ್ತಿರುವ ಈ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿ ಇಲ್ಲ. ಈಗ ಕೇವಲ 1 ಲಕ್ಷ ರೂ. ನೀಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಯಾಗುತ್ತಿಲ್ಲ ಆದರೆ ಈ ಸರ್ಕಾರ ಇಂಧನ ಬೆಲೆ ಏರಿಕೆ ಮಾಡುವ ಮೂಲಕ ಜನರನ್ನು ಲೂಟಿ ಮಾಡಲು ಪ್ರಾರಂಭಿಸಿದೆ' ಎಂದು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

'ಹಸಿರು ಲ್ಯಾಂಬೊರ್ಗಿನಿ ಕಾರಲ್ಲಿ ಹೋಗಿ, ರಸ್ತೆ ಕಸ ಗುಡಿಸಿ ಬನ್ನಿ': ಸಂಚಾರ ನಿಯಮ ಉಲ್ಲಂಘಿಸಿ ದರ್ಪ ತೋರಿದ ಚಾಲಕನಿಗೆ ಹೈಕೋರ್ಟ್‌ ಶಿಕ್ಷೆ!

ಉಪಚುನಾವಣೆ ಗೆಲ್ಲುವ ಉಮೇದು: ಪ್ರಚಾರದಲ್ಲಿ ನಿರತರಾದ ಸಿಎಂ -ಡಿಸಿಎಂ; ನಿಯಂತ್ರಣ ಕಳೆದುಕೊಂಡ ಆಡಳಿತ ಯಂತ್ರ!

'ನನ್ನ ಹಣೆಬರಹ ಎಲ್ಲಿದೆಯೋ, ಜನ ಎಲ್ಲಿ ಗೆಲ್ಲಿಸ್ತಾರೋ ನೋಡೋಣ: ನಮ್ಮ ಸಂಖ್ಯೆ ನೋಡಿ ಅಪಹಾಸ್ಯ ಮಾಡಿದ್ದಾರೆ, 2028 ರಲ್ಲಿ ಸರ್ಕಾರ ರಚಿಸ್ತಿವಿ'

SCROLL FOR NEXT