ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹಕ್ಕು ಚ್ಯುತಿ ಮಂಡನೆ 
ರಾಜಕೀಯ

Karnataka Assembly Session: ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧ ಕಾಂಗ್ರೆಸ್ ಶಾಸಕ Pradeep Eshwar ಹಕ್ಕು ಚ್ಯುತಿ ಮಂಡನೆ

ಜುಲೈ 19ರಂದು ನಾನು ಮಾತನಾಡುವ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರು ನನ್ನನ್ನು ಅವಾಚ್ಯ ಶಬ್ದಗಳ ಬಳಕೆ ಮಾಡಿದ್ದಾರೆ ಮತ್ತು ನಾನು ಮಾತನಾಡದಂತೆ ಅಡ್ಡಿಪಡಿಸಿದ್ದಾರೆ. ಆದ್ದರಿಂದ ಅವರ ಮೇಲೆ ಹಕ್ಕುಚ್ಯುತಿ ಮಂಡಿಸಲು ಅನುಮತಿ ನೀಡಬೇಕು ಎಂದು ಪ್ರದೀಪ್‌ ಈಶ್ವರ್‌ ಮನವಿ ಮಾಡಿದ್ದಾರೆ.

ಬೆಂಗಳೂರು: ಪ್ರತಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ಚಿಕ್ಕಬಳ್ಳಾಪುರ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಸದನದಲ್ಲಿ (Assembly Session) ಸೋಮವಾರ ಹಕ್ಕು ಚ್ಯುತಿ ಮಂಡನೆ ಮಾಡಿದ್ದಾರೆ.

ಸದನದಲ್ಲಿ ಚರ್ಚೆ ವೇಳೆ ನಡೆದ ಗದ್ದಲದ ನಡುವೆ ಆರ್ ಅಶೋಕ್ ಅವರು ತಮ್ಮ ವಿರುದ್ಧ ಅವಾಚ್ಯ ಶಬ್ದಗಳ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ವಿಪಕ್ಷ ನಾಯಕ ಆರ್ ಅಶೋಕ್ ರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಪ್ರದೀಪ್‌ ಈಶ್ವರ್‌ ಸ್ಪೀಕರ್ ಯುಟಿ ಖಾದರ್ ಅವರನ್ನು ಒತ್ತಾಯಿಸಿದ್ದಾರೆ.

16ನೇ ವಿಧಾನ ಸಭೆಯ 4ನೇ ಅಧಿವೇಶನದಲ್ಲಿ ಜುಲೈ 19ರಂದು ನಾನು ಮಾತನಾಡುವ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರು ನನ್ನನ್ನು ಅವಾಚ್ಯ ಶಬ್ದಗಳ ಬಳಕೆ ಮಾಡಿದ್ದಾರೆ ಮತ್ತು ನಾನು ಮಾತನಾಡದಂತೆ ಅಡ್ಡಿಪಡಿಸಿದ್ದಾರೆ. ಆದ್ದರಿಂದ ಅವರ ಮೇಲೆ ಹಕ್ಕುಚ್ಯುತಿ ಮಂಡಿಸಲು ಅನುಮತಿ ನೀಡಬೇಕು ಎಂದು ಪ್ರದೀಪ್‌ ಈಶ್ವರ್‌ ಮನವಿ ಮಾಡಿದ್ದರು. ಹೀಗಾಗಿ ಹಕ್ಕು ಚ್ಯುತಿ ಮಂಡನೆಗೆ ಸ್ಪೀಕರ್ ಯು.ಟಿ. ಖಾದರ್‌ ಅನುಮತಿ ನೀಡಿದರು.

ಆರ್.ಆಶೋಕ್ ವಿರುದ್ಧ ಹಕ್ಕು ಚ್ಯುತಿ ಮಂಡನೆ ಮಾಡಿ ಮಾತನಾಡಿದ ಪ್ರದೀಪ್ ಈಶ್ವರ್, 'ಮೊದಲ ಬಾರಿ ಶಾಸಕರಾದಾಗ ಖುಷಿ ಪಡಲು ಆರ್. ಆಶೋಕ್ ಅವರ ತಂದೆ-ತಾಯಿ ಇದ್ದರು. ಆದರೆ, ನಾನು ಶಾಸಕನಾದಾಗ ಖುಷಿ ಪಡಲು ನನ್ನ ತಂದೆ-ತಾಯಿ ಇರಲಿಲ್ಲ. ನಾನು ತಂದೆ-ತಾಯಿ ಕಳೆದುಕೊಂಡು ಪೇರೆಸಂದ್ರ ಗ್ರಾಮದಲ್ಲಿ ದಿನಗೂಲಿ ಮಾಡಿ ದ್ದೇನೆ, ತೋಟಕ್ಕೆ ನೀರು ಹರಿಸಿದ್ದೇನೆ. ಶಾಸಕನಾದ ಬಳಿಕ ಜನರಿಗೆ ಅನುಕೂಲವಾಗಲು 10 ಉಚಿತ ಆಂಬ್ಯುಲೆನ್ಸ್ ನೀಡಿದ್ದೇನೆ.

ಅನೇಕ ಮಕ್ಕಳ ವಿಧ್ಯಾಭ್ಯಾಸಕ್ಕೆ ನೆರವಾಗಿದ್ದೇನೆ. ವಿದ್ಯಾರ್ಥಿಗಳಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೇನೆ. ಆರ್. ಆಶೋಕ್ ಅಣ್ಣಾನ ಬಗ್ಗೆ ನನಗೆ ಗೌರವ ಇದೆ, ಅವರು ಮಾತುಗಳ ಬಗ್ಗೆ ನನಗೆ ಉತ್ತರ ಕೊಡಲಿ ಎಂದು ಹೇಳಿದರು.

ಬಳಿಕ ಸ್ಪೀಕರ್ ಆರ್ ಅಶೋಕ್ ಅವರಿಗೆ ಸ್ಪಷ್ಟನೆ ನೀಡಲು ಅವಕಾಶ ನೀಡಿದ್ದು, ಈ ವೇಳೆ ಮಾತನಾಡಿದ ಪ್ರತಿಪಕ್ಷ ನಾಯಕ ಆರ್ ಅಶೋಕ್, 'ನಾನು ಯಾವುದೇ ತಪ್ಪು ಪದ ಬಳಕೆ ಮಾಡಿಲ್ಲ. ದಾಖಲೆ ತೆಗೆದು ನೋಡಿದರೆ ಗೊತ್ತಾಗುತ್ತದೆ. ಒಂದು ವೇಳೆ ಅವರ ಪ್ರಕಾರ ತಪ್ಪು ಮಾಡಿದ್ದೇನೆಂದು ಎನಿಸಿದರೆ ಪರಿಶೀಲನೆ ಮಾಡಲಿ, ಅವರು ಕೂಡ ಮಾತನಾಡುವ ಭರದಲ್ಲಿ ಬೇರೆ ಬೇರೆ ಭಾಷೆ ಬಳಸಿದ್ದಾರೆ. ಅದರ ಬಗ್ಗೆ ನಾವು ಚಕಾರ ಎತ್ತಿಲ್ಲ. ಪರಿಶೀಲನೆ ಮಾಡಿ ದಾಖಲೆಯಲ್ಲಿ ಇದ್ದರೆ ತೆಗೆದು ಹಾಕಿ, ನಮ್ಮ ಆಕ್ಷೇಪ ಇಲ್ಲ ಎಂದು ಹೇಳಿದರು.

ಇಬ್ಬರು ಸದಸ್ಯರ ಮಾತುಗಳನ್ನು ಆಲಿಸಿದ ಬಳಿಕ ಮಾತನಾಡಿದ ಸ್ಪೀಕರ್‌ ಖಾದರ್‌ ಅವರು, ಪ್ರದೀಪ್‌ ಈಶ್ವರ್‌ ಅವರು ತಮ್ಮ ವಿಚಾರಗಳನ್ನು ಹೇಳಿದ್ದಾರೆ. ಅಶೋಕ್‌ ಅವರು ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಈಗ ನಾನು ಕಲಾಪದ ವಿಡಿಯೊ ತರಿಸಿಕೊಂಡು ಪರಿಶೀಲನೆ ಮಾಡಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

25 ಕೋಟಿ ಅನುದಾನ ಬಗ್ಗೆ ಮಾಹಿತಿ ನೀಡಲಿ ಎಂದ ಸಿಮೆಂಟ್ ಮಂಜು

ಈ ವೇಳೆ ಸಿಮೆಂಟ್ ಮಂಜು ಮಾತನಾಡಿ, ಒಬ್ಬ ಶಾಸಕನಿಗೆ ಸಿಎಂ 25 ಕೋಟಿ ಅನುದಾನ ನೀಡಿದ್ದಾರೆ ಅಂತ ಪ್ರದೀಪ್ ಈಶ್ವರ್ ಸೋಶಿಯಲ್ ಮೀಡಿಯಾದಲ್ಲಿ ಹಾಕಿದ್ದಾರೆ. ಯಾರಿಗೆ ಕೊಟ್ಟಿದ್ದಾರೆ ಉತ್ತರ ಕೊಡಲಿ ಎಂದು ಆಗ್ರಹಿಸಿದರು. ಇದಕ್ಕೆ ಸ್ಪೀಕರ್‌ ಪ್ರತಿಕ್ರಿಯಿಸಿ, ಸೋಶಿಯಲ್ ಮೀಡಿಯಾದಲ್ಲಿ ಹಾಕಿದ ವಿಚಾರ ಚರ್ಚೆ ಮಾಡಲು ಆಗಲ್ಲ ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದುಬೈ ಏರ್ ಶೋ ವೇಳೆ ದುರಂತ; ಭಾರತದ ತೇಜಸ್ ಯುದ್ಧ ವಿಮಾನ ಪತನ, ಪೈಲಟ್ ಸಾವು! ತನಿಖೆಗೆ IAF ಆದೇಶ

Asia Cup Rising stars: ಸೂಪರ್ ಓವರ್ ನಲ್ಲಿ ಮುಗ್ಗರಿಸಿದ ಭಾರತ, ವೈಭವ್ ಸೂರ್ಯವಂಶಿಯನ್ನು ಯಾಕೆ ಬ್ಯಾಟಿಂಗ್ ಗೆ ಕಳುಹಿಸಲಿಲ್ಲ? ಅಭಿಮಾನಿಗಳ ಆಕ್ರೋಶ

News headlines 21-11-2025| CM ಬದಲಾವಣೆ ವಿಷಯ; ಶಾಸಕರಿಗೆ ಹೈಕಮಾಂಡ್ ಮಹತ್ವದ ಸೂಚನೆ; ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ.50 ರಿಯಾಯಿತಿ; ಹಡಗು ನಿರ್ಮಾಣ, ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಇಬ್ಬರ ಬಂಧನ

ರಾಜ್ಯ ರಾಜಕಾರಣದಲ್ಲಿ ದಿಢೀರ್ ಬೆಳವಣಿಗೆ; ಶಾಸಕರಿಗೆ ಡಿಸಿಎಂ ಗಾಳ?: ಪರಪ್ಪನ ಅಗ್ರಹಾರಕ್ಕೆ ಡಿಕೆ ಶಿವಕುಮಾರ್ ಭೇಟಿ!

ಸ್ಥಳೀಯ ಸಂಸ್ಥೆ ಚುನಾವಣೆ: ಮಹಾ ಸಿಎಂ ಫಡ್ನವೀಸ್, ಇಬ್ಬರು ಸಚಿವರ ಸಂಬಂಧಿ ಅವಿರೋಧ ಆಯ್ಕೆ; ಪ್ರತಿಪಕ್ಷ ಕಿಡಿ

SCROLL FOR NEXT