ಡಿಕೆ ಶಿವಕುಮಾರ್-ಆರ್ ಅಶೋಕ್ 
ರಾಜಕೀಯ

ರಾಜ್ಯದ ಇಂಜಿನೀಯರ್ ಗಳು ಮನೆ ಹಾಳರು: ತಮ್ಮ ಹೇಳಿಕೆಗೆ ಅಶೋಕ ಕ್ಷಮೆ ಕೇಳಲಿ- ಡಿ.ಕೆ ಶಿವಕುಮಾರ್

ಅಣೆಕಟ್ಟೆಗಳು, ವಿದ್ಯುತ್ ಯೋಜನೆಗಳು, ಬೃಹತ್ ಕಟ್ಟಡಗಳು, ಐಟಿಬಿಟಿ ಕ್ಷೇತ್ರ ಸೇರಿದಂತೆ ನಾಡಿನ ಅಭಿವೃದ್ಧಿಗೆ ಅನೇಕ ಕ್ಷೇತ್ರಗಳಲ್ಲಿ ಎಂಜಿನಿಯರ್‌ಗಳು ಸಾಕಷ್ಟು ಕೊಡುಗೆ ನೀಡಿದ್ದಾರೆ. ರಾಜ್ಯ ಮತ್ತು ದೇಶದ ಪ್ರಗತಿಯ ರೂವಾರಿಗಳನ್ನು ಮನೆಹಾಳರು ಎಂದು ಕರೆದಿರುವುದು ಸರಿಯಲ್ಲ ಎಂದರು.

ಬೆಂಗಳೂರು: ರಾಜ್ಯದ ಎಂಜಿನಿಯರ್‌ಗಳನ್ನು ಮನೆಹಾಳರು ಎಂದು ವಿಧಾನಸಭೆಯಲ್ಲಿ ನಿಂದಿಸಿರುವ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಅವರು ತಕ್ಷಣ ಎಂಜಿನಿಯರ್‌ಗಳ ಕ್ಷಮೆ ಕೇಳಬೇಕು. ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಕರ್ನಾಟಕ ಎಂಜಿನಿಯರ್‌ಗಳ ಸಂಘದ ಗೌರವ ಅಧ್ಯಕ್ಷ ದೇವರಾಜ್ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಡಿ.ಕೆ. ಶಿವಕುಮಾರ್‌ ಅವರನ್ನು ವಿಧಾನಸೌಧದಲ್ಲಿ ಬುಧವಾರ ಭೇಟಿ ಮಾಡಿ, ತಮ್ಮ ಹೇಳಿಕೆಯನ್ನು ಅಶೋಕ ಅವರು ಹಿಂತೆಗೆದುಕೊಳ್ಳುವಂತೆ ಒತ್ತಡ ತರಬೇಕೆಂದು ಮನವಿ ಮಾಡಿದರು.

ಅಣೆಕಟ್ಟೆಗಳು, ವಿದ್ಯುತ್ ಯೋಜನೆಗಳು, ಬೃಹತ್ ಕಟ್ಟಡಗಳು, ಐಟಿಬಿಟಿ ಕ್ಷೇತ್ರ ಸೇರಿದಂತೆ ನಾಡಿನ ಅಭಿವೃದ್ಧಿಗೆ ಅನೇಕ ಕ್ಷೇತ್ರಗಳಲ್ಲಿ ಎಂಜಿನಿಯರ್‌ಗಳು ಸಾಕಷ್ಟು ಕೊಡುಗೆ ನೀಡಿದ್ದಾರೆ. ರಾಜ್ಯ ಮತ್ತು ದೇಶದ ಪ್ರಗತಿಯ ರೂವಾರಿಗಳನ್ನು ಮನೆಹಾಳರು ಎಂದು ಕರೆದಿರುವುದು ಸರಿಯಲ್ಲ ಎಂದರು. ಅಶೋಕ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಡಿ.ಕೆ. ಶಿವಕುಮಾರ್‌, ಎಂಜಿನಿಯರ್‌ಗಳನ್ನು ಅವಹೇಳನ ಮಾಡಿರುವ ಹೇಳಿಕೆಯನ್ನು ಹಿಂದಕ್ಕೆ ಪಡೆಯುವಂತೆ ಮನವಿ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT