ಎಚ್. ಡಿ. ಕುಮಾರಸ್ವಾಮಿ 
ರಾಜಕೀಯ

ರಾಮನ ಹೆಸರು ತೆಗೆಯಲು ಸಾಧ್ಯವಿಲ್ಲ, 2028ರೊಳಗೆ ಮತ್ತೆ ರಾಮನಗರವಾಗುತ್ತೆ: ಎಚ್​ಡಿ ಕುಮಾರಸ್ವಾಮಿ

ರಾಮನಗರದ ಇತಿಹಾಸ ಅವರಿಗೆ ಗೊತ್ತಿದ್ಯಾ? ರಾಮನಗರ ಈಗಾಗಲೇ ಅಭಿವೃದ್ಧಿ ಆಗಿದೆ. ಹೆಸರು ಬದಲಿಸಿ ಭೂಮಿ ಬೆಲೆ ಏರಿಸಬೇಕಾ?

ರಾಮನಗರ: ರಾಜ್ಯ ಸರ್ಕಾರ ರಾಮನಗರ ಹೆಸರು ಬದಲಾವಣೆ ಮಾಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಅವರು, ರಾಮನ ಹೆಸರು ತೆಗೆದು ಹಾಕುವುದಕ್ಕೆ ಸಾಧ್ಯವಿಲ್ಲ. 2028ರೊಳಗೆ ಮತ್ತೆ ರಾಮನಗರ ಅಂತಾ ಆಗುತ್ತದೆ ಎಂದು ಶುಕ್ರವಾರ ಹೇಳಿದ್ದಾರೆ.

ಇಂದು ದೆಹಲಿಯಲ್ಲಿ ರಾಮನಗರ ಹೆಸರು ಬದಲಾವಣೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿರುವುದಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಿಎಂ, ಅವರು ಸ್ವಲ್ಪ ದಿನ ಖುಷಿಯಾಗಿರಲಿ. ರಾಜಕೀಯ ಪತನ ಆರಂಭವಾಗಿದೆ. ಜಿಲ್ಲೆಯ ಹೆಸರು ಬದಲಿಸಲು ಅರ್ಜಿ ಕೊಟ್ಟವ ಯಾರು? ಹೆಸರು ಬದಲಿಸುವುದರಿಂದ ಏನು ಸಿಗುತ್ತೆ ಎಂದು ವಾಗ್ದಾಳಿ ನಡೆಸಿದರು.

ರಾಮನಗರದ ಇತಿಹಾಸ ಅವರಿಗೆ ಗೊತ್ತಿದ್ಯಾ? ರಾಮನಗರ ಈಗಾಗಲೇ ಅಭಿವೃದ್ಧಿ ಆಗಿದೆ. ಹೆಸರು ಬದಲಿಸಿ ಭೂಮಿ ಬೆಲೆ ಏರಿಸಬೇಕಾ? ಕಾನೂನು ಸುವ್ಯವಸ್ಥೆ ಹೇಗಿದೆ ನೋಡಬೇಕು? ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿಡದೇ ಏನು ಅಭಿವೃದ್ಧಿ ಮಾಡಿದ್ರೆ ಏನು ಪ್ರಯೋಜನ ಬಂತು ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಇನ್ನು ತಾವೂ ಮುಡಾದಲ್ಲಿ ಸೈಟ್ ಪಡೆದ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಸರ್ಕಾರ ನನ್ನ ಹೆಸರನ್ನು ದುರ್ಬಳಕೆ ಮಾಡುತ್ತಿರುವುದು ಆಶ್ಚರ್ಯವನ್ನುಂಟು ಮಾಡುತ್ತಿದೆ. ಸಿದ್ದರಾಮಯ್ಯನವರ ಕುಟುಂಬಕ್ಕೆ ಅಕ್ರಮವಾಗಿ ನಿವೇಶನ ಹಂಚಿಕೆಯಾಗಿರುವುದರಿಂದ, ಅದರಿಂದ ಪಾರಾಗಲು ನನ್ನ ಹೆಸರನ್ನು ಬಳಸಿಕೊಳ್ಳುತ್ತಿದ್ದಾರೆ " ಎಂದು ತಿರುಗೇಟು ನೀಡಿದರು.

1984ರಲ್ಲಿ ಸಿಐಟಿಬಿ ಎಂದು ಇತ್ತು, ಮುಡಾ ಎನ್ನುವ ಹೆಸರು ಇರಲಿಲ್ಲ. ನನಗೆ 21,000 ಚದರ ಅಡಿ ಕೈಗಾರಿಕಾ ಜಮೀನನ್ನು ನೀಡಿತ್ತು. ಆ ವೇಳೆ ನಾನು 33 ಸಾವಿರ ಅದಕ್ಕೆ ಪಾವತಿ ಮಾಡಿದ್ದೆ. ನನಗೆ ಸ್ವಾಧೀನ ಪತ್ರವನ್ನು ನೀಡಲಾಗಿತ್ತು. ಆದರೆ, ನಿವೇಶನ ನೋಡಲು ಹೋದರೆ, ಅಲ್ಲಿ ನಿವೇಶನವೇ ಇರಲಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇಂದಿಗೆ ನಲವತ್ತು ವರ್ಷವಾದರೂ, ನನಗೆ ಬದಲಿ ನಿವೇಶನ ನೀಡಲಾಗಿಲ್ಲ. ಒಂದು ವೇಳೆ, ಬದಲಿ ನಿವೇಶನ ಕೊಟ್ಟಿದ್ದೇ ಆದಲ್ಲಿ, ನಾನು ಅದನ್ನು ಮುಖ್ಯಮಂತ್ರಿಗಳಿಗೆ ಗಿಫ್ಟ್ ಕೊಡುತ್ತೇನೆ. ಅವರು ಅದನ್ನು ಪಡೆದುಕೊಂಡು ಎಂಜಾಯ್ ಮಾಡಲಿ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

SCROLL FOR NEXT