ಡಿಸಿಎಂ ಡಿಕೆ ಶಿವಕುಮಾರ್ 
ರಾಜಕೀಯ

ರಾಮನಗರ ಜಿಲ್ಲೆ ಮರು ನಾಮಕರಣದಿಂದ ಅಭಿವೃದ್ಧಿಗೆ 'ಬ್ರಾಂಡ್ ಬೆಂಗಳೂರು' ಬಳಕೆ- ಡಿಕೆ ಶಿವಕುಮಾರ್

''ಜಿಲ್ಲಾ ಕೇಂದ್ರವಾದ ರಾಮನಗರದ ಹೆಸರನ್ನು ಸರ್ಕಾರ ಬದಲಾಯಿಸುತ್ತಿಲ್ಲ. ರಾಮನಗರ, ಚನ್ನಪಟ್ಟಣ, ಕನಕಪುರ ಮತ್ತು ಮಾಗಡಿ ನಾಲ್ಕು ತಾಲ್ಲೂಕುಗಳನ್ನು ಒಳಗೊಂಡಿರುವ ಜಿಲ್ಲೆಯನ್ನು ಮಾತ್ರ ಬದಲಾಯಿಸಲಾಗುವುದು''

ಬೆಂಗಳೂರು: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡುವ ಸರ್ಕಾರದ ನಿರ್ಧಾರವು ಮುಂದಿನ ಪೀಳಿಗೆಗೆ ಹೊಸ ದಿಕ್ಕನ್ನು ನೀಡಲು ಮತ್ತು ಪ್ರದೇಶಕ್ಕೆ ಅಭಿವೃದ್ಧಿಯನ್ನು ತರಲು 'ಬ್ರಾಂಡ್ ಬೆಂಗಳೂರು' ಬಳಸಿಕೊಳ್ಳುತ್ತಿರುವುದಾಗಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಶನಿವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಕೇಂದ್ರವಾದ ರಾಮನಗರದ ಹೆಸರನ್ನು ಸರ್ಕಾರ ಬದಲಾಯಿಸುತ್ತಿಲ್ಲ. ರಾಮನಗರ, ಚನ್ನಪಟ್ಟಣ, ಕನಕಪುರ ಮತ್ತು ಮಾಗಡಿ ನಾಲ್ಕು ತಾಲ್ಲೂಕುಗಳನ್ನು ಒಳಗೊಂಡಿರುವ ಜಿಲ್ಲೆಯನ್ನು ಮಾತ್ರ ಬದಲಾಯಿಸಲಾಗುವುದು ಎಂದು ಹೇಳಿದರು. ನಾವು ರಾಮನಗರ ಪಟ್ಟಣದ ಹೆಸರನ್ನು ಮುಟ್ಟುತ್ತಿಲ್ಲ. ಬೆಂಗಳೂರು ನಮ್ಮ ಜಿಲ್ಲೆ. ರಾಮನಗರ, ಚನ್ನಪಟ್ಟಣ, ಕನಕಪುರ ಮತ್ತು ಮಾಗಡಿ ತಾಲೂಕಿನಲ್ಲಿ ವಾಸಿಸುತ್ತಿರುವವರು ನಮ್ಮ ಜನ. ನಮ್ಮದು ಬೆಂಗಳೂರು, ರಾಮನಗರ ಅಲ್ಲ ಎಂದು ಅವರು ತಿಳಿಸಿದರು.

ರಾಮನಗರದ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾಯಿಸಲು ರಾಜ್ಯ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ. ಇಂದು ಬೆಂಗಳೂರು ವಿಶ್ವಾದ್ಯಂತ ಪ್ರಸಿದ್ಧವಾಗಿದೆ. ನಮ್ಮ ಪೂರ್ವಜರು ಇಟ್ಟ ಹೆಸರನ್ನು ನಾವೇಕೆ ಹಾಳು ಮಾಡಬೇಕು? ಎಂದು ಪ್ರಶ್ನಿಸಿದ ಶಿವಕುಮಾರ್, ಉದ್ದೇಶಿತ ಬೆಂಗಳೂರು ದಕ್ಷಿಣ ಜಿಲ್ಲೆಗೆ ರಾಮನಗರವೇ ಕೇಂದ್ರ ಸ್ಥಾನವಾಗಿ ಉಳಿಯಬೇಕು ಎಂದರು. ಹೆಸರು ಬದಲಾವಣೆಯ ಹಿಂದಿನ ಕಾರಣವನ್ನು ವಿವರಿಸಿದ ಅವರು, ನಮ್ಮ ಮುಂದಿನ ಪೀಳಿಗೆಗೆ ಹೊಸ ದಿಕ್ಕು, ಉತ್ತಮ ಆಲೋಚನೆಗಳು, ಹೊಸ ಆಲೋಚನೆಗಳು ಮತ್ತು ಅವರ ಅಭಿವೃದ್ಧಿಯನ್ನು ನೀಡಲು ನಾವು ಯೋಚಿಸುತ್ತಿದ್ದೇವೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT