ಸಿ ಟಿ ರವಿ  
ರಾಜಕೀಯ

ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಸಿ ಟಿ ರವಿ ಸೇರಿ ಮೂವರಿಗೆ ಸ್ಥಾನ

ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್​ ಗೆ ನಡೆಯಲಿರುವ ಚುನಾವಣೆಗೆ ನಾಪಮತ್ರ ಸಲ್ಲಿಸಲು ನಾಳೆ ಕೊನೆದಿನವಾಗಿದ್ದು, ನಾಮಪತ್ರ ಸಲ್ಲಿಸಲು ಕೊನೆ ದಿನಕ್ಕೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್​ ಗೆ ನಡೆಯಲಿರುವ ಚುನಾವಣೆಗೆ ನಾಪಮತ್ರ ಸಲ್ಲಿಸಲು ನಾಳೆ ಕೊನೆದಿನವಾಗಿದ್ದು, ನಾಮಪತ್ರ ಸಲ್ಲಿಸಲು ಕೊನೆ ದಿನಕ್ಕೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಬಿಜೆಪಿಯಿಂದ ಸ್ಪರ್ಧೆಗೆ ಮಾಜಿ ಸಚಿವ ಸಿ.ಟಿ ರವಿ, ಎನ್. ರವಿಕುಮಾರ್ ಮತ್ತು ಎಂ.ಜಿ ಮೂಳೆ ಅವರಿಗೆ ಅವಕಾಶ ಸಿಕ್ಕಿದೆ. ಒಟ್ಟು 11 ಕ್ಷೇತ್ರಗಳ ಪೈಕಿ ಬಿಜೆಪಿ ಸಂಖ್ಯಾಬಲದ ಆಧಾರದ ಮೇಲೆ ಮೂರು ಸ್ಥಾನಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯವಿದೆ. ಹೀಗಾಗಿ ಮೂರು ಅಭ್ಯರ್ಥಿಗಳನ್ನು ಘೋಷಿಸಿದ್ದು, ಎನ್​ ರವಿ ಕುಮಾರ್ ಅವರಿಗೆ ಮತ್ತೊಮ್ಮೆ ಅವಕಾಶ ಸಿಕ್ಕಿದೆ.

ಲೋಕಸಭೆ ಚುನಾವಣೆಯಲ್ಲಿ ಚಿಕ್ಕಮಗಳೂರು ಟಿಕೆಟ್ ಮೇಲೆ ಆಸೆಯಿರಿಸಿ ನಿರಾಸೆಯಾಗಿದ್ದ ಸಿಟಿ ರವಿ ಅವರಿಗೆ ಬಂಪರ್ ಗಿಫ್ಟ್​ ಸಿಕ್ಕಿದೆ. ಆದರೆ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಮಂಡ್ಯ ಲೋಕಸಭಾ ಸ್ಥಾನ ತ್ಯಾಗ ಮಾಡಿದ್ದ ಸುಮಲತಾ ಅಂಬರೀಶ್​ಗೆ ಕೊನಗೂ ಅವಕಾಶ ಸಿಕ್ಕಿಲ್ಲ.

ವಿಧಾನಸಭೆ ಚುನಾವಣೆಯಲ್ಲಿ ಸೋಲುಕಂಡಿರುವ ಸಿಟಿ ರವಿ ಅವರನ್ನು ವಿಧಾನ ಪರಿಷತ್​ಗೆ ಕಳುಹಿಸುವ ಬಗ್ಗೆ ವ್ಯಾಪಕ ಚರ್ಚೆ ನಡೆದಿತ್ತು. ಈ ಬಗ್ಗೆ ಪರೋಕ್ಷವಾಗಿ ಇತ್ತೀಚೆಗೆ ಸ್ವತಃ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರೇ ಹೇಳಿದ್ದರು. ಅಲ್ಲದೇ ಕೋರ್​ ಕಮಿಟಿ ಸಭೆಯಲ್ಲೂ ಸಹ ಪಟ್ಟಿಯಲ್ಲಿ ಸಿಟಿ ರವಿ ಹಾಗೂ ಲೋಕಸಭಾ ಟಿಕೆಟ್​ ವಂಚಿತ ಸದಾನಂದಗೌಡ, ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವರ ಹೆಸರುಗಳನ್ನು ಸಹ ಹೈಕಮಾಂಡ್​ಗೆ ಕಳುಹಿಸಲಾಗಿತ್ತು. ಅಂತಿಮವಾಗಿ ಹೈಕಮಾಂಡ್​ ಸಿಟಿ ರವಿಗೆ ಅವರಿಗೆ ಅವಕಾಶ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT