ಶಾಸಕ ಮುನಿರತ್ನ 
ರಾಜಕೀಯ

2 ಲಕ್ಷ ಮತಗಳ ಅಂತರದಿಂದ ಡಾ.ಮಂಜುನಾಥ್ ಗೆಲುವು ಖಚಿತ: ಕನಕಪುರದಲ್ಲಿ ಸೆಕ್ಯುರಿಟಿ ಹೆಚ್ಚಿಸಿ; ಮುನಿರತ್ನ

ದೇಶಾದ್ಯಂತ ಲೋಕಸಭೆ ಚುನಾವಣೆ ಮತ ಎಣಿಕೆ ಮುಂದುವರಿದಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಡಾ ಮಂಜುನಾಥ್ ಅವರು ಸದ್ಯ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಬೆಂಗಳೂರು: ದೇಶಾದ್ಯಂತ ಲೋಕಸಭೆ ಚುನಾವಣೆ ಮತ ಎಣಿಕೆ ಮುಂದುವರಿದಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಡಾ ಮಂಜುನಾಥ್ ಅವರು ಸದ್ಯ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಮಧ್ಯಾಹ್ನ ಒಂದು ಗಂಟೆ ವೇಳೆ ಅದು ಮೂರು ಪಟ್ಟು ಹೆಚ್ಚಾಗುತ್ತದೆ ದೊಡ್ಡಮಟ್ಟದ ಲೀಡ್ ನಲ್ಲಿ ಗೆಲ್ಲುತ್ತಾರೆ ಎಂದು ಬಿಜೆಪಿ ಶಾಸಕ ಮುನಿರತ್ನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂಜಿದೆಗ ಮಾತನಾಡಿದ ಮುನಿರತ್ನ, ಬೆಂಗಳೂರು ಗ್ರಾಮಾಂತರದಲ್ಲಿ ಡಾ ಮಂಜುನಾಥ ಗೆಲುವು ನಿಶ್ಚಿತ. ರಾಜರಾಜೇಶ್ವರಿನಗರ, ಬೆಂಗಳೂರು ದಕ್ಷಿಣದಲ್ಲಿ ನಮ್ಮ ಪಕ್ಷದ ಶಕ್ತಿ ಹೆಚ್ಚಿದೆ. ಈಗಾಗಲೇ ಅರ್ಧ ಮತ ಎಣಿಕೆ ಮುಗಿದಿದೆ.ಬೆಂಗಳೂರು ಗ್ರಾಮಾಂತರದಲ್ಲಿ ಮಂಜುನಾಥ್ ಅವರ 2 ಲಕ್ಷ ಮತಗಳ ಅಂತರದಿಂದ ಗೆಲ್ಲತ್ತಾರೆ. ಹೀಗಾಗಿ ಕನಕಪುರದಲ್ಲಿ ಸೆಕ್ಯುರಿಟಿ ಹೆಚ್ಚಿಸಿ ಎಂದು ಹೇಳಿದ್ದಾರೆ.

ಈ ಹಿಂದೆಯೇ ಚುನಾವಣಾ ಆಯೋಗಕ್ಕೆ ನಾವು ಮನವಿ ಮಾಡಿದ್ದೇವೆ. ಸ್ವತಃ ಡಾ ಮಂಜುನಾಥ ಅವರು ಕೂಡ ಶಾಂತಿ ಕಾಪಾಡಲು ಭದ್ರತೆ ಕೈಗೊಳ್ಳುವಂತೆ ಮನವಿ ಮಾಡಿದ್ದರು ಎಂದರು. ಇದೀಗ ಮಂಜುನಾಥ ಅವರು ಭಾರೀ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಗೆಲುವು ಸಾಧಿಸಲಿರುವ ಹಿನ್ನೆಲೆ ಬಿಜೆಪಿ ಕಚೇರಿಗೆ ಕಾರ್ಯಕರ್ತರು ಜಮಾವಣೆ ಆಗುತ್ತಿದ್ದಾರೆ. ಕ್ಷಣ ಕ್ಷಣಕ್ಕೂ ಕಾರ್ಯಕರ್ತರು ಹೆಚ್ಚುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT