ವೇಣುಗೋಪಾಲ್ ನಾಯಕ- ನರಸಿಂಹ ನಾಯಕ 
ರಾಜಕೀಯ

ಸುರಪುರ ಉಪ ಚುನಾವಣೆ ಫಲಿತಾಂಶ: ಕಾಂಗ್ರೆಸ್ ಗೆ ಭಾರಿ ಮುನ್ನಡೆ, ರಾಜುಗೌಡಗೆ ತೀವ್ರ ಹಿನ್ನಡೆ

ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯ ಮತ ಏಣಿಕೆ ಪ್ರಗತಿಯಲ್ಲಿದ್ದು, ಕಾಂಗ್ರೆಸ್​ ಅಭ್ಯರ್ಥಿ ವೇಣುಗೋಪಾಲ್ ನಾಯಕ ಅವರು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.

ಬೆಂಗಳೂರು​: ಲೋಕಸಭಾ ಚುನಾವಣೆ ಜೊತೆಗೆ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯ ಮತ ಏಣಿಕೆ ಪ್ರಗತಿಯಲ್ಲಿದ್ದು, ಕಾಂಗ್ರೆಸ್​ ಅಭ್ಯರ್ಥಿ ವೇಣುಗೋಪಾಲ್ ನಾಯಕ ಅವರು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.

21ನೇ ಸುತ್ತಿನ ಮತ ಏಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಅವರು 107162 ಮತಗಳನ್ನು ಪಡೆದಿದ್ದು, ಎದುರಾಳಿ ಅಭ್ಯರ್ಥಿಗಳಿಗಿಂತ 17955 ಮತಗಳ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ನರಸಿಂಹ ನಾಯಕ(ರಾಜುಗೌಡ) 89207 ಮತಗಳನ್ನು ಪಡೆದಿದ್ದಾರೆ.

ಕಳೆದ ಫೆಬ್ರವರಿಯಲ್ಲಿ ಸುರಪುರದ ಕಾಂಗ್ರೆಸ್​​ ಶಾಸಕ ರಾಜ ವೆಂಕಟಪ್ಪ ನಾಯಕ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಈ ಕ್ಷೇತ್ರಕ್ಕೆ ಲೋಕಸಭೆ ಚುನಾವಣೆ ಜೊತೆಗೆ ಉಪ ಚುನಾವಣೆ ನಡೆದಿತ್ತು. ಕ್ಷೇತ್ರ ಉಳಿಸಿಕೊಳ್ಳಲು ಕಾಂಗ್ರೆಸ್​ ಭರ್ಜರಿ ಪ್ರಚಾರ ನಡೆಸಿತ್ತು ಮತ್ತು ಬಿಜೆಪಿ ಕೂಡ ಕ್ಷೇತ್ರ ಉಳಿಸಿಕೊಳ್ಳುವ ಸಲುವಾಗಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಪ್ರಚಾರ ನಡೆಸಿದ್ದರು.

ಕಾಂಗ್ರೆಸ್ ರಾಜಾ ವೆಂಕಟಪ್ಪ ನಾಯಕ್ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ್​ ಅವರನ್ನೇ ಕಣಕ್ಕೆ ಇಳಿಸಿ ಅನುಕಂಪದ ಮತ ಪಡೆಯುವಲ್ಲಿ ಯಶಸ್ವಿಯಾಗಿದೆ.

2023ರಲ್ಲಿ ನಡೆದ ವಿಧಾಸಭೆ ಚುನಾವಣೆಯಲ್ಲಿ ರಾಜಾ ವೇಣುಗೋಪಾಲ ನಾಯಕ್​ ತಂದೆ, ದಿ. ರಾಜಾ ವೆಂಕಟಪ್ಪ ನಾಯಕ್​ ಅವರು 1,13,559 ಮತಗಳನ್ನು ಪಡೆದು ಗೆಲವು ಸಾಧಿಸಿದ್ದರು. ಬಿಜೆಪಿಯ ರಾಜುಗೌಡ 88,336 ಮತಗಳನ್ನು ತಮ್ಮದಾಗಿಸಿಕೊಂಡಿದ್ದರು. ರಾಜಾ ವೆಂಕಟಪ್ಪ ನಾಯಕ್​ ಅವರು ರಾಜುಗೌಡ ಅವರನ್ನು 25 ಸಾವಿರ ಮತಗಳ ಅಂತರದಿಂದ ಸೋಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT