ಆದಿಚುಂಚನಗಿರಿ ಮಠಕ್ಕೆ ಹೆಚ್.ಡಿ ಕುಮಾರಸ್ವಾಮಿ ಭೇಟಿ 
ರಾಜಕೀಯ

ಚುನಾವಣಾ ಫಲಿತಾಂಶ ಬೆನ್ನಲ್ಲೇ ಆದಿಚುಂಚನಗಿರಿ ಮಠಕ್ಕೆ ಹೆಚ್.ಡಿ ಕುಮಾರಸ್ವಾಮಿ ಭೇಟಿ

ಬಹುನಿರೀಕ್ಷಿತ ಲೋಕಸಭಾ ಚುನಾವಣೆ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಇನ್ನು ಕೆಲವೇ ಕ್ಷಣಗಳಲ್ಲಿ ಎಲ್ಲಾ ಅಭ್ಯರ್ಥಿಗಳ ಭವಿಷ್ಯ ಹೊರಬೀಳಲಿದೆ.

ಬೆಂಗಳೂರು: ಬಹುನಿರೀಕ್ಷಿತ ಲೋಕಸಭಾ ಚುನಾವಣೆ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಇನ್ನು ಕೆಲವೇ ಕ್ಷಣಗಳಲ್ಲಿ ಎಲ್ಲಾ ಅಭ್ಯರ್ಥಿಗಳ ಭವಿಷ್ಯ ಹೊರಬೀಳಲಿದೆ.

ಇದರ ಬೆನ್ನಲ್ಲೇ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು ವಿಜಯನಗರದ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಮಠದ ಆವರಣದಲ್ಲಿರುವ ಗಂಗಾಧರೇಶ್ವರ ದೇವಾಲಯದಲ್ಲಿ ಡಾ.ನಿರ್ಮಲಾನಂದ ಶ್ರೀಗಳ) ಸಮ್ಮುಖದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ವಿಶೇಷ ಮಂಗಳಾರತಿ ಮಾಡಿಸಿ, ಶ್ರೀಗಳ ಆಶೀರ್ವಾದ ಪಡೆದುಕೊಂಡರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಕ್ಷೇತ್ರದ ಜನತೆ ನನಗೆ ಆಶೀರ್ವಾದ ಮಾಡುತ್ತಾರೆ. ಎಕ್ಸಿಟ್​ ಪೋಲ್​​ ಸರ್ವೆ ಶೇ 90ರಷ್ಟು ಸತ್ಯವಾಗಲಿದೆ. ರಾಜ್ಯದಲ್ಲಿ 25 ಸ್ಥಾನಗಳಲ್ಲಿ, ದೇಶದಲ್ಲಿ ಎನ್​ಡಿಎ ಹೆಚ್ಚು ಸ್ಥಾನಗಳು ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.

ದೇಶದಲ್ಲಿ ಭರ್ಜರಿ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಮಂಡ್ಯದಲ್ಲಿ ಪೋಸ್ಟಲ್ ಬ್ಯಾಲೆಟ್ ಶುರುವಾಗಿದೆ. ಕೊನೆಯ ಹಂತದವರೆಗೂ ಮುನ್ನಡೆಯಲ್ಲಿ ಇರುತ್ತೇನೆ. ನಾನು ಚುನಾವಣೆ ಶುರುವಿನಿಂದಲೂ ಉತ್ಸಾಹದಿಂದ ಇದ್ದೇನೆಂದು ತಿಳಿಸಿದರು.

ಎನ್​ಡಿಎ ಅಧಿಕಾರಕ್ಕೆ ಬಂದರೆ ಕೇಂದ್ರ ಸಚಿವರಾಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿ, ಆ ಬಗ್ಗೆ ನನಗೆ ಹೆಚ್ಚಿನ ಆಸಕ್ತಿ ಇಲ್ಲ. ಮಂಡ್ಯ ಜಿಲ್ಲೆಗೆ ನನ್ನ ಕೈಲಾದ ಅಳಿಲು ಸೇವೆಯನ್ನು ಮಾಡುತ್ತೇನೆ. ರಾಜ್ಯಕ್ಕೆ ಏನಾಗಬೇಕೋ ಅದನ್ನು ಮಾಡುವುದು ನನ್ನ ಮೊದಲ ಆದ್ಯತೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT