ಹೆಚ್ ಡಿ ಕುಮಾರಸ್ವಾಮಿ  
ರಾಜಕೀಯ

ಮಂಡ್ಯದಲ್ಲಿ ಎಚ್.ಡಿ ಕುಮಾರಸ್ವಾಮಿ ಭರ್ಜರಿ ಗೆಲವು; 2 ಲಕ್ಷ ಮತಗಳ ಅಂತರದಿಂದ ಜಯ

ಪ್ರತಿಷ್ಠೆಯ ಕಣವಾಗಿದ್ದ ಮಂಡ್ಯ ಲೋಕ ಸಭಾ ಕ್ಷೇತ್ರದಲ್ಲಿ ಜೆಡಿಎಸ್​ ಪಕ್ಷದ ವರಿಷ್ಠ ಎಚ್​ ಡಿ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ತೀವ್ರ ಜಿದ್ದಾಜಿದ್ದಿಯಲ್ಲಿ ಅವರು ಕಾಂಗ್ರೆಸ್​ ಅಭ್ಯರ್ಥಿ ಸ್ಟಾರ್​ ಚಂದ್ರು ವಿರುದ್ಧ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಬೆಂಗಳೂರು: ಪ್ರತಿಷ್ಠೆಯ ಕಣವಾಗಿದ್ದ ಮಂಡ್ಯ ಲೋಕ ಸಭಾ ಕ್ಷೇತ್ರದಲ್ಲಿ ಜೆಡಿಎಸ್​ ಪಕ್ಷದ ವರಿಷ್ಠ ಎಚ್​ ಡಿ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ತೀವ್ರ ಜಿದ್ದಾಜಿದ್ದಿಯಲ್ಲಿ ಅವರು ಕಾಂಗ್ರೆಸ್​ ಅಭ್ಯರ್ಥಿ ಸ್ಟಾರ್​ ಚಂದ್ರು ವಿರುದ್ಧ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು 7,03,660 ಮತಗಳ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದರು. ಅವರು ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಗೆದ್ದಿದ್ದರು.

ಈ ಕ್ಷೇತ್ರವು 2009 ಮತ್ತು 2019 ರ ನಡುವೆ ಎರಡು ಉಪಚುನಾವಣೆಗಳಿಗೆ ಸಾಕ್ಷಿಯಾಗಿದೆ. 2009 ರವರೆಗೆ ಸತತ ಮೂರು ಅವಧಿಗೆ ಕನ್ನಡ ಚಲನಚಿತ್ರ ನಟ ಅಂಬರೀಶ್ ಇಲ್ಲಿ ಗೆದ್ದಿದ್ದರು. ಅವರ ಪತ್ನಿ ಸುಮಲತಾ 2019 ರಲ್ಲಿ ಸ್ಪರ್ಧಿಸಿ ಗೆದ್ದರು.

ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಳವಳ್ಳಿ, ಮದ್ದೂರು, ಮೇಲುಕೋಟೆ, ಮಂಡ್ಯ, ಶ್ರೀರಂಗಪಟ್ಟಣ, ನಾಗಮಂಗಲ, ಕೃಷ್ಣರಾಜಪೇಟೆ ಮತ್ತು ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರಗಳಿವೆ. ಕಾಂಗ್ರೆಸ್ 5, ಜೆಡಿಎಸ್ ಮತ್ತು ಸರ್ವೋದಯ ಕರ್ನಾಟಕ ಪಕ್ಷ ತಲಾ 1 ಸ್ಥಾನಗಳನ್ನು ಹೊಂದಿವೆ.

ಇನ್ನೂ ಗೆಲುವಿನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿ ಕುಮಾರಸ್ವಾಮಿ, ರಾಜ್ಯದಲ್ಲಿ ಫಲಿತಾಂಶ ಸಮಾಧಾನ ತಂದಿಲ್ಲ, ಎನ್ ಡಿ ಎ ಮೈತ್ರಿಕೂಟ ಇನ್ನೂ ನಾಲ್ಕೈದು ಕ್ಷೇತ್ರಗಳಲ್ಲಿ ಗೆಲ್ಲಬೇಕಿತ್ತು ಎಂದರು. ಮಂಡ್ಯ ಜನತೆಗೆ ಆಭಾರಿಯಾಗಿದ್ದೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT