ಮನ್ಸೂರ್ ಅಲಿ ಖಾನ್ - ಪಿಸಿ ಮೋಹನ್ 
ರಾಜಕೀಯ

ಅಲ್ಪಸಂಖ್ಯಾತರೇ ಹೆಚ್ಚಾಗಿರುವ ಕ್ಷೇತ್ರದಲ್ಲಿ ಬಿಜೆಪಿ ವಿಜಯ ಪತಾಕೆ: ಕಾಂಗ್ರೆಸ್ ಡಬಲ್ ಡಿಜಿಟ್ ಕನಸಿಗೆ ತಣ್ಣೀರೆರಚಿದ ಪಿಸಿ ಮೋಹನ್ ಗೆಲುವು!

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ಗೆಲುವು ಸಾಧಿಸಿದ್ದಾರೆ. ಅಲ್ಪಸಂಖ್ಯಾತರೇ ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಈ ಕ್ಷೇತ್ರದಲ್ಲಿ ಬಿಜೆಪಿ ವಿಜಯ ಪತಾಕೆ ಹಾರಿಸಿದೆ,

ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ಗೆಲುವು ಸಾಧಿಸಿದ್ದಾರೆ. ಅಲ್ಪಸಂಖ್ಯಾತರೇ ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಈ ಕ್ಷೇತ್ರದಲ್ಲಿ ಬಿಜೆಪಿ ವಿಜಯ ಪತಾಕೆ ಹಾರಿಸಿದೆ,

ಈ ಬಾರಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ಕೊನೆ ಹಂತದ ಮತ ಎಣಿಕೆಯವರೆಗೂ ತೀವ್ರ ಕುತೂಹಲತೆಯನ್ನು ಕಾಯ್ದುಕೊಂಡಿತ್ತು. ಪಿಸಿ ಮೋಹನ್ ಈಗಾಗಲೇ ಎರಡು ಬಾರಿ ಸಂಸದರಾಗಿದ್ದು ಮೂರನೆಯ ಬಾರಿ ಕಣದಲ್ಲಿದ್ದರು. ಕಾಂಗ್ರೆಸ್ ನಿಂದ ಮನ್ಸೂರ್ ಅಲಿ ಖಾನ್ ತೀವ್ರ ಪೈಪೋಟಿಯೊಡ್ಡಿದ್ದರು.

ಮತ ಎಣಿಕೆಯ ಆರಂಭದಿಂದಲೂ ಮನ್ಸೂರ್ ಅಲಿ ಖಾನ್ ಸತತವಾಗಿ ಮುನ್ನಡೆ ಸಾಧಿಸುತ್ತಾ ಬಂದಿದ್ದರು. ಮನ್ಸೂರ್ ಅಲಿ ಖಾನ್ 83,381 ಮತಗಳ ಲೀಡ್ ಪಡೆದಿದ್ದರು. ಉತ್ತಮ ಲೀಡ್ ಹಿನ್ನೆಲೆಯಲ್ಲಿ ಗೆಲುವು ನಿಶ್ಚಿತ ಎಂದು ಭಾವಿಸಿದ ಕಾಂಗ್ರೆಸ್ ಬೆಂಬಲಿಕರು ಮತ ಎಣಿಕೆ ಕೇಂದ್ರದ ಎದುರು ಸಂಭ್ರಮಾಚರಣೆ ಆರಂಬಿಸಿದ್ದರು. ಘೋಷಣೆ ಕೂಗಿ ಗೆಲುವಿನ ಚಿಹ್ನೆ ತೋರಿಸಿದ್ದರು. ಈ ವೇಳೆ ಬಿಜೆಪಿ ಬೆಂಬಲಿಗರು ಆತಂಕಕ್ಕೆ ಒಳಗಾಗಿದ್ದರು, ಹೀಗಾಗಿ ರಾಜ್ಯದಲ್ಲಿ ಕಾಂಗ್ರೆಸ್ ಎರಡಂಕಿ ಫಲಿತಾಂಶದ ಕನಸು ಕಂಡಿತ್ತು.

ಮಧ್ಯಾಹ್ನ 2 ಗಂಟೆಯ ನಂತರ ಮತಎಣಿಕೆ ರೋಚಕ ತಿರುವು ಪಡೆದುಕೊಂಡಿತು. ಸಿವಿ ರಾಮನ್ ನಗರ, ಗಾಂಧಿನಗರ ಮತ್ತು ಮಹದೇವಪುರದಲ್ಲಿ ಮತದಾನವಾದ ಮತಗಳ ಎಣಿಕೆ ಪ್ರಾರಂಭವಾದಾಗ ಮನ್ಸೂರ್ ಅವರು ಹಿನ್ನಡೆ ಅನುಭವಿಸಿದರು. ಕೊನೆ ಸುತ್ತಿನ ಮತ ಎಣಿಕೆಯಲ್ಲಿ 35,000-40,000 ಮತಗಳ ಅಂತರದಿಂದ ರೋಚಕ ತಿರುವು ಎಂಬಂತೆ ಪಿ ಸಿ ಮೋಹನ್ ಗೆದ್ದು ಬೀಗಿದರು.

ಪಿ ಸಿ ಮೋಹನ್ ಗೆಲುವು ರಾಜ್ಯ ಬಿಜೆಪಿ ಪಾಳ್ಯಕ್ಕೆ ಸಂತಸವನ್ನುಂಟು ಮಾಡಿದೆ. ಕಾರಣ ಅದಾಗಲೇ ರಾಜ್ಯದಲ್ಲಿ 10 ಸ್ಥಾನಗಳನ್ನು ಗೆದ್ದ ವಿಶ್ವಾಸದಲ್ಲಿದ್ದ ಕಾಂಗ್ರೆಸ್,ಮನ್ಸೂರ್ ಅಲಿ ಖಾನ್ ಸೋಲಿನ ಮೂಲಕ 9 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಹೀಗಾಗಿ, ಪಿಸಿ ಮೋಹನ್ ಗೆಲುವು ಕಾಂಗ್ರೆಸ್ ಎರಡಂಕಿ ಫಲಿತಾಂಶದ ನಿರೀಕ್ಷೆಗೆ ಬ್ರೇಕ್ ಹಾಕಿದಂತಾಯಿತು.

ಮತ ಎಣಿಕೆ ಫಲಿತಾಂಶಗಳು ಇಸಿಐ ವೆಬ್‌ಸೈಟ್‌ನಲ್ಲಿ ತಡವಾಗಿ ಅಪ್‌ಲೋಡ್ ಆಗುತ್ತಿತ್ತು. ಚಾಮರಾಜಪೇಟೆ ಮತ್ತು ಶಿವಾಜಿನಗರ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಮತಎಣಿಕೆಯಲ್ಲಿ ತೀವ್ರ ಪೈಪೋಟಿ ಎದುರಾಗಿತ್ತು. ಮಹದೇವಪುರ, ಸಿವಿ ರಾಮನ್ ನಗರ ಮತ್ತು ಗಾಂಧಿನಗರ ಸೇರಿ ಕ್ಷೇತ್ರದ ಎಲ್ಲರೂ ನನ್ನ ಗೆಲುವಿಗೆ ಸಹಕಾರ ನೀಡಿದ್ದಾರೆಂದು ಪಿಸಿ ಮೋಹನ್ ಅವರು ಹೇಳಿದ್ದಾರೆ.

ಮೋಹನ್ 6,58,915 ಮತಗಳನ್ನು ಪಡೆದರೆ, ಮನ್ಸೂರ್ 6,26,208 ಮತಗಳನ್ನು ಪಡೆದಿದ್ದಾರೆ. 12,126 ರಷ್ಟು ಜನರು ನೋಟಾಗೆ ಮತ ಹಾಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT