ಸಿಎಂ ಸಿದ್ದರಾಮಯ್ಯ 
ರಾಜಕೀಯ

ಹಳೇ ಮೈಸೂರಿನಲ್ಲಿ ಒಕ್ಕಲಿಗ ಸಮುದಾಯ 'ಕೈ' ಕೊಡಲು ಕಾರಣವೇನು?: ಸಿದ್ದರಾಮಯ್ಯ ನೇತೃತ್ವದಲ್ಲಿ ಆತ್ಮಾವಲೋಕನ ಸಭೆ

ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್‌ನ ಕಳಪೆ ಸಾಧನೆ ಬಗ್ಗೆ ವಿಶ್ಲೇಷಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆತ್ಮಾವಲೋಕನ ಸಭೆಗೆ ಕರೆ ನೀಡಿದ್ದಾರೆ.

ಮೈಸೂರು: ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್‌ನ ಕಳಪೆ ಸಾಧನೆ ಬಗ್ಗೆ ವಿಶ್ಲೇಷಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆತ್ಮಾವಲೋಕನ ಸಭೆಗೆ ಕರೆ ನೀಡಿದ್ದಾರೆ.

ಹಾಸನ ಮತ್ತು ಚಾಮರಾಜನಗರ ಹೊರತುಪಡಿಸಿ, ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಇಬ್ಬರ ತವರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವೂ ಒಂದು ಸ್ಥಾನವನ್ನು ಗೆಲ್ಲಲು ವಿಫಲವಾಗಿದೆ. ಮೈಸೂರು ಮತ್ತು ಮಂಡ್ಯ ಭಾಗದ ಸಚಿವರು, ಪಕ್ಷದ ಶಾಸಕರು ಮತ್ತು ಇತರ ಹಿರಿಯ ಮುಖಂಡರನ್ನು ಭೇಟಿ ಮಾಡಿ ಎಲ್ಲಿ ತಪ್ಪಾಗಿದೆ ಎಂದು ತಿಳಿಯಲು ಸಿದ್ದರಾಮಯ್ಯ ಸಭೆ ಕರೆದಿದ್ದಾರೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಾಂಗ್ರೆಸ್‌ನ ಎಂ.ಲಕ್ಷ್ಮಣ ವಿರುದ್ಧ 1,39,262 ಮತಗಳ ಅಂತರದಿಂದ ಗೆಲುವು ಸಾಧಿಸಿದರೆ, ಎನ್‌ಡಿಎ ಅಭ್ಯರ್ಥಿಯಾಗಿದ್ದ ರಾಜ್ಯ ಜೆಡಿಎಸ್ ಮುಖ್ಯಸ್ಥ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್‌ನ ವೆಂಕಟ್ರಮಣೇಗೌಡ (ಸ್ಟಾರ್ ಚಂದ್ರು) ಅವರನ್ನು ಸೋಲಿಸಿದರು. ಮಂಡ್ಯದಲ್ಲಿ ಕುಮಾರಸ್ವಾಮಿ 2,84,620 ಮತಗಳ ಅಂತರದಿಂದ ಭರ್ಜರಿ ಜಯ ಗಳಿಸಿದ್ದಾರೆ.

ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಿ ರಾತ್ರಿ ವಾಸ್ತವ್ಯ ಮಾಡಿ ಚುನಾವಣಾ ಫಲಿತಾಂಶದ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಅವರು ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಮುನ್ನಡೆ ಮತ್ತು ಕಾರ್ಯಕ್ಷಮತೆಯನ್ನು ಗಮನಿಸಿ, ಪಕ್ಷದ ಕಳಪೆ ಪ್ರದರ್ಶನಕ್ಕೆ ಕಾರಣವನ್ನು ವಿಶ್ಲೇಷಿಸಲಿದ್ದಾರೆ.

ರಾಜ್ಯಸಭೆ, ಪರಿಷತ್ತಿನಲ್ಲಿ ಪಕ್ಷವು ಸಮುದಾಯಕ್ಕೆ ಅವಕಾಶ ನೀಡಲಾಗಿತ್ತು. ಲೋಕಸಭೆ ಚುನಾವಣೆಯಲ್ಲಿ ಒಕ್ಕಲಿಗರನ್ನು ಕಣಕ್ಕಿಳಿಸಲಾಗಿದ್ದರೂ ಎಲ್ಲಿ ಹಿನ್ನಡೆಯಾಯಿತು ಎಂಬ ಬಗ್ಗೆ ಸಿದ್ದರಾಮಯ್ಯ ತಮ್ಮ ನಿಷ್ಠಾವಂತ ಬೆಂಬಲಿಗರೊಂದಿಗೆ ಈಗಾಗಲೇ ಚರ್ಚಿಸಿದ್ದಾರೆ ಎಂದು ಮೂಲಗಳು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿವೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಮೈಸೂರು ಮಹಾನಗರ ಪಾಲಿಕೆಯ ಚುನಾವಣೆಗಳ ಹೊರತಾಗಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳನ್ನು ನಡೆಸಲು ಸರ್ಕಾರ ಯೋಜಿಸಿರುವಂತೆ ಮತದಾರರ ವಿಶ್ವಾಸವನ್ನು ಮರಳಿ ಪಡೆಯಲು ಸೂಕ್ತ ಕ್ರಮಗಳು ಮತ್ತು ಕ್ರಿಯಾ ಯೋಜನೆಗಳನ್ನು ರೂಪಿಸಲಿದ್ದಾರೆ.

ಮುಸ್ಲಿಮರು, ದಲಿತರು, ಕುರುಬರು, ಕ್ರಿಶ್ಚಿಯನ್ನರು ಮತ್ತು ಆರ್ಥಿಕವಾಗಿ ದುರ್ಬಲ ವರ್ಗಕ್ಕೆ ಸೇರಿದವರು ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದಾರೆ ಎಂಬ ವರದಿಗಳಿದ್ದರೂ, ಸಿದ್ದರಾಮಯ್ಯ ಅವರ ಅಹಿಂದ (ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಮತ್ತು ದಲಿತರ ಕನ್ನಡ ಸಂಕ್ಷಿಪ್ತ ರೂಪ) ಪರವಾಗಿ ನಿಂತಿರುವ ಸೂಕ್ಷ್ಮ ಸಮುದಾಯಗಳತ್ತ ಗಮನ ಹರಿಸಲು ಪಕ್ಷ ಯೋಜಿಸಿದೆ. ಇದೇ ವೇಳೆ ಬಿಜೆಪಿ ಬಹುಮತ ಪಡೆದರೆ ಸಂವಿಧಾನ ಬದಲಿಸಲಿದೆ ಎಂಬ ಕಾಂಗ್ರೆಸ್ ಪ್ರಚಾರ ಹಾಗೂ ಕರ್ನಾಟಕ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರು ಈ ವರ್ಷ ಜನವರಿ 26ರಿಂದ ಒಂದು ತಿಂಗಳ ಕಾಲ ಸಂವಿಧಾನ ಜಾಗೃತಿ ಜಾಥಾ ನಡೆಸಲು ಮುಂದಾಗಿರುವುದು ದಲಿತ ಮತಗಳು ಒಗ್ಗೂಡುವಿಕೆಗೆ ಭಾರಿ ಲಾಭ ತಂದುಕೊಟ್ಟಿದೆ.

ಜಾಥಾವು 5,600 ಕ್ಕೂ ಹೆಚ್ಚು ಪಂಚಾಯತ್‌ಗಳನ್ನು ಒಳಗೊಂಡಿದೆ ಮತ್ತು ರಾಜ್ಯದ ಎಲ್ಲಾ ದಲಿತ ಕಾಲೋನಿಗಳನ್ನು ತಲುಪಿದೆ. ಇದು ಸಾಂವಿಧಾನಿಕ ಹಕ್ಕುಗಳು, ಡಾ ಬಿಆರ್ ಅಂಬೇಡ್ಕರ್ ಅವರ ಕೊಡುಗೆಗಳು ಮತ್ತು ಬಡವರು ಮತ್ತು ಮಹಿಳೆಯರ ಸಬಲೀಕರಣಕ್ಕಾಗಿ ಮೀಸಲಾತಿಯ ಪ್ರಾಮುಖ್ಯತೆಯಂತಹ ಇತರ ವಿಷಯಗಳನ್ನು ಎತ್ತಿ ತೋರಿಸಿದೆ. ಏತನ್ಮಧ್ಯೆ, ಸರ್ಕಾರವು ಎಲ್ಲಾ ಕುಟುಂಬಗಳನ್ನು ಗ್ಯಾರಂಟಿ ಯೋಜನೆಗಳ ಅಡಿಯಲ್ಲಿ ಒಳಪಡಿಸಿದ ನಂತರವೂ ಸೂಕ್ಷ್ಮ ಸಮುದಾಯಗಳು ಪಕ್ಷದ ಮಡಿಲಿಂದ ಹೊರಗುಳಿಯುತ್ತಿರುವುದರಿಂದ ಕಾಂಗ್ರೆಸ್ ನಾಯಕರಿಗೆ ಆತಂಕ ಉಂಟಾಗಿದೆ. ಹೀಗಾಗಿ ಎಲ್ಲಾ ಅವಕಾಶವನ್ನು ಬಳಸಿಕೊಳ್ಳಲು ನಿರ್ಧರಿಸಿರುವ ಕಾಂಗ್ರೆಸ್ ಸಂವಿಧಾನ ಜಾಥಾದ ಮಾದರಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಪ್ರಾರಂಭಿಸಲು ಯೋಜಿಸಿದೆ.

ಕಾಂಗ್ರೆಸ್ ವೋಟ್ ಬ್ಯಾಂಕ್ ಮತ್ತಷ್ಟು ಕ್ಷೀಣಿಸದಂತೆ ಮಂಡಳಿಗಳು ಮತ್ತು ನಿಗಮಗಳು ಮತ್ತು ಪಕ್ಷದ ಸಂಘಟನೆಗಳ ನೇಮಕಾತಿಯಲ್ಲಿ ಹೆಚ್ಚಿನ ರೀತಿಯಲ್ಲಿ ಅವಕಾಶ ಕಲ್ಪಿಸಲು ಮತ್ತು ಅವರ ವಿಶ್ವಾಸವನ್ನು ಮರಳಿ ಪಡೆಯಲು ಪಕ್ಷವು ಯೋಜಿಸಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

SCROLL FOR NEXT