ಸಂಗ್ರಹ ಚಿತ್ರ 
ರಾಜಕೀಯ

ಮಹರ್ಷಿ ವಾಲ್ಮೀಕಿ ನಿಗಮ ಅವ್ಯವಹಾರ: ಕರ್ನಾಟಕ ಸರ್ಕಾರ ಎಷ್ಟು ಪರ್ಸೆಂಟ್ ಕಪ್ಪ ನೀಡಿದೆ?: ರಾಹುಲ್ ಗಾಂಧಿಗೆ ಬಿಜೆಪಿ ಪ್ರಶ್ನೆ

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪಾಸ್ಟ್ ಮಾಡಿರುವ ಬಿಜೆಪಿ ನಾಯಕ ಸುನೀಲ್ ಕುಮಾರ್, ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ರಾಜ್ಯ ಸರ್ಕಾರ ಹೈಕಮಾಂಡ್ ಗೆ ಎಷ್ಟು ಪರ್ಸೆಂಟ್ ಕಪ್ಪ ನೀಡಿದೆ? ಈ ಕಪ್ಪವನ್ನು ಯಾವ ರಾಜ್ಯದ ಚುನಾವಣೆಗೆ ಬಳಸಿಕೊಂಡಿರಿ? ಎಂದು ಪ್ರಶ್ನೆ ಮಾಡಿದ್ದಾರೆ.

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ಸುಳ್ಳು ಆರೋಪಗಳ ಸರಣಿ ಮಾಲೆ ಪೋಣಿಸಿದ್ದ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ವಿಚಾರಣೆಗಾಗಿ ಬೆಂಗಳೂರು ಕೋರ್ಟ್ಗೆ ಬಂದಿದ್ದಾರೆ. ಮರಳಿ ದಿಲ್ಲಿಗೆ ಹೋಗುವುದಕ್ಕೆ ಮುನ್ನ ಸಣ್ಣ ಸಾರ್ವಜನಿಕ ವಿಚಾರಣೆ ಎದುರಿಸಿ ಸ್ವಾಮಿ ಎಂದು ಹೇಳಿರುವ ಬಿಜೆಪಿ, ರಾಹುಲ್ ಗಾಂಧಿಯವರಿಗೆ ಸರಣಿ ಪ್ರಶ್ನೆಗಳನ್ನು ಕೇಳಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪಾಸ್ಟ್ ಮಾಡಿರುವ ಬಿಜೆಪಿ ನಾಯಕ ಸುನೀಲ್ ಕುಮಾರ್ ಅವರು, ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ರಾಜ್ಯ ಸರ್ಕಾರ ಹೈಕಮಾಂಡ್ ಗೆ ಎಷ್ಟು ಪರ್ಸೆಂಟ್ ಕಪ್ಪ ನೀಡಿದೆ? ಈ ಕಪ್ಪವನ್ನು ಯಾವ ರಾಜ್ಯದ ಚುನಾವಣೆಗೆ ಬಳಸಿಕೊಂಡಿರಿ? ನಿಮಗೆ ಅತ್ಯಾಪ್ತರಾದ ಸಲಹಾಗಾರರ ಶೆಲ್ ಕಂಪನಿಗೆ ರಾಜ್ಯದ ಹಣ ವರ್ಗಾವಣೆಯಾಗಿದ್ದು ಸುಳ್ಳೆ? ಎಂದು ಪ್ರಶ್ನೆ ಮಾಡಿದ್ದಾರೆ.

ಈ ಹಗಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆ ಯಾವಾಗ ಪಡೆಯುತ್ತೀರಿ ? ನಮ್ಮ ವಿರುದ್ಧ ಸುಳ್ಳು ಆರೋಪ ಮಾಡಿದ್ದಕ್ಕಾಗಿ ರಾಜ್ಯದ ಜನತೆಯ ಕ್ಷಮೆ ಎಂದು ಯಾಚಿಸುತ್ತೀರಿ? ಎಂದು ಕೇಳಿದ್ದಾರೆ.

ಇದಕ್ಕೂ ಮುನ್ನ ಮಾಡಿದ್ದ ಮತ್ತೊಂದು ಪೋಸ್ಟ್ ನಲ್ಲಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅವ್ಯವಹಾರ ಸಂಬಂಧ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಿದರೆ ಸಾಲದು, ಇದರ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಪದ ತ್ಯಾಗ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಇಷ್ಟು ದಿನಗಳ ಕಾಲ ಸಚಿವರ ರಕ್ಷಣೆ ಮಾಡಿದ್ದ ಸಿದ್ದರಾಮಯ್ಯ, ಈಗ ಸಿಬಿಐ ಪ್ರವೇಶವಾಗುತ್ತಿದ್ದಂತೆ ನಾಗೇಂದ್ರ ರಾಜೀನಾಮೆ ಪಡೆದುಕೊಂಡಿದ್ದಾರೆ. ಹಾಗಾದರೆ ಇಷ್ಟು ದಿನಗಳ ಕಾಲ ಈ ರಕ್ಷಣೆಯ ನಾಟಕ ಮಾಡಿದ್ದು ಪರಿಶಿಷ್ಟ ವರ್ಗಕ್ಕೆ ಮಾಡಿದ ಅನ್ಯಾಯವಲ್ಲವೇ? ಸಿಎಂ ಸಿದ್ದರಾಮಯ್ಯ ಅವರ ಈ ವರ್ತನೆ ಖಂಡಿಸಿ ಸದನದ ಒಳ ಹೊರಗೆ ಬಿಜೆಪಿ ಉಗ್ರ ಹೋರಾಟ ನಡೆಸಲಿದೆ. ಈ ಹಗರಣದಲ್ಲಿ ಮುಖ್ಯಮಂತ್ರಿ ಕಚೇರಿಯ ನೇರ ಪಾಲ್ಗೊಳ್ಳುವಿಕೆ ಎಂಬುದು ನಮ್ಮ ನೇರ ಆರೋಪವಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT