ಎಂಬಿ ಪಾಟೀಲ 
ರಾಜಕೀಯ

ಚುನಾವಣೆಯಲ್ಲಿ ಹಿನ್ನಡೆ, ಕಾಂಗ್ರೆಸ್ ಆತ್ಮಾವಲೋಕನ: ಎಂ ಬಿ ಪಾಟೀಲ

ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆಗೆ ಕಾರಣಗಳೇನು ಎಂದು ಕಾಂಗ್ರೆಸ್ ಪಕ್ಷ ಆತ್ಮಾವಲೋಕನ ಮಾಡಿಕೊಳ್ಳಲಿದೆ ಎಂದು ಪಕ್ಷದ ಹಿರಿಯ ನಾಯಕ ಮತ್ತು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಶನಿವಾರ ಹೇಳಿದ್ದಾರೆ.

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆಗೆ ಕಾರಣಗಳೇನು ಎಂದು ಕಾಂಗ್ರೆಸ್ ಪಕ್ಷ ಆತ್ಮಾವಲೋಕನ ಮಾಡಿಕೊಳ್ಳಲಿದೆ ಎಂದು ಪಕ್ಷದ ಹಿರಿಯ ನಾಯಕ ಮತ್ತು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಶನಿವಾರ ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಕನಿಷ್ಠ ಪಕ್ಷ 14 ಸ್ಥಾನ ಗೆಲ್ಲುವ ನಿರೀಕ್ಷೆ ಇತ್ತು. ಆದರೆ 9 ಸ್ಥಾನಗಳಷ್ಟೇ ಬಂದಿವೆ. ಈ ಹಿನ್ನಡೆಗೆ ಕಾರಣಗಳೇನು ಎಂದು ಆತ್ಮಾವಲೋಕನ ಮಾಡಿಕೊಳ್ಳಲಿದೆ ಎಂದರು.

ಕಳೆದ ಒಂದು ವರ್ಷದಲ್ಲಿ ರಾಜ್ಯ ಸರಕಾರವು ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದು, ಜನರಿಗೆ ಅದರ ಲಾಭ ಸಿಗುವಂತೆ ಮಾಡಿತ್ತು. ಆದರೂ ನಾವು ಎಡವಿದ್ದೆಲ್ಲಿ ಎನ್ನುವುದನ್ನು ನಾವು ಕಂಡುಕೊಳ್ಳಲಿದ್ದೇವೆ. ಗೆಲ್ಲಬಹುದಾಗಿದ್ದ ಕೆಲವು ಕ್ಷೇತ್ರಗಳು ಕೈಜಾರಿರುವುದು ನಮಗೆ ಗೊತ್ತಾಗಿದೆ' ಎಂದರು.

ಚುನಾವಣೆ ಹಿನ್ನಡೆಗೆ ಯಾರೋ ಒಬ್ಬರನ್ನು ಹೊಣೆ ಮಾಡುವುದು ಸಾಧ್ಯವಿಲ್ಲ. ಸಚಿವರ ಅಥವಾ ಶಾಸಕರ ಮೌಲ್ಯಮಾಪನ ಕೂಡ ನಡೆಯುವುದಿಲ್ಲ. ಪಕ್ಷದ ಮುಂದಿನ ಕಾರ್ಯತಂತ್ರ ಏನಿರಬೇಕು ಎಂದಷ್ಟೇ ಚಿಂತಿಸಲಾಗುವುದು ಎಂದು ಹೇಳಿದರು.

ಈಗ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿ ಆಗುತ್ತಿದ್ದಾರೆ. ಕಳೆದ ಎರಡು ಬಾರಿಗಿಂತ ಈ ಸಲ ಬಿಜೆಪಿ ಬಲ ಕುಂದಿದೆ. ಹೀಗಾಗಿ ಈ ಸಲ ಅವರ ಸರಕಾರ ಎಷ್ಟು ದಿನ ಇರುತ್ತದೋ ಹೇಳಲು ಸಾಧ್ಯವಿಲ್ಲ. ಅದರಲ್ಲೂ ನಿತೀಶಕುಮಾರ್ ತರಹದ ವ್ಯಕ್ತಿಯನ್ನು ಇಟ್ಟುಕೊಂಡು ಸರಕಾರ ನಡೆಸುವುದು ಎಷ್ಟು ಕಷ್ಟ ಎನ್ನುವುದು ನಮಗೆ ಗೊತ್ತಿದೆ ಎಂದು ಅವರು ಭವಿಷ್ಯ ನುಡಿದರು. ಮಹಾರಾಷ್ಟ್ರ, ಉತ್ತರ ಪ್ರದೇಶ, ರಾಜಾಸ್ಥಾನಗಳಲ್ಲಿ ಬಿಜೆಪಿ ಹೆಚ್ಚಿನ ಕಡೆ ಸೋಲಲಿದೆ ಎಂದು ನಾನು ಮೊದಲೇ ಹೇಳಿದ್ದೆ. ಈಗ ಅದೇ ರೀತಿ ಆಗಿದೆ ಎಂದು ಅವರು ನೆನಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel