ಲಕ್ಷ್ಮಣ ಸವದಿ 
ರಾಜಕೀಯ

ಬೆಳಗಾವಿ ಕಾಂಗ್ರೆಸ್‌ನಲ್ಲಿ ಭಿನ್ನಮತ: ಅಥಣಿಯಲ್ಲಿ ಪಕ್ಷದ ಮುನ್ನಡೆಗೆ ಸವದಿ ಸಹಾಯ ಮಾಡಿಲ್ಲ- ಸತೀಶ್ ಜಾರಕಿಹೊಳಿ

ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟವಾಗಿದ್ದು ಅಥಣಿ ಶಾಸಕ ಲಕ್ಷ್ಮಣ ಸವದಿ‌ ಚುನಾವಣೆ ವೇಳೆ ಸಹಕಾರ ನೀಡಿಲ್ಲ ಎಂದು ಸಚಿವ ಸತೀಶ್‌ ಜಾರಕಿಹೊಳಿ ನೇರ ಆರೋಪ ಮಾಡಿದ್ದಾರೆ

ಬೆಳಗಾವಿ: ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಜಿಲ್ಲಾ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟವಾಗಿದ್ದು ಅಥಣಿ ಶಾಸಕ ಲಕ್ಷ್ಮಣ ಸವದಿ‌ ಚುನಾವಣೆ ವೇಳೆ ಸಹಕಾರ ನೀಡಿಲ್ಲ ಎಂದು ಸಚಿವ ಸತೀಶ್‌ ಜಾರಕಿಹೊಳಿ ನೇರ ಆರೋಪ ಮಾಡಿದ್ದಾರೆ.

ಬಿಜೆಪಿಯ ಅಣ್ಣಾಸಾಹೇಬ ಜೊಲ್ಲೆ ವಿರುದ್ಧ ಪಕ್ಷದ ಪ್ರಿಯಾಂಕಾ ಜಾರಕಿಹೊಳಿ ಲಕ್ಷಕ್ಕೂ ಹೆಚ್ಚು ಮತಗಳಿಂದ ಜಯಗಳಿಸಿದ ಬೆನ್ನಲ್ಲೇ ಚಿಕ್ಕೋಡಿ ಕಾಂಗ್ರೆಸ್‌ನಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳು ಮುನ್ನೆಲೆಗೆ ಬಂದಿವೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸತೀಶ್‌ ಜಾರಕಿಹೊಳಿ, ತಮ್ಮ ಪುತ್ರಿ ಪ್ರಿಯಾಂಕಾ ಪ್ರಚಾರದ ನೇತೃತ್ವ ವಹಿಸಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಅಥಣಿ ಶಾಸಕ ಲಕ್ಷ್ಮಣ ಸವದಿ ಮತ್ತು ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣನವರ್ ತಮ್ಮ ಕ್ಷೇತ್ರಗಳಲ್ಲಿ ಪಕ್ಷದ ವಿರುದ್ಧ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಚಿಕ್ಕೋಡಿ ವಿಧಾನಸಭಾ ಭಾಗದಲ್ಲಿ ಪಕ್ಷದ ಎಲ್ಲ ಶಾಸಕರು ಪಕ್ಷಕ್ಕೆ ಮುನ್ನಡೆ ಸಾಧಿಸಲು ಸಹಾಯ ಮಾಡಿದ್ದಾರೆ ಆದರೆ ಸವದಿ ಮತ್ತು ತಮ್ಮಣ್ಣನವರ್ ಕ್ರಮವಾಗಿ ಅಥಣಿ ಮತ್ತು ಕುಡಚಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಲಾಭಕ್ಕಾಗಿ ಶ್ರಮಿಸಲಿಲ್ಲ ಎಂದು ಆರೋಪಿಸಿದರು.

ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಮುನ್ನಡೆ ಸಾಧಿಸಲು ಸವದಿ ಸಹಾಯ ಮಾಡಿದ್ದರೆ ಅವರೊಂದಿಗಿನ ಸಂಬಂಧ ಸೌಹಾರ್ದಯುತವಾಗಿರುತ್ತಿತ್ತು ಎಂದರು. ದುರದೃಷ್ಟವಶಾತ್ ಸವದಿ ನಿರ್ಣಾಯಕ ಹಂತದಲ್ಲಿ ತಮ್ಮೊಂದಿಗೆ ಅಂತರ ಕಾಯ್ದುಕೊಂಡಿದ್ದರು ಎಂದು ಜಾರಕಿಹೊಳಿ ಹೇಳಿದರು.

ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಿಯಾಂಕಾ ಮುನ್ನಡೆ ಸಾಧಿಸಲು ಸಹಾಯ ಮಾಡುವುದಾಗಿ ಭರವಸೆ ನೀಡಿದ್ದರೂ ಸವದಿ ಅದನ್ನು ಮಾಡಲಿಲ್ಲ. ಬದಲಿಗೆ ಅಲ್ಲಿ ಕಾಂಗ್ರೆಸ್‌ನ ಮತಗಳು ಕಡಿಮೆಯಾಗಿದ್ದು, ಅಥಣಿಯಲ್ಲಿ ಕಾಂಗ್ರೆಸ್‌ ಹೇಗೆ ಹಿನ್ನಡೆ ಅನುಭವಿಸಿತು ಜನರು ಎಂದು ಆಶ್ಚರ್ಯ ಪಡುತ್ತಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT