ವಿ.ಸೋಮಣ್ಣ 
ರಾಜಕೀಯ

ನಿಷ್ಠರನ್ನು ಪಕ್ಷ ನಿರಾಸೆಗೊಳಿಸುವುದಿಲ್ಲ ಎಂಬ ಸಂದೇಶ ಇದು: ಮೋದಿ ಸಂಪುಟದ ಏಕೈಕ ಲಿಂಗಾಯತ ಸಚಿವ ವಿ ಸೋಮಣ್ಣ (ಸಂದರ್ಶನ)

ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಪಡೆದ ನಂತರ ವಿ. ಸೋಮಣ್ಣ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ನೀಡಿದ ಸಂದರ್ಶನದಲ್ಲಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ, ಸೋಮಣ್ಣ ಅವರೊಂದಿಗಿನ ಸಂದರ್ಶನದ ಆಯ್ದ ಭಾಗಗಳು ಇಲ್ಲಿವೆ,

Shilpa D

ಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾಗಿರುವ ತುಮಕೂರು ಸಂಸದ ವಿ. ಸೋಮಣ್ಣ ಅಮಿತ್ ಶಾ ನಿಷ್ಠಾವಂತ ವೀರಶೈವ-ಲಿಂಗಾಯತ ನಾಯಕ ವಿ ಸೋಮಣ್ಣ ಅವರು ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ಸಚಿವರಾಗಿದ್ದಾರೆ.

ಸೋಮಣ್ಣ ತುಮಕೂರು ಲೋಕಸಭಾ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು. ಪಕ್ಷದ ಹೈಕಮಾಂಡ್ ಆದೇಶದ ಮೇರೆಗೆ 2023 ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಮತ್ತು ಚಾಮರಾಜನಗರದಿಂದ ಸ್ಪರ್ಧಿಸಿದ್ದ ಸೋಮಣ್ಣ 2ಕ್ಷೇತ್ರಗಳಲ್ಲಿ ಹೀನಾಯವಾಗಿ ಸೋತಿದ್ದರು.

ಕಾಂಗ್ರೆಸ್ ಅವರನ್ನು ಬೇಟೆಯಾಡಿ ತನ್ನ ಲೋಕಸಭಾ ಅಭ್ಯರ್ಥಿಯನ್ನಾಗಿ ಮಾಡಲು ಪ್ರಯತ್ನಿಸಿತ್ತು. ಅಮಿತ್ ಶಾ ತಾವು ಕೊಟ್ಟ ಭರವಸೆಯಂತೆ ಸೋಮಣ್ಣ ಅವರಿಗೆ ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಿ ವಿಧಾನಸಭೆ ಚುನಾವಣೆಯ ಸೋಲನ್ನು ಸರಿದೂಗಿಸಲು ಮುಂದಾದರು. ಮೋದಿ ಮಂತ್ರಿಮಂಡಲದಲ್ಲಿರುವ ಏಕೈಕ ವೀರಶೈವ-ಲಿಂಗಾಯತ ನಾಯಕ ಸೋಮಣ್ಣ. ಯಡಿಯೂರಪ್ಪ ಅವರ ಪುತ್ರ ಹಾಗೂ ನಾಲ್ಕು ಬಾರಿ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಕೂಡ ಸ್ಪರ್ಧೆಯಲ್ಲಿದ್ದರೂ ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ಪಡೆಯಲು ವಿಫಲರಾಗಿದ್ದಾರೆ.

73ರ ವರ್ಷದ ಸೋಮಣ್ಣ ಜೆಡಿಎಸ್ ಮತ್ತು ಕಾಂಗ್ರೆಸ್‌ನಲ್ಲಿದ್ದರು. ಈಗ ಬಿಜೆಪಿಯಲ್ಲಿದ್ದರೂ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಎಲ್ಲಾ ಪಕ್ಷಗಳಾದ್ಯಂತ ಹಿತೈಷಿಗಳನ್ನು ಹೊಂದಿದ್ದಾರೆ, ಡಿಕೆ ಶಿ ಮತ್ತು ಸೋಮಣ್ಣ ಇಬ್ಬರೂ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನವರು. ಸ್ವಾತಂತ್ರ್ಯಾ ನಂತರ ತುಮಕೂರಿನ ಸಂಸದರೊಬ್ಬರು ಕೇಂದ್ರ ಸಚಿವರಾಗಿರುವುದು ಇದೇ ಮೊದಲು. 1991 ಮತ್ತು 1996 ರ ನಡುವೆ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಡೆಪ್ಯೂಟಿ ಸ್ಪೀಕರ್ ಆಗಿದ್ದ ಜನಸಂಘದ ನಾಯಕ ದಿವಂಗತ ಎಸ್ ಮಲ್ಲಿಕಾರ್ಜುನಯ್ಯ ಅವರು ದೆಹಲಿಯ ಉನ್ನತ ಅಧಿಕಾರ ಅನುಭವಿಸಿದ್ದ ಏಕೈಕ ನಾಯಕ.

ಮೋದಿ ಸರ್ಕಾರದಲ್ಲಿ ಇರಲು ನಿಮಗೆ ಏನನಿಸುತ್ತದೆ?

ಮೋದಿಯಂತಹ ನಾಯಕರೊಂದಿಗೆ ಕೆಲಸ ಮಾಡಲು ನನಗೆ ಸಂತೋಷವಾಗಿದೆ. ಪಕ್ಷಕ್ಕೆ ಮತ್ತು ರಾಜ್ಯ ಸರ್ಕಾರದಲ್ಲಿ ನನ್ನ ಸೇವೆಯನ್ನು ಪರಿಗಣಿಸಿ ನನಗೆ ಉತ್ತಮ ಖಾತೆ ಸಿಗಲಿದೆ ಎಂದು ನಾನು ಭಾವಿಸುತ್ತೇನೆ

ಅಮಿತ್ ಶಾ ಅವರೊಂದಿಗಿನ ನಿಮ್ಮ ಸಾಮೀಪ್ಯವು ನಿಮಗೆ ಹುದ್ದೆಯನ್ನು ಪಡೆಯಲು ಸಹಾಯ ಮಾಡಿದೆಯೇ?

ಪಕ್ಷ ನನಗೆ ವಹಿಸಿದ ಕೆಲಸವನ್ನು ಪೂರ್ಣಗೊಳಿಸಿದ್ದಕ್ಕೆ ನನಗೆ ಈ ಅವಕಾಶ ಸಿಕ್ಕಿದೆ. ಪಕ್ಷದ ಸೂಚನೆಗಳನ್ನು ಪಾಲಿಸುವುದಕ್ಕಾಗಿ ಸಮಸ್ಯೆಗಳನ್ನು ಎದುರಿಸಿದವರನ್ನು ನಿರಾಸೆಗೊಳಿಸುವುದಿಲ್ಲ ಎಂಬ ಸಂದೇಶವೂ ಇದಾಗಿದೆ.

ಯಡಿಯೂರಪ್ಪಗೆ ಸಮಾನಾಂತರ ನಾಯಕರಾಗಿ ಹೊರಹೊಮ್ಮಿದ್ದೀರಾ?

ಆ ಯೋಚನೆ ನನ್ನ ಮನಸ್ಸಿಗೆ ಬಂದಿಲ್ಲ.

ಎರಡು ಸೋಲಿನ ನಂತರ ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದೀರಿ...?

ಇದು ಜನತೆಯ ಗೆಲುವಾಗಿದ್ದು ನನ್ನ ಮತದಾರರಿಗೆ ಋಣಿಯಾಗಿದ್ದೇನೆ.

ನಿಮ್ಮ ಗೆಲುವಿನ ಕ್ರೆಡಿಟ್ ಯಾರಿಗೆ ಕೊಡುವಿರಿ?

ಜೆಡಿಎಸ್ ನಾಯಕತ್ವ - ಎಚ್‌ಡಿ ದೇವೇಗೌಡ ಮತ್ತು ಎಚ್‌ಡಿ ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ರಾಷ್ಟ್ರೀಯ ಮತ್ತು ರಾಜ್ಯ ನಾಯಕರು.

ಕರ್ನಾಟಕ ರಾಜ್ಯಕ್ಕಾಗಿ ನಿಮ್ಮ ಯೋಜನೆ ಏನು?

ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಪರಿಶೀಲಿಸುತ್ತೇನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

SCROLL FOR NEXT