ಲಕ್ಷ್ಮಿ ಹೆಬ್ಬಾಳ್ಕರ್ 
ರಾಜಕೀಯ

ಎಂಇಎಸ್ ಮತಗಳು ಬಿಜೆಪಿಗೆ ಹೋಗಿದ್ದರಿಂದಲೇ ನನ್ನ ಮಗನಿಗೆ ಸೋಲಾಯಿತು: ಲಕ್ಷ್ಮಿ ಹೆಬ್ಬಾಳ್ಕರ್

ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) ಮತಗಳು ಬಿಜೆಪಿಗೆ ಹೋಗಿದ್ದರಿಂದಲೇ ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ತಮ್ಮ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಸೋಲು ಕಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಬೆಂಗಳೂರು: ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) ಮತಗಳು ಬಿಜೆಪಿಗೆ ಹೋಗಿದ್ದರಿಂದಲೇ ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ತಮ್ಮ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಸೋಲು ಕಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ನಂತರ ಲಕ್ಷ್ಮಿ ಈ ವಿಷಯ ತಿಳಿಸಿದರು.

ಕಾಂಗ್ರೆಸ್ ಟಿಕೆಟ್‌ನಿಂದ ಸ್ಪರ್ಧಿಸಿದ್ದ ಅವರ ಪುತ್ರ ಮೃಣಾಲ್ ಬಿಜೆಪಿಯ ಜಗದೀಶ್ ಶೆಟ್ಟರ್ ವಿರುದ್ಧ 1.78 ಲಕ್ಷ ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.

'ಬೆಳಗಾವಿಯಲ್ಲಿ ತ್ರಿಕೋನ ಸ್ಪರ್ಧೆ ನಡೆಯುತ್ತಿತ್ತು. ಆದರೆ, ಈ ಬಾರಿ ಬಿಜೆಪಿ ಮತ್ತು ಎಂಇಎಸ್ ಒಟ್ಟಿಗೆ ಬಂದಂತೆ ಕಾಣುತ್ತಿದೆ' ಎಂದು ಲಕ್ಷ್ಮಿ ಹೇಳಿದರು.

'ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿ ಗ್ರಾಮಾಂತರದಲ್ಲಿ ಎಂಇಎಸ್ 45 ಸಾವಿರ ಮತಗಳನ್ನು ಪಡೆದಿದೆ. ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ 4 ಲಕ್ಷ ಮತ ಪಡೆದಿದ್ದರೆ, ಎಂಇಎಸ್ 1.30 ಲಕ್ಷ ಮತ ಪಡೆದಿತ್ತು. ಈ ಬಾರಿ ಎಂಇಎಸ್ ಅಭ್ಯರ್ಥಿ ಕೇವಲ 9 ಸಾವಿರ ಮತ ಪಡೆದಿದ್ದಾರೆ' ಎಂದು ಹೇಳಿದರು.

ಬೆಳಗಾವಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದನ್ನು ಲಕ್ಷ್ಮಿ ಸಮರ್ಥಿಸಿಕೊಂಡಿದ್ದಾರೆ.

'2018ರಲ್ಲಿ ನಾನು 52,000 ಮತಗಳ ಅಂತರದಿಂದ ಗೆದ್ದಿದ್ದೆ. ಒಂದು ವರ್ಷದ ನಂತರ ನಡೆದ ಲೋಕಸಭೆ ಚುನಾವಣೆಯಲ್ಲಿ ನನ್ನ ಭಾಗದಲ್ಲಿ ಸುರೇಶ ಅಂಗಡಿ 79 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದರು. 2023ರಲ್ಲಿ ನಾನು 59,000 ಮತಗಳಿಂದ ಗೆದ್ದಿದ್ದೆ. ಆದ್ದರಿಂದ, ಮತದಾರರ ಮನಸ್ಥಿತಿಯು ಚುನಾವಣೆಯಿಂದ ಚುನಾವಣೆಗೆ ವಿಭಿನ್ನವಾಗಿದೆ' ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್