ನಿಖಿಲ್ ಕುಮಾರಸ್ವಾಮಿ 
ರಾಜಕೀಯ

ಕುಮಾರಸ್ವಾಮಿ ಅವರ ನಾಯಕತ್ವ ಗುರುತಿಸಿ ಮೋದಿ ಸಚಿವ ಸ್ಥಾನ ನೀಡಿದ್ದಾರೆ: ನಿಖಿಲ್

ಮೋದಿ 3.0 ಕ್ಯಾಬಿನೆಟ್‌ನಲ್ಲಿ ಕೇಂದ್ರ ಸಚಿವರಾಗಿ ನೇಮಕ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಂದೆ ಎಚ್‌ಡಿ ಕುಮಾರಸ್ವಾಮಿ ಅವರ ನಾಯಕತ್ವವನ್ನು ಗುರುತಿಸಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ಮೋದಿ 3.0 ಕ್ಯಾಬಿನೆಟ್‌ನಲ್ಲಿ ಕೇಂದ್ರ ಸಚಿವರಾಗಿ ನೇಮಕ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಂದೆ ಎಚ್‌ಡಿ ಕುಮಾರಸ್ವಾಮಿ ಅವರ ನಾಯಕತ್ವವನ್ನು ಗುರುತಿಸಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಮಂಡ್ಯದಲ್ಲಿ ಭಾರೀ ಗೆಲುವಿನ ನಂತರ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ದೆಹಲಿಗೆ ಕರೆಸಿಕೊಂಡು ನಮಗೆಲ್ಲರಿಗೂ ತಿಳಿದಿರುವ ಹಾಗೆ ಅವರಿಗೆ ಅತ್ಯಂತ ಜವಾಬ್ದಾರಿಯುತವಾದ ಕೇಂದ್ರ ಸಚಿವ ಸ್ಥಾನವನ್ನು ನೀಡಲಾಗಿದೆ. ಅವರು ಇಂದು ಕೇಂದ್ರ ಸಚಿವರಾಗಿದ್ದು, ದೇಶ ಮತ್ತು ರಾಜ್ಯಕ್ಕಾಗಿ ಸೇವೆ ಸಲ್ಲಿಸಲಿದ್ದಾರೆ. ಈ ಹಿಂದೆ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಆಡಳಿತದಿಂದಾಗಿ ಅವರಿಗೆ ಈ ಅವಕಾಶ ಸಿಕ್ಕಿದೆ ಎಂದು ನಿಖಿಲ್ ಹೇಳಿದ್ದಾರೆ.

ಪಿಎಂ ಮೋದಿ ಅವರು ಕುಮಾರಸ್ವಾಮಿ ಅವರ ನಾಯಕತ್ವವನ್ನು ಗುರುತಿಸಿದ್ದಾರೆ ಮತ್ತು ಅವರಿಗೆ ದೊಡ್ಡ ಜವಾಬ್ದಾರಿಯನ್ನು ನೀಡಲಾಗಿದೆ. ಕುಮಾರಸ್ವಾಮಿ ಅವರು ತಮ್ಮ ನಿರೀಕ್ಷೆಗಳನ್ನು ಪೂರೈಸುತ್ತಾರೆ ಎಂದು ನನಗೆ ಖಾತ್ರಿಯಿದೆ ಎಂದು ಅವರು ಹೇಳಿದರು. ನಾಳೆ, ಅವರು ಮೊದಲ ಬಾರಿಗೆ, ಕೇಂದ್ರ ಸಚಿವ ಸ್ಥಾನವನ್ನು ಸ್ವೀಕರಿಸಿದ ನಂತರ ಕರ್ನಾಟಕಕ್ಕೆ ಬರುತ್ತಿದ್ದಾರೆ. ಬೆಳಿಗ್ಗೆ 11:50 ಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದ್ದಾರೆ. ನಾವು ಸತತ ಮೂರು ದಿನಗಳ ಕಾಲ ನಾವು ಹಲವಾರು ಕಾರ್ಯಕ್ರಮಗಳನ್ನು ಯೋಜಿಸಿದ್ದೇವೆ ನಿಖಿಲ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

India-Pakistan ಯುದ್ಧವನ್ನು ನಾನು ತಡೆಯದೇ ಹೋಗಿದ್ದರೆ 3.5 ಕೋಟಿ ಜನರು ಸಾಯುತ್ತಿದ್ದರು: ಡೊನಾಲ್ಡ್ ಟ್ರಂಪ್

ಪ್ರಧಾನಿ ಮೋದಿ ಎರಡು ದಿನಗಳ ಇಸ್ರೇಲ್‌ ಪ್ರವಾಸ ಆರಂಭ; ಸಂಸತ್ತು ನೆಸ್ಸೆಟ್ ಭಾಷಣ ಮಾಡುವ ಮೊದಲ ಭಾರತ ಪ್ರಧಾನಿ-Video

ಮಾಜಿ ಪ್ರೇಯಸಿಯ ಮದುವೆಗೆ ಬಂದು ಗುಂಡು ಹಾರಿಸಿದ ಭಗ್ನ ಪ್ರೇಮಿ, Video ವೈರಲ್!

Epstein ties ಆರೋಪದ ಕುರಿತು ಮೌನ ಮುರಿದ ಬಿಲ್ ಗೇಟ್ಸ್; ಉದ್ಯಮಿ ಹೇಳಿದ್ದೇನು?

ಹಾರ್ನ್ ಮಾಡುವ ವಿಚಾರಕ್ಕೆ ಗಲಾಟೆ: 65ರ ವೃದ್ಧನ ಮೇಲೆ ಮನಸೋ ಇಚ್ಛೆ ಹಲ್ಲೆ, ರೌಡಿಶೀಟ್ ಗೆ ಪೊಲೀಸರ ಸಿದ್ಧತೆ? Video

SCROLL FOR NEXT