ಸಿಟಿ ರವಿ 
ರಾಜಕೀಯ

ಮುಸ್ಲಿಂ ಮೀಸಲಾತಿ ಸಂವಿಧಾನಕ್ಕೆ ವಿರುದ್ಧ: ಟಿಡಿಪಿ ನಿರ್ಧಾರ ಟೀಕಿಸಿದ ಬಿಜೆಪಿ ನಾಯಕ ಸಿಟಿ ರವಿ

ಧರ್ಮ ಆಧರಿತ ಮೀಸಲಾತಿಯನ್ನು ತಮ್ಮ ಪಕ್ಷವು ತೀವ್ರವಾಗಿ ವಿರೋಧಿಸುತ್ತದೆ ಮತ್ತು ಈ ವಿಚಾರದಲ್ಲಿ ಪಕ್ಷದ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ.

ಮಂಗಳೂರು: ಧರ್ಮ ಆಧರಿತ ಮೀಸಲಾತಿಯನ್ನು ತಮ್ಮ ಪಕ್ಷವು ತೀವ್ರವಾಗಿ ವಿರೋಧಿಸುತ್ತದೆ ಮತ್ತು ಈ ವಿಚಾರದಲ್ಲಿ ಪಕ್ಷದ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಬಿಜೆಪಿಯ ಹಿರಿಯ ನಾಯಕ ಮತ್ತು ಹೊಸದಾಗಿ ಆಯ್ಕೆಯಾದ ಎಂಎಲ್‌ಸಿ ಸಿ.ಟಿ.ರವಿ ಅವರು ಶನಿವಾರ ಹೇಳಿದ್ದಾರೆ.

ಆಂಧ್ರಪ್ರದೇಶದಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಮುಂದುವರಿಯಲಿದೆ ಎಂಬ ಎನ್‌ಡಿಎ ಮಿತ್ರಪಕ್ಷ ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷದ (ಟಿಡಿಪಿ) ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಟಿ ರವಿ, ಡಾ.ಬಿ.ಆರ್. ಅಂಬೇಡ್ಕರ್ ಅವರು ಧರ್ಮದ ಆಧರಿತ ಮೀಸಲಾತಿಯನ್ನು ತೀವ್ರವಾಗಿ ವಿರೋಧಿಸಿದ್ದರು ಎಂದರು.

ಧಾರ್ಮಿಕ ಮೀಸಲಾತಿ ಸಾಂವಿಧಾನಿಕ ಸಮಿತಿ ಮತ್ತು ಸಂವಿಧಾನದ ಆಶಯಗಳಿಗೆ ವಿರುದ್ಧ ಎಂಬುದನ್ನು ಮರೆಯಬಾರದು. ಧಾರ್ಮಿಕ ಮೀಸಲಾತಿಯು ಅಂಬೇಡ್ಕರ್ ಅವರ ಚಿಂತನೆ ಮತ್ತು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ ಎಂದರು.

ನೀವು ಜಾತಿ ಮತ್ತು ಆರ್ಥಿಕ ಅಂಶಗಳ ಆಧಾರದ ಮೇಲೆ ಮೀಸಲಾತಿಯನ್ನು ನೀಡಬಹುದು. ಆದರೆ ಸಂವಿಧಾನವು ಧಾರ್ಮಿಕ ಮೀಸಲಾತಿಯನ್ನು ಅನುಮತಿಸುವುದಿಲ್ಲ. ಈ ಸಮಸ್ಯೆ ನ್ಯಾಯಾಲಯದಲ್ಲಿದ್ದು, ಸಂವಿಧಾನ ವಿರೋಧಿ ವಿಷಯಕ್ಕೆ ನ್ಯಾಯಾಲಯವು ಅವಕಾಶ ನೀಡುತ್ತದೆಯೇ ಎಂಬುದನ್ನು ನಾವು ಕಾದು ನೋಡಬೇಕಾಗಿದೆ ಎಂದರು.

ಧರ್ಮಾಧಾರಿತ ಮೀಸಲಾತಿಯು ದೇಶದ ವಿಭಜನೆಗೆ ಕಾರಣವಾಯಿತು ಎಂಬುದನ್ನು ಯಾರೂ ಮರೆಯಬಾರದು. ನಾವು ಧಾರ್ಮಿಕ ಮೀಸಲಾತಿಯ ಪರವಾಗಿಲ್ಲ ಎಂಬುದು ನಮ್ಮ ಪಕ್ಷದ ನಿಲುವು ಸ್ಪಷ್ಟವಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT