ಡಿಸಿಎಂ ಡಿಕೆ ಶಿವಕುಮಾರ್ 
ರಾಜಕೀಯ

ಕರ್ನಾಟಕದಲ್ಲಿ 2028ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರುತ್ತೇವೆ: ಡಿಕೆ ಶಿವಕುಮಾರ್

ಕರ್ನಾಟಕದಲ್ಲಿ 2028ರಲ್ಲಿ ನಡೆಯಲಿರುವ ಮುಂದಿನ ವಿಧಾನಸಭೆಯಲ್ಲಿ ಕಾಂಗ್ರೆಸ್‌ನ್ನು ಮತ್ತೆ ಅಧಿಕಾರಕ್ಕೆ ತರುವುದಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಕ್ರವಾರ ಪಣತೊಟ್ಟಿದ್ದಾರೆ.

ಬೆಂಗಳೂರು: ಕರ್ನಾಟಕದಲ್ಲಿ 2028ರಲ್ಲಿ ನಡೆಯಲಿರುವ ಮುಂದಿನ ವಿಧಾನಸಭೆಯಲ್ಲಿ ಕಾಂಗ್ರೆಸ್‌ನ್ನು ಮತ್ತೆ ಅಧಿಕಾರಕ್ಕೆ ತರುವುದಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಕ್ರವಾರ ಪಣತೊಟ್ಟಿದ್ದಾರೆ.

ಗುರುವಾರ ತಡರಾತ್ರಿ ಪಕ್ಷದ ಒಕ್ಕಲಿಗ ಮುಖಂಡರೊಂದಿಗೆ ನಡೆಸಿದ ಸಭೆಯ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 'ನಾವು ಸೋಲನ್ನು ಒಪ್ಪಿಕೊಂಡಿದ್ದೇವೆ, ಆದರೆ ಅದು ಶಾಶ್ವತವಲ್ಲ. ರಾಜಕೀಯದಲ್ಲಿ ವಿಷಯಗಳು ಕ್ರಿಯಾತ್ಮಕವಾಗಿವೆ. 2019 ರಲ್ಲಿ ನಾವು ಕೇವಲ ಒಂದು ಸ್ಥಾನವನ್ನು ಗೆದ್ದಿದ್ದೆವು. ಆದರೆ ನಾವು ಈ ಬಾರಿ ಒಂಬತ್ತು ಸ್ಥಾನಗಳನ್ನು ಗೆದ್ದಿದ್ದೇವೆ. 2028ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರುವುದು ನನ್ನ ಜವಾಬ್ದಾರಿ ಎಂದು ಹೇಳಿದರು.

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಸರ್ಕಾರ ಸೇಡಿನ ರಾಜಕೀಯ ನಡೆಸುತ್ತಿದೆ ಎಂಬ ಬಿಜೆಪಿ ಆರೋಪವನ್ನು ಶಿವಕುಮಾರ್ ನಿರಾಕರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT