ಶಾಸಕ ಮುನಿರಾಜು ಹಾಗೂ ಡಿಕೆ.ಶಿವಕುಮಾರ್ (ಸಂಗ್ರಹ ಚಿತ್ರ) 
ರಾಜಕೀಯ

ವಾಲ್ಮೀಕಿ ಕಲ್ಯಾಣ ನಿಗಮ ಹಗರಣದಲ್ಲಿ ಡಿಕೆಶಿಗೂ ಟ್ಯಾಕ್ಸ್: ಶಾಸಕ ಮುನಿರಾಜು ಹೊಸ ಬಾಂಬ್!

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಕಲ್ಯಾಣ ನಿಗಮದ ಹಗರಣ ಆರೋಪ ಹಿನ್ನೆಲೆಯಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಸರ್ಕಾರ ವಿರುದ್ಧ ಸರಣಿ ಆರೋಪಗಳು ಕೇಳಿ ಬರುತ್ತಿವೆ.

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಕಲ್ಯಾಣ ನಿಗಮದ ಹಗರಣ ಆರೋಪ ಹಿನ್ನೆಲೆಯಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಸರ್ಕಾರ ವಿರುದ್ಧ ಸರಣಿ ಆರೋಪಗಳು ಕೇಳಿ ಬರುತ್ತಿವೆ.

ಬೆಂಗಳೂರಿನಲ್ಲಿ ಭಾನುವಾರ ಮಾತನಾಡಿದ ದಾಸರಹಳ್ಳಿ ಬಿಜೆಪಿ ಶಾಸಕ ಎಸ್‌.ಮುನಿರಾಜು ಅವರು, ಅಗತ್ಯ ಮೂಲಸೌಕರ್ಯ ಕಾಮಗಾರಿಗಳಿಗೆ ಡಿಕೆ.ಶಿವಕುಮಾರ್ ಅವರಿಗೂ ಶೇ.8ರಷ್ಟು ತೆರಿಗೆ ಇದೆ ಎಂದು ಆರೋಪಿಸಿದರು.

ಶೇ.18ರಷ್ಟು ಜಿಎಸ್‌ಟಿ, ಶೇ.2ರಷ್ಟು ಸೆಸ್‌, ಶೇ.2ರಷ್ಟು ತೆರಿಗೆ ಮತ್ತು ಶೇ.8ರಷ್ಟು ಡಿಕೆಶಿ ತೆರಿಗೆ ವಿಧಿಸಲಾಗುತ್ತಿದೆ. 75 ಲಕ್ಷ ರೂಪಾಯಿ ಅನುದಾನದಲ್ಲಿ ಲಂಚಗಳಿಗೆ ಹಣ ಹೋದರೆ, ಅಭಿವೃದ್ಧಿಗೆ ಏನು ಉಳಿಯುತ್ತದೆ? ಎಂದು ಪ್ರಶ್ನಿಸಿದ್ದಾರೆ.

ಈ ಹಿಂದೆ ರಾಜರಾಜೇಶ್ವರಿನಗರ ಶಾಸಕ ಎನ್ ಮುನಿರತ್ನ ಅವರು, ತಮ್ಮ ಕ್ಷೇತ್ರದ ಸುಮಾರು 126 ಕೋಟಿ ರೂ.ಗಳ ಅನುದಾನ ಮತ್ತು ಅಭಿವೃದ್ಧಿ ಹಣವನ್ನು ಕಡಿತಗೊಳಿಸಿ ಇತರ ಕ್ಷೇತ್ರಗಳಿಗೆ ನೀಡಲಾಗಿದೆ ಎಂದು ಆರೋಪಿಸಿದ್ದರು,

ಈ ವಿಚಾರವಾಗಿ ಗಾಂಧಿ ಪ್ರತಿಮೆ ಎದುರು ಧರಣಿ ಕುಳಿತಿದ್ದರು. ನಂತರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದರು.

ಈ ನಡುವೆ ಬಿಜೆಪಿ ನಾಯಕರ ಶೇ.8ರಷ್ಟು ಡಿಕೆಶಿ ತೆರಿಗೆ ಕುರಿತು ಪ್ರತಿಕ್ರಿಯೆ ನೀಡಲು ಸಂಸದೆ ಶೋಭಾ ಕರಂದ್ಲಾಜೆಯವರು ನಿರಾಕರಿಸಿದ್ದಾರೆ.

ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಕಾನೂನು ಮತ್ತು ಸುವ್ಯವಸ್ಥೆ ವಿಫಲವಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT