ಜಿ.ಟಿ ದೇವೇಗೌಡ 
ರಾಜಕೀಯ

ಚನ್ನಪಟ್ಟಣದಲ್ಲಿ ಡಿಕೆ ಶಿವಕುಮಾರ್ ಸ್ಪರ್ಧಿಸಲ್ಲ, ಕೇವಲ ರಾಜಕೀಯ ತಂತ್ರಗಾರಿಕೆಯಷ್ಟೇ: ಜಿ.ಟಿ.ದೇವೇಗೌಡ

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಚನ್ನಪಟ್ಟಣದ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಕೇವಲ ತಂತ್ರಗಾರಿಕೆ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಹೇಳಿದ್ದಾರೆ.

ಮೈಸೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಚನ್ನಪಟ್ಟಣದ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಕೇವಲ ತಂತ್ರಗಾರಿಕೆ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ನನ್ನ ರಾಜಕೀಯ ಅನುಭವದಿಂದ ಹೇಳುತ್ತಿರುವ ಮಾತು. ಡಿ.ಕೆ ಶಿವಕುಮಾರ್ ಅವರ ಮಾತಲ್ಲಿ ರಾಜಕೀಯ ತಂತ್ರಗಾರಿಕೆ ಇದೆಯಷ್ಟೇ. ಡಿ.ಕೆ ಸುರೇಶ್ ಅವರನ್ನು ಸ್ಪರ್ಧೆಗೆ ಇಳಿಸುವ ದೃಷ್ಟಿಯಿಂದ ನಾನು ಬಂದರೆ ಮತ ಹಾಕುತ್ತೀರಾ ಎಂದು ಜನರನ್ನು ಕೇಳುತ್ತಿದ್ದಾರೆ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.

ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ನಾನೇ ಸ್ಪರ್ಧೆ ಮಾಡುತ್ತೇನೆಂದು ಎಲ್ಲಿಯೂ ಹೇಳಿಲ್ಲ. ಜನಗಳ ಅಭಿಪ್ರಾಯ ನನ್ನ ಪರವಾಗಿದ್ದಾರೆ ಎಂದಷ್ಟೇ ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ. ಅಂತಿಮವಾಗಿ ಮೈತ್ರಿ ನಾಯಕರು ಕುಳಿತು ತೀರ್ಮಾನ ಮಾಡುತ್ತೇವೆ. ಎಲ್ಲಾ ಉಪಚುನಾವಣೆಗಳು ಸರ್ಕಾರದ ಪರವಾಗಿಯೇ ಇರುವುದಿಲ್ಲ. ಒಂದೊಂದು ಬಾರಿ ಒಂದೊಂದು ಟ್ರೆಂಡ್ ನಡೆಯುತ್ತದೆ ಎಂದರು. ನಮ್ಮ ಅಭ್ಯರ್ಥಿ ಯಾರು ಎಂಬುದನ್ನು ನಾವಿನ್ನೂ ತೀರ್ಮಾನ ಮಾಡಿಲ್ಲ. ಕೋರ್ ಕಮಿಟಿಯಲ್ಲಿ ಚರ್ಚೆ ಮಾಡಿ ನಾನೇ ಅದನ್ನು ಹೇಳುತ್ತೇನೆ. ಕೋರ್ ಕಮಿಟಿಯ ಅಧ್ಯಕ್ಷ ನಾನೇ ಆಗಿರುವ ಕಾರಣ ಅಭ್ಯರ್ಥಿ ವಿಚಾರದಲ್ಲಿ ವೈಯಕ್ತಿಕ ಅಭಿಪ್ರಾಯ ಹೇಳಲು ಬರುವುದಿಲ್ಲ ಎಂದು ಜಿ.ಟಿ ದೇವೇಗೌಡ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ನನಗೆ 'CM ವಿಜಯ್' ಕಂಡ್ರೆ ಅಸೂಯೆ: ಸಾರ್ವಜನಿಕವಾಗಿ ಸತ್ಯ ಒಪ್ಪಿಕೊಂಡ ಆಂಧ್ರ DCM ಪವನ್ ಕಲ್ಯಾಣ್!

SCROLL FOR NEXT