ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತಿತರರು 
ರಾಜಕೀಯ

17 ನೂತನ ವಿಧಾನ ಪರಿಷತ್ ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ

ಇತ್ತೀಚಿಗೆ ವಿಧಾನಸಭೆಯಿಂದ ವಿಧಾನಸಭೆಗೆ ಅವಿರೋಧವಾಗಿ ಆಯ್ಕೆಯಾದ ಹಾಗೂ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಚುನಾಯಿತರಾದ ನೂತನ ವಿಧಾನ ಪರಿಷತ್ ಸದಸ್ಯರು ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಬೆಂಗಳೂರು: ಇತ್ತೀಚಿಗೆ ವಿಧಾನಸಭೆಯಿಂದ ವಿಧಾನಸಭೆಗೆ ಅವಿರೋಧವಾಗಿ ಆಯ್ಕೆಯಾದ ಹಾಗೂ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಚುನಾಯಿತರಾದ ನೂತನ ವಿಧಾನ ಪರಿಷತ್ ಸದಸ್ಯರು ಇಂದು ಪ್ರಮಾಣ ವಚನ ಸ್ವೀಕರಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಜರುಗಿತು. ಆಡಳಿತಾರೂಢ ಕಾಂಗ್ರೆಸ್ ಪಕ್ಷದಿಂದ ಡಾ.ಕೆ. ಗೋವಿಂದರಾಜು, ಐವನ್ ಡಿಸೋಜಾ, ಬಲ್ಕಿಸ್ ಬಾನು, ಜಗದೇವ್ ಗುತ್ತೇದಾರ್, ಎನ್.ಎಸ್.ಬೋಸರಾಜು, ಡಾ. ಯತೀಂದ್ರ ಹಾಗೂ ಎ. ವಸಂತ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದರು. ಇನ್ನೂ ಪ್ರತಿಪಕ್ಷ ಬಿಜೆಪಿಯಿಂದ ಮುಲೆ ಮಾರುತಿರಾವ್, ಸಿ.ಟಿ. ರವಿ, ಎನ್.ರವಿಕುಮಾರ್ ಹಾಗೂ ಜೆಡಿಎಸ್ ನಿಂದ ಟಿ.ಎನ್.ಜವರಾಯಿಗೌಡ ಪ್ರಮಾಣ ವಚನ ಸ್ವೀಕರಿಸಿದರು.

ಈಶಾನ್ಯ ಪದವೀಧರ ಕ್ಷೇತ್ರದಿಂದ ಆಯ್ಕೆಯಾದ ಕಾಂಗ್ರೆಸ್ ಪಕ್ಷದ ಡಾ.ಚಂದ್ರಶೇಖರ ಬಸವರಾಜ ಪಾಟೀಲ, ಬೆಂಗಳೂರು ಪದವೀಧರ ಕ್ಷೇತ್ರದ ರಾಮೋಜಿಗೌಡ, ಅಗ್ನೇಯ ಶಿಕ್ಷಕರ ಕ್ಷೇತ್ರದ ಡಿ.ಟಿ. ಶ್ರೀನಿವಾಸ ಹಾಗೂ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕ್ಷರ ಕ್ಷೇತ್ರದಿಂದ ಜೆಡಿಎಸ್ ನ ಎಸ್.ಎಲ್. ಭೋಜೇಗೌಡ, ದಕ್ಷಿಣ ಶಿಕ್ಷಕರ ಕ್ಷೇತ್ರದ ಕೆ. ವಿವೇಕನಾಂದ, ಅಗ್ನೇಯ ಶಿಕ್ಷಕರ ಕ್ಷೇತ್ರದ ಡಿ. ಟಿ. ಶ್ರೀನಿವಾಸ ಪ್ರಮಾಣ ವಚನ ಸ್ವೀಕರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಸಚಿವ ಎಚ್. ಕೆ. ಪಾಟೀಲ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT