ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತಿತರರು 
ರಾಜಕೀಯ

17 ನೂತನ ವಿಧಾನ ಪರಿಷತ್ ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ

ಇತ್ತೀಚಿಗೆ ವಿಧಾನಸಭೆಯಿಂದ ವಿಧಾನಸಭೆಗೆ ಅವಿರೋಧವಾಗಿ ಆಯ್ಕೆಯಾದ ಹಾಗೂ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಚುನಾಯಿತರಾದ ನೂತನ ವಿಧಾನ ಪರಿಷತ್ ಸದಸ್ಯರು ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಬೆಂಗಳೂರು: ಇತ್ತೀಚಿಗೆ ವಿಧಾನಸಭೆಯಿಂದ ವಿಧಾನಸಭೆಗೆ ಅವಿರೋಧವಾಗಿ ಆಯ್ಕೆಯಾದ ಹಾಗೂ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಚುನಾಯಿತರಾದ ನೂತನ ವಿಧಾನ ಪರಿಷತ್ ಸದಸ್ಯರು ಇಂದು ಪ್ರಮಾಣ ವಚನ ಸ್ವೀಕರಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಜರುಗಿತು. ಆಡಳಿತಾರೂಢ ಕಾಂಗ್ರೆಸ್ ಪಕ್ಷದಿಂದ ಡಾ.ಕೆ. ಗೋವಿಂದರಾಜು, ಐವನ್ ಡಿಸೋಜಾ, ಬಲ್ಕಿಸ್ ಬಾನು, ಜಗದೇವ್ ಗುತ್ತೇದಾರ್, ಎನ್.ಎಸ್.ಬೋಸರಾಜು, ಡಾ. ಯತೀಂದ್ರ ಹಾಗೂ ಎ. ವಸಂತ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದರು. ಇನ್ನೂ ಪ್ರತಿಪಕ್ಷ ಬಿಜೆಪಿಯಿಂದ ಮುಲೆ ಮಾರುತಿರಾವ್, ಸಿ.ಟಿ. ರವಿ, ಎನ್.ರವಿಕುಮಾರ್ ಹಾಗೂ ಜೆಡಿಎಸ್ ನಿಂದ ಟಿ.ಎನ್.ಜವರಾಯಿಗೌಡ ಪ್ರಮಾಣ ವಚನ ಸ್ವೀಕರಿಸಿದರು.

ಈಶಾನ್ಯ ಪದವೀಧರ ಕ್ಷೇತ್ರದಿಂದ ಆಯ್ಕೆಯಾದ ಕಾಂಗ್ರೆಸ್ ಪಕ್ಷದ ಡಾ.ಚಂದ್ರಶೇಖರ ಬಸವರಾಜ ಪಾಟೀಲ, ಬೆಂಗಳೂರು ಪದವೀಧರ ಕ್ಷೇತ್ರದ ರಾಮೋಜಿಗೌಡ, ಅಗ್ನೇಯ ಶಿಕ್ಷಕರ ಕ್ಷೇತ್ರದ ಡಿ.ಟಿ. ಶ್ರೀನಿವಾಸ ಹಾಗೂ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕ್ಷರ ಕ್ಷೇತ್ರದಿಂದ ಜೆಡಿಎಸ್ ನ ಎಸ್.ಎಲ್. ಭೋಜೇಗೌಡ, ದಕ್ಷಿಣ ಶಿಕ್ಷಕರ ಕ್ಷೇತ್ರದ ಕೆ. ವಿವೇಕನಾಂದ, ಅಗ್ನೇಯ ಶಿಕ್ಷಕರ ಕ್ಷೇತ್ರದ ಡಿ. ಟಿ. ಶ್ರೀನಿವಾಸ ಪ್ರಮಾಣ ವಚನ ಸ್ವೀಕರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಸಚಿವ ಎಚ್. ಕೆ. ಪಾಟೀಲ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ವಿವಾದ: ಮಾತುಕತೆ ಅಂದ್ರೆ ರಾಜಿ ಎಂದರ್ಥವಲ್ಲ; ಬೆಂಗಳೂರು ಭೇಟಿ ಪ್ರಯತ್ನ ಸಮರ್ಥಿಸಿಕೊಂಡ ತಮಿಳುನಾಡು ಸಿಎಂ ವಿಜಯ್!

ಕೇರಳದಲ್ಲಿ 'ಕೇಸರಿ' ನಿಷೇಧವೇ?: ಬಟ್ಟೆ ಬಣ್ಣದ ಕುರಿತು ಪ್ರಶ್ನಿಸಿದ ಪತ್ರಕರ್ತನಿಗೆ ನಟಿ ಪ್ರಿಯಾ ವಾರಿಯರ್ 'ಶಾಂತ' ತಿರುಗೇಟು!

" ಭಯಪಡಬೇಕಾದ ಅಗತ್ಯವಿಲ್ಲ, ನಾನು ನಿಮ್ಮೊಂದಿಗೆ ಇದ್ದೇನೆ: TMC ಬಂಡಾಯ, ಶಿಂಧೆ ಬಣ ಸೇರಿದ ಶಿವಸೇನಾ ಸಂಸದರಿಗೆ ಪ್ರಧಾನಿ ಮೋದಿ ಅಭಯ!

ಬೆಂಗಳೂರಿನ ಹಾಸ್ಟೆಲ್ ರೂಂನಲ್ಲಿ IISc ವಿದ್ಯಾರ್ಥಿ ಆತ್ಮಹತ್ಯೆ; ಸ್ಥಳದಲ್ಲಿ ಡೆತ್ ನೋಟ್ ಪತ್ತೆ!

NEET leak ಹಗರಣ ತನಿಖೆಯಲ್ಲಿ ಮೇಜರ್ ಟ್ವಿಸ್ಟ್; NTAಯ ವಿಷಯ ತಜ್ಞರಿಂದಲೇ ಪ್ರಶ್ನೆ ಪತ್ರಿಕೆ ಸೋರಿಕೆ! ವರದಿ