ಬಿಜೆಪಿ ಟ್ವೀಟ್ 
ರಾಜಕೀಯ

ಕಾಸ್ಟ್ಲೀ ಕುಮಾರರ ಅಂಧಾ ದರ್ಬಾರ್: ದುಬಾರಿ ಶಾಲು ಧರಿಸಿದ್ದಾಗಿ ಡಿಕೆಶಿ, ಬಿಜೆಪಿ ಟೀಕೆ

ಕುರುಡು ಕಾಂಚಾಣ ಕುಣಿಯುತ್ತದೆ ಎಂಬುದಕ್ಕೆ ಉಪ ಮುಖ್ಯಮತ್ರಿ ಡಿಕೆ ಶಿವಕುಮಾರ್ ಅವರು ನಡೆಸುತ್ತಿರುವ ಅಂಧಾ ದರ್ಬಾರ್ ಸಾಕ್ಷಿ. ನಮ್ಮ ಕಾಸ್ಟ್ಲಿ ಕುಮಾರ್ ಅವರು ಧರಿಸಿರುವ ಶಾಲಿನ ಬೆಲೆ ಬರೋಬ್ಬರಿ ರೂ.59,500 ಎಂದು ಬಿಜೆಪಿ ಆರೋಪ ಮಾಡಿದೆ.

ಬೆಂಗಳೂರು: ಕುರುಡು ಕಾಂಚಾಣ ಕುಣಿಯುತ್ತದೆ ಎಂಬುದಕ್ಕೆ ಉಪ ಮುಖ್ಯಮತ್ರಿ ಡಿಕೆ ಶಿವಕುಮಾರ್ ಅವರು ನಡೆಸುತ್ತಿರುವ ಅಂಧಾ ದರ್ಬಾರ್ ಸಾಕ್ಷಿ. ನಮ್ಮ ಕಾಸ್ಟ್ಲಿ ಕುಮಾರ್ ಅವರು ಧರಿಸಿರುವ ಶಾಲಿನ ಬೆಲೆ ಬರೋಬ್ಬರಿ ರೂ.59,500 ಎಂದು ಬಿಜೆಪಿ ಆರೋಪ ಮಾಡಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಕುರುಡು ಕಾಂಚಾಣ ಕುಣಿಯುತ್ತದೆ ಎಂಬುದಕ್ಕೆ ಡಿಸಿಎಂ ಡಿಕೆ.ಶಿವಕುಮಾರ್ ಅವರು ನಡೆಸುತ್ತಿರುವ ಅಂಧಾ ದರ್ಬಾರ್ ಸಾಕ್ಷಿ. ನಮ್ಮ ಕಾಸ್ಟ್ಲಿ ಕುಮಾರ್ ಅವರು ಧರಿಸಿರುವ ಶಾಲಿನ ಬೆಲೆ ಬರೋಬ್ಬರಿ ರೂ.59,500. ಬೆಲೆಯೇರಿಕೆಯಿಂದ ಜನ ಒಂದ್ಹೊತ್ತಿನ ಊಟಕ್ಕೂ ತತ್ವಾರ ಅನುಭವಿಸುತ್ತಿದ್ದಾರೆ, ಆದರೆ ಜನಪ್ರತಿನಿಧಿಗಳು ಮಾತ್ರ ಜನರ ತೆರಿಗೆ ದುಡ್ಡಿನಲ್ಲಿ ಶೋಕಿ ಮಾಡುತ್ತಿರುವುದು ನಿಜಕ್ಕೂ ದುರಂತ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಇನ್ನು ಇದೇ ವೇಳೆ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಹೆಚ್ಚುವರಿ ಡಿಸಿಎಂ ಹುದ್ದೆ ಬಗ್ಗೆಯೂ ಬಿಜೆಪಿ ವ್ಯಂಗ್ಯವಾಡಿದೆ.

ದಿನ ಬೆಳಗಾದರೆ ಕಾಂಗ್ರೆಸ್ ರಗಳೆ, ಜನರಿಗೆ ತಪ್ಪೋಗಿಲ್ಲ ಬವಣೆ ಎಂಬ ಒಕ್ಕಣೆಯಲ್ಲಿ ಪೋಸ್ಟರ್ ಹಾಕಿರುವ ಬಿಜೆಪಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವ ಸತೀಶ್ ಜಾರಕಿಹೊಳಿ, ಕೆಎನ್ ರಾಜಣ್ಣ, ಜಮೀರ್ ಅಹ್ಮದ್ ಖಾನ್ ಅವರ ಫೋಟೋಗಳನ್ನು ಬಳಸಿಕೊಂಡಿದೆ.

ಡಿಸಿಎಂ ಹುದ್ದೆ ವಿಚಾರವಾಗಿ ಪತ್ರಿಕಾ ವರದಿಗಳ ಕಟಿಂಗ್ ಗಳನ್ನೂ ಹಾಕಿರುವ ಬಿಜೆಪಿ, ಕಾಂಗ್ರೆಸ್ ನಲ್ಲಿ ಸರ್ಕಾರದ ಆಡಳಿತದಲ್ಲಿ ದಿನ ಬೆಳಗಾದರೆ… ಡಿಸಿಎಂ ಹುದ್ದೆಗಾಗಿ ಕಿತ್ತಾಟ! ಸಚಿವ ಸ್ಥಾನಕ್ಕಾಗಿ ಗುದ್ದಾಟ! ಅನುದಾನಕ್ಕಾಗಿ ಶಾಸಕರ ಹೋರಾಟ! ಲೂಟಿ ಮಾಡುವುದಕ್ಕೆ ನಿರಂತರ ಪೈಪೋಟಿ. ಕನ್ನಡಿಗರ ಕಲ್ಯಾಣ ಮರೆತ ಸಿದ್ದರಾಮಯ್ಯ ನವರ ಸರ್ಕಾರದಲ್ಲಿನ ಕಾದಾಟ ಇಲ್ಲಿಗೆ ನಿಲ್ಲುವುದಿಲ್ಲ, ಬಣ ರಾಜಕೀಯ, ಒಳಜಗಳ ಒಂದು ದಿನ ವಿಸ್ಫೋಟಗೊಂಡು ಸರ್ಕಾರ ಪತನಗೊಳ್ಳುವುದು ಗ್ಯಾರಂಟಿ.'' ಎಂದು ಭವಿಷ್ಯ ನುಡದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT