ಡಿಸಿಎಂ ಡಿಕೆ ಶಿವಕುಮಾರ್ 
ರಾಜಕೀಯ

ರೈತರ ಒತ್ತಡಕ್ಕೆ ಮಣಿದು ಹಾಲಿನ ದರ ಏರಿಕೆ ಮಾಡಲಾಗಿದೆ: ಡಿಸಿಎಂ ಡಿ.ಕೆ ಶಿವಕುಮಾರ್

ರೈತರ ಒತ್ತಡಕ್ಕೆ ಮಣಿದು ಹಾಲಿನ ದರ ಏರಿಕೆ ಮಾಡಲಾಗಿದೆ ಎಂದು ಉಪ ಮುಖ್ಯಮಮತ್ರಿ ಡಿಕೆ. ಶಿವಕುಮಾರ್ ಅವರು ಮಂಗಳವಾರ ಹೇಳಿದರು.

ಮಂಗಳೂರು: ರೈತರ ಒತ್ತಡಕ್ಕೆ ಮಣಿದು ಹಾಲಿನ ದರ ಏರಿಕೆ ಮಾಡಲಾಗಿದೆ ಎಂದು ಉಪ ಮುಖ್ಯಮಮತ್ರಿ ಡಿಕೆ. ಶಿವಕುಮಾರ್ ಅವರು ಮಂಗಳವಾರ ಹೇಳಿದರು.

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ‌ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀರಿನ ಬೆಲೆಯು ಲೀಟರ್ ಗೆ 25 ರೂಪಾಯಿ ಆಗಿದೆ. ಹಾಲಿನ ಬೆಲೆ ಹೆಚ್ಚು ಮಾಡಬೇಕೆಂದು ರೈತರ ಒತ್ತಡವಿತ್ತು. ಹಾಗಾಗಿ ರೈತರ ಒತ್ತಾಯದಿಂದಾಗಿ ಹಾಲಿನ ದರ ಹೆಚ್ಚಳ ಮಾಡಲಾಗಿದೆ ಎಂದು ಹೇಳಿದರು.

ಇದೇ ವೇಳೆ ಚನ್ನಪಟ್ಟಣಕ್ಕೆ ಡಿಕೆ.ಶಿವಕುಮಾರ್ ಏನೂ ಮಾಡಿಲ್ಲ ಎಂಬ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಅವರು, ಚನ್ನಪಟ್ಟಣಕ್ಕೆ ನಾನು ಏನು ಮಾಡಿದ್ದೇನೆ, ಏನು ಮಾಡಿಲ್ಲ ಎಂಬುದು ಕುಮಾರಸ್ವಾಮಿಗೇನು ಗೊತ್ತು? ನಾನು 1985ರಲ್ಲೇ ಅವರ ತಂದೆ ವಿರುದ್ಧ ಚುನಾವಣೆಗೆ ನಿಂತವನು. ಕುಮಾರಸ್ವಾಮಿ 1995ರ ಬಳಿಕ ಲೋಕಸಭಾ ಚುನಾವಣೆಗೆ ನಿಂತವರು. ದೊಡ್ಡವರು ಅಧಿಕಾರ ಅನುಭವಿಸಿದರೂ ಚನ್ನಪಟ್ಟಣದಲ್ಲಿ ಏನೂ ಅಭಿವೃದ್ಧಿಯಾಗಿಲ್ಲ ಎಂಬ ಭಾವನೆ ಅಲ್ಲಿನ ಜನರಲ್ಲಿದೆ. ಅಲ್ಲಿನ ಜನರಿಗೆ ಅಳಿಲು ಸೇವೆೆ ಮಾಡಬೇಕಿದೆ. ಈಗ ಉತ್ತಮ ಸಮಯ ಒದಗಿಬಂದಿದೆ. ಸಣ್ಣ ಸಹಾಯ ಮಾಡೋಣ ಎಂದು ಕಾರ್ಯಪ್ರವೃತ್ತನಾಗಿದ್ದೇನೆಂದು ತಿಳಿಸಿದರು.

ಚನ್ನಪಟ್ಟಣ ಉಪ ಚುನಾವಣೆಗೆ ಸ್ಪರ್ಧಿಸಲು ಡಿ.ಕೆ.ಸುರೇಶ್ ಅವರಿಗೆ ಆಸಕ್ತಿ ಇಲ್ಲ. ಜನರು ಸುರೇಶ್'ಗೆ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೆ ಹೇಳಿದ್ದಾರೆ. ಆದರೆ, ಅವರಿಗೆ ಪಕ್ಷದ ಕೆಲಸ ಮಾಡಬೇಕೆಂಬ ಆಸೆಯಿದೆ. ನಮ್ಮನ್ನು ನಂಬಿ ಚನ್ನಪಟ್ಟಣದ ಜನ 85 ಸಾವಿರ ಮತ ಕೊಟ್ಟಿದ್ದಾರೆ. ದೇವರಂಥ ಜನ ರಾಜ್ಯದಲ್ಲಿ ನಮಗೆ 136 ಸ್ಥಾನ ಗೆಲ್ಲಿಸಿ ಅಧಿಕಾರ ಕೊಟ್ಟಿದ್ದಾರೆ. ಅದನ್ನು ಜನರ ಅಭಿವೃದ್ಧಿಗೆ ವಿನಿಯೋಗಿಸಬೇಕಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT