ಬಿಜೆಪಿ ಶಾಸಕ ಆರ್.ಅಶೋಕ್ 
ರಾಜಕೀಯ

ಡಿಕೆಶಿ ಜೊತೆ ವೈಮನಸ್ಸಿದ್ದರೆ ನಾಲ್ಕು ಗೋಡೆಗಳ ಮಧ್ಯೆ ಪರಿಹರಿಸಿಕೊಳ್ಳಿ, ಸ್ವಾಮೀಜಿಗಳ ಬಗ್ಗೆ ಅಗೌರವದಿಂದ ಮಾತನಾಡುವುದು ಸರಿಯಲ್ಲ: BJP

ಸಿದ್ದರಾಮಯ್ಯ ಅವರೇ ಡಿಕೆಶಿ ಜೊತೆ ವೈಮನಸ್ಸಿದ್ದರೆ ನಾಲ್ಕು ಗೋಡೆಗಳ ಮಧ್ಯೆ ಪರಿಹರಿಸಿಕೊಳ್ಳಿ, ಸ್ವಾಮೀಜಿಗಳ ಬಗ್ಗೆ ಅಗೌರವದಿಂದ ಮಾತನಾಡುವುದು ನಿಮಗೆ ಶೋಭೆ ತರುವುದಿಲ್ಲ ಎಂದು ಬಿಜೆಪಿ ಶನಿವಾರ ಹೇಳಿದೆ.

ಬೆಂಗಳೂರು: ಸಿದ್ದರಾಮಯ್ಯ ಅವರೇ ಡಿಕೆಶಿ ಜೊತೆ ವೈಮನಸ್ಸಿದ್ದರೆ ನಾಲ್ಕು ಗೋಡೆಗಳ ಮಧ್ಯೆ ಪರಿಹರಿಸಿಕೊಳ್ಳಿ, ಸ್ವಾಮೀಜಿಗಳ ಬಗ್ಗೆ ಅಗೌರವದಿಂದ ಮಾತನಾಡುವುದು ನಿಮಗೆ ಶೋಭೆ ತರುವುದಿಲ್ಲ ಎಂದು ಬಿಜೆಪಿ ಶನಿವಾರ ಹೇಳಿದೆ.

ಸಿಎಂ ಸ್ಥಾನವನ್ನು ಡಿಕೆ.ಶಿವಕುಮಾರ್ ಅವರಿಗೆ ಬಿಟ್ಟುಕೊಡುವಂತೆ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಮನವಿ ಮಾಡಿದ ಬೆನ್ನಲ್ಲೇ ವ್ಯಕ್ತಿಯೊಬ್ಬರೊಂದಿಗೆ ಸಿದ್ದರಾಮಯ್ಯ ಅವರು ನಡೆಸಿರುವ ಮಾತುಕತೆ ವೀಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿ ಸಿದ್ದರಾಮಯ್ಯ ಅವರು ಆಡಿರುವ ಮಾತುಗಳಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕೇಸರಿ, ಕುಂಕುಮ ಕಂಡರೆ ದ್ವೇಷ ಕಾರುವ ಸಿಎಂ ಸಿದ್ದರಾಮಯ್ಯನವರು ಈಗ ಒಕ್ಕಲಿಗ ಸ್ವಾಮೀಜಿಗಳ ವಿರುದ್ಧ ಏಕವಚನ ಪ್ರಯೋಗ ಮಾಡಿ ನಿಂದಿಸುವ ಮೂಲಕ ಮತ್ತೊಮ್ಮೆ ತಮ್ಮ ಹಿಂದೂ ವಿರೋಧಿ ಧೋರಣೆ ಪ್ರದರ್ಶನ ಮಾಡಿದ್ದಾರೆ. ಸ್ವಾಮಿ ಸಿದ್ದರಾಮಯ್ಯನವರೇ, ನಿಮ್ಮ ಮತ್ತು ಡಿಸಿಎಂ ಡಿಕೆ.ಶಿವಕುಮಾರ್ ನಡುವೆ ವೈಮನಸ್ಯವಿದ್ದರೆ ಅದನ್ನ ಪಕ್ಷದ ವೇದಿಕೆಯಲ್ಲಿ ನಾಲ್ಕು ಗೋಡೆಗಳ ಮಧ್ಯೆ ಪರಿಹರಿಸಿಕೊಳ್ಳಿ. ಅದು ಬಿಟ್ಟು, ಸ್ವಾಮೀಜಿಗಳು ವ್ಯಕ್ತಪಡಿಸಿದ ಅಭಿಪ್ರಾಯದ ಬಗ್ಗೆ ಈ ರೀತಿ ಅಗೌರವದಿಂದ ಮಾತನಾಡುವುದು ನಿಮಗೆ ಶೋಭೆ ತರುವುದಿಲ್ಲ. ಒಕ್ಕಲಿಗ ಸಮುದಾಯ ಇದನ್ನ ತೀವ್ರವಾಗಿ ಖಂಡನೆ ಮಾಡುತ್ತದೆ ಎಂದು ಹೇಳಿದ್ದಾರೆ.

ಮತ್ತೊಂದು ಪೋಸ್ಟ್ ನಲ್ಲಿ ಗೃಹ ಸಚಿವ ಪರಮೇಶ್ವರ್ ವಿರುದ್ದವೂ ಕಿಡಿಕಾರಿದ್ದಾರೆ. ದಿಕ್ಕು ದೆಸೆಯಿಲ್ಲದ ನೀತಿಗಳಿಂದ ಪಾಪರ್ ಆಗಿರುವ ಕಾಂಗ್ರೆಸ್ ಸರ್ಕಾರದ ಬಳಿ ಸಂತ್ರಸ್ಥೆ ಕುಟುಂಬಕ್ಕೆ ಪರಿಹಾರ ನೀಡುವುದಕ್ಕೂ ದುಡ್ಡಿಲ್ಲ. ಹುಬ್ಬಳ್ಳಿಯಲ್ಲಿ ಕೊಲೆಗೀಡಾಗಿದ್ದ ಅಂಜಲಿ ಅಂಬಿಗೇರ ಮನೆಗೆ ಮೇ 20 ರಂದು ಡಾ. ಪರಮೇಶ್ವರ್ ಭೇಟಿ ನೀಡಿ, ಪರಿಹಾರದ ಭರವಸೆ ನೀಡಿದ್ದರು. ಚುನಾವಣೆ ನೀತಿ ಸಂಹಿತೆ ಮುಗಿದು ತಿಂಗಳು ಕಳೆಯುತ್ತಾ ಬಂದರೂ ಕಾಂಗ್ರೆಸ್ ಸರ್ಕಾರಕ್ಕೆ ಕೊಟ್ಟ ಮಾತು ಮರೆತು ಹೋಗಿದೆ.

ಬಣ್ಣ ಬಣ್ಣದ ಕಾಗೆ ಹಾರಿಸಿ ಜನರಿಗೆ ಟೋಪಿ ಹಾಕುವುದು, ವಿಶ್ವಾಸ ದ್ರೋಹ ಬಗೆಯುವುದೇ ಸಿದ್ದರಾಮಯ್ಯನವರ ಸರ್ಕಾರ ಕೊಡುವ ಗ್ಯಾರಂಟಿ. ಮೊದಲೇ ನೀಚಕೃತ್ಯದಿಂದ ನೊಂದಿರುವ ಸಂತ್ರಸ್ಥೆ ಕುಟುಂಬಕ್ಕೆ ಪರಿಹಾರ ನೀಡದಷ್ಟು ದಯನೀಯ ಸ್ಥಿತಿಗೆ ಸರ್ಕಾರ ತಲುಪಿರುವುದು ಕನ್ನಡಿಗರ ದೌರ್ಭಾಗ್ಯ ಎಂದು ಕಿಡಿಕಾರಿದ್ದಾರೆ.

ಬೆಲೆ ಏರಿಕೆ ವಿರುದ್ಧ ರಾಜ್ಯ ಬಿಜೆಪಿ ಪೋಸ್ಟ್ ಮಾಡಿದ್ದು, ಸರ್ಕಾರದ ಕುರಿತು ವ್ಯಂಗ್ಯವಾಡಿದೆ. ಇಂಧನ, ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮಾಡಿ ರಾಜ್ಯದ ಜನರ ನೆಮ್ಮದಿಗೆ ಕೊಳ್ಳಿಯಿಟ್ಟಿರುವ ಸಿಎಂ ಸಿದ್ದರಾಮಯ್ಯ ಅವರು ಇದೀಗ ಹೊಸ ಸಂಶೋಧನೆಗೆ ಇಳಿದಿದ್ದಾರೆ. 25 ಸಾವಿರ ಎಕರೆ ಸಾರ್ವಜನಿಕ ಆಸ್ತಿ ಅಡವಿಡಲು ಆಳ ಅಧ್ಯಯನ ನಡೆಸಿದ ಕಾಂಗ್ರೆಸ್ ಸರ್ಕಾರವೀಗ, ಬಸ್ ಪ್ರಯಾಣ ದರ ಸೇರಿ ಬೆಲೆ ಏರಿಕೆಗೆ ಇನ್ನೇನಾದರೂ ಉಳಿದಿದೆಯಾ? ಅಂತ ದುರ್ಬಿನ್ ಹಾಕಿಕೊಂಡು ಶೋಧನೆಯಲ್ಲಿ ತೊಡಗಿದೆ.

ಕಾಂಗ್ರೆಸ್ ಅಂದ್ರೆ ಜನರ ಜೇಬಿಗೆ ಕತ್ತರಿ ಖಚಿತ, ಕರುನಾಡು ದಿವಾಳಿ ಖಂಡಿತ ಹಾಗೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಕನ್ನಡಿಗರು ದಂಗೆ ಏಳುವುದು ನಿಶ್ಚಿತ ಎಂದು ಲೇವಡಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT