ಸಂಗ್ರಹ ಚಿತ್ರ 
ರಾಜಕೀಯ

'ಟ್ರೋಲ್ ಮಿನಿಸ್ಟರ್' ಪ್ರಿಯಾಂಕ್ ಖರ್ಗೆ ಉಸ್ತುವಾರಿ ಅವಧಿಯಲ್ಲಿ ಕೊಲೆ ಸುಲಿಗೆಗಳದ್ದೇ ದರ್ಬಾರು: ಬಿಜೆಪಿ ಟೀಕೆ

ಕಲಬುರಗಿ ಸಂಸದ ಉಮೇಶ್​ ಜಾಧವ್​ ಬೆಂಬಲಿಗ, ಬಿಜೆಪಿ ಮುಖಂಡ ಗಿರೀಶ್ ಚಕ್ರ ಹತ್ಯೆಯಾದ ಬೆನ್ನಲ್ಲೇ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ.

ಬೆಂಗಳೂರು: ಕಲಬುರಗಿ ಸಂಸದ ಉಮೇಶ್​ ಜಾಧವ್​ ಬೆಂಬಲಿಗ, ಬಿಜೆಪಿ ಮುಖಂಡ ಗಿರೀಶ್ ಚಕ್ರ ಹತ್ಯೆಯಾದ ಬೆನ್ನಲ್ಲೇ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರಣಿ ಪೋಸ್ಟ್ ಮಾಡಿರುವ ಬಿಜೆಪಿ, ಟ್ರೋಲ್ ಮಿನಿಸ್ಟರ್ ಪ್ರಿಯಾಂಕ್ ಖರ್ಗೆ ಉಸ್ತುವಾರಿ ಅವಧಿಯಲ್ಲಿ ಜಿಲ್ಲೆಯಲ್ಲಿ ಕೊಲೆ ಸುಲಿಗೆಗಳದ್ದೇ ದರ್ಬಾರು ನಡೆಯುತ್ತಿದೆ ಎಂದು ಕಿಡಿಕಾರಿದೆ.

ಶರಣರ ನಾಡಾಗಿದ್ದ ಕಲ್ಬುರ್ಗಿಯನ್ನು ಮರಣದ ನಾಡನ್ನಾಗಿಸುತ್ತಿದೆ ಕಾಂಗ್ರೆಸ್ ಸರ್ಕಾರ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅದರಲ್ಲಿಯೂ ಟ್ರೋಲ್ ಮಿನಿಸ್ಟರ್ ಪ್ರಿಯಾಂಕ್ ಖರ್ಗೆ ಅವರು ಜಿಲ್ಲೆಯ ಉಸ್ತುವಾರಿ ಸಚಿವರಾದ ಮೇಲೆ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಸಚಿವರ ಪುಂಡ ಪೋಕರಿ ಪಟಾಲಂ ಹೇಳಿದ್ದೇ ಕಾನೂನು, ಮಾಡಿದ್ದೇ ನ್ಯಾಯ ಎನ್ನುವಷ್ಟರ ಮಟ್ಟಿಗೆ ಆಡಳಿತ ಕುಸಿದಿದೆ.

ಆಳಂದ ತಾಲೂಕಿನಲ್ಲಿ ಹಾಡುಹಗಲೆ ಬಿಜೆಪಿ ಮುಖಂಡ ಮಹಾಂತಪ್ಪ ಆಲೂರೆಯವರನ್ನು ಕೊಚ್ಚಿ ಕೊಲೆ ಮಾಡಿದರೂ ಇದುವರೆಗೂ ಆರೋಪಿಗಳ ಬಂಧನವಾಗಿಲ್ಲ. ಸಿಎಂ ಸಿದ್ದರಾಮಯ್ಯ ಅವರೇ, ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಕಲ್ಬುರ್ಗಿಯಲ್ಲಿ ಆಗುತ್ತಿರುವ ಕೊಲೆ,ಸುಲಿಗೆಗಳಿಗೆ ಲೆಕ್ಕವೇ ಇಲ್ಲ. ಮೊದಲು ಕಾನೂನು ಸುವ್ಯವಸ್ಥೆಯನ್ನು ಬಿಗಿಗೊಳಿಸಿ, ಇಲ್ಲವಾದಲ್ಲಿ ನಿವೃತ್ತಿ ಘೋಷಿಸಿ ಮನೆಗೆ ನಡೆಯಿರಿ ಎಂದು ಹೇಳಿದೆ.

ಟ್ರೋಲ್ ಮಿನಿಸ್ಟರ್ ಅವರ ಉಸ್ತುವಾರಿ ಅವಧಿಯಲ್ಲಿ ಕಲ್ಬುರ್ಗಿಯಲ್ಲಿ ಕೇವಲ ಕೊಲೆ-ಸುಲಿಗೆಗಳದ್ದೇ ದರ್ಬಾರು. ಪ್ರಿಯಾಂಕ್ ಉಸ್ತುವಾರಿ ಸಚಿವರಾದ ಈ 10 ತಿಂಗಳಲ್ಲಿ ಬಿಜೆಪಿ ಕಾರ್ಯಕರ್ತರು, ಮುಖಂಡರು ಸಾಲು ಸಾಲಾಗಿ ಹತ್ಯೆಗೀಡಾಗುತ್ತಿದ್ದಾರೆ. ಇದಕ್ಕೆ ಕಲ್ಬುರ್ಗಿಯನ್ನು ತಮ್ಮ ಪುಂಡ ಪೋಕರಿ ಪಟಾಲಂಗೆ ಒಪ್ಪಿಸಿರುವ ಸಚಿವ ಪ್ರಿಯಾಂಕ್ ಖರ್ಗೆಯವರೇ ನೇರ ಹೊಣೆ.

ಮಹಾಂತಪ್ಪ ಆಲೂರೆಯವರ ಹತ್ಯೆ ಬೆನ್ನಲ್ಲೇ ಮತ್ತೊಬ್ಬ ಬಿಜೆಪಿ ಮುಖಂಡ ಗಿರೀಶ್ ಚಕ್ರರವರನ್ನು ಸಹ ಹತ್ಯೆಗೈಯಲಾಗಿದೆ. ಸಿಎಂ ಸಿದ್ದರಾಮಯ್ಯ ಅವರೇ, ಕಲ್ಬುರ್ಗಿಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣ ಹಳ್ಳ ಹಿಡಿಸಿರುವ ಸಚಿವ ಪ್ರಿಯಾಂಕ್ ಖರ್ಗೆಯವರನ್ನು ಮೊದಲು ಸಂಪುಟದಿಂದ ವಜಾ ಮಾಡಿ ಎಂದು ಆಗ್ರಹಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ