ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ 
ರಾಜಕೀಯ

ರಾಜ್ಯಸಭಾ ಚುನಾವಣೆ: ಎಸ್ ಟಿ ಸೋಮಶೇಖರ್, ಶಿವರಾಮ ಹೆಬ್ಬಾರ್ ಗೆ ಬಿಜೆಪಿ ಶೋಕಾಸ್ ನೋಟಿಸ್

ಇತ್ತೀಚಿಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಯಶವಂತಪುರದ ಶಾಸಕ ಎಸ್.ಟಿ. ಸೋಮಶೇಖರ್ ಹಾಗೂ ಮತದಾನದಿಂದ ದೂರ ಉಳಿದ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಅವರಿಗೆ ಬಿಜೆಪಿ ಮುಖ್ಯ ಸಚೇತಕರು ಶೋಕಾಸ್ ನೋಟಿಸ್ ನೀಡಿದ್ದಾರೆ.

ಬೆಂಗಳೂರು: ಇತ್ತೀಚಿಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಯಶವಂತಪುರದ ಶಾಸಕ ಎಸ್.ಟಿ. ಸೋಮಶೇಖರ್ ಹಾಗೂ ಮತದಾನದಿಂದ ದೂರ ಉಳಿದ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಅವರಿಗೆ ಬಿಜೆಪಿ ಮುಖ್ಯ ಸಚೇತಕರು ಶೋಕಾಸ್ ನೋಟಿಸ್ ನೀಡಿದ್ದಾರೆ.

ಫೆಬ್ರವರಿ 27 ರಂದು ನಡೆದ ಚುನಾವಣೆಯಲ್ಲಿ ಎಸ್ ಟಿ ಸೋಮಶೇಖರ್ ಬಿಜೆಪಿ ಪಕ್ಷದ ವಿಪ್ ಉಲ್ಲಂಘಿಸಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ಮಾಕೇನ್ ಗೆ ಅಡ್ಡ ಮತದಾನ ಮಾಡಿದ ನಂತರ ಕಾಂಗ್ರೆಸ್ ಮೂರು ರಾಜ್ಯಸಭಾ ಸ್ಥಾನಗಳನ್ನು ಗೆದ್ದುಕೊಂಡರೆ, ಬಿಜೆಪಿ ಕೇವಲ ಒಂದು ಸ್ಥಾನ ಗಳಿಸಿತ್ತು. ಇದು ಕೇಸರಿ ಪಕ್ಷಕ್ಕೆ ದೊಡ್ಡ ಹಿನ್ನೆಡೆಯುಂಟುಮಾಡಿತ್ತು.

ಕೆಲ ತಿಂಗಳುಗಳಿಂದ ಪಕ್ಷದ ನಾಯಕ್ವದೊಂದಿಗೆ ಅಸಮಾಧಾನ ಹೊಂದಿದ್ದ ಎಸ್. ಟಿ. ಸೋಮಶೇಖರ್ ಹಾಗೂ ಶಿವರಾಮ ಹೆಬ್ಬಾರ್, ಕಾಂಗ್ರೆಸ್ ನೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ. ಈ ಇಬ್ಬರೂ ಶಾಸಕರು 2019ರಲ್ಲಿ ಇತರ 15 ಮಂದಿಯೊಂದಿಗೆ ಬಿಜೆಪಿ ಸೇರ್ಪಡೆಯಾಗುವ ಮೂಲಕ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾಗಿದ್ದರು.

ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಅಜಯ್ ಮಾಕೇನ್, ನಾಸೀರ್ ಹುಸೈನ್ ಮತ್ತು ಜಿಸಿ ಚಂದ್ರಶೇಖರ್, ಬಿಜೆಪಿಯ ನಾರಾಯಣ ಬಾಡಂಗೆ ಗೆಲುವು ಸಾಧಿಸಿದರೆ, ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಡಿ ಕುಪೇಂದ್ರ ರೆಡ್ಡಿ ಸೋಲನ್ನುಭವಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ