ಗೀತಾ ಶಿವರಾಜ್‌ಕುಮಾರ್ 
ರಾಜಕೀಯ

ಶಿವಮೊಗ್ಗ ಟಿಕೆಟ್ ಬಗ್ಗೆ ಕಾಂಗ್ರೆಸ್ ವರಿಷ್ಠರು ನಿರ್ಧಿರಿಸುತ್ತಾರೆ: ಗೀತಾ ಶಿವರಾಜಕುಮಾರ್

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯಾರಾಗಬೇಕೆಂಬುದನ್ನು ಪಕ್ಷದ ಕೇಂದ್ರ ನಾಯಕರು ನಿರ್ಧರಿಸುತ್ತಾರೆ ಎಂದು ಕಾಂಗ್ರೆಸ್ ನಾಯಕಿ ಗೀತಾ ಶಿವರಾಜಕುಮಾರ್ ಹೇಳಿದ್ದಾರೆ.

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯಾರಾಗಬೇಕೆಂಬುದನ್ನು ಪಕ್ಷದ ಕೇಂದ್ರ ನಾಯಕರು ನಿರ್ಧರಿಸುತ್ತಾರೆ ಎಂದು ಕಾಂಗ್ರೆಸ್ ನಾಯಕಿ ಗೀತಾ ಶಿವರಾಜಕುಮಾರ್ ಹೇಳಿದ್ದಾರೆ.

ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಸಮಾಜ ಸೇವೆಯಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದು, ತಮ್ಮ ತಾಯಿ ಶಕುಂತಲಾ ಬಂಗಾರಪ್ಪ ಅವರು ಮೈಸೂರಿನಲ್ಲಿ ಪ್ರಾರಂಭಿಸಿದ ಚಟುವಟಿಕೆಗಳನ್ನು ಮುಂದುವರೆಸುತ್ತಿದ್ದೇನೆ. ಸಮಾಜ ಸೇವೆಗೂ ರಾಜಕೀಯ ವೇದಿಕೆ ಕಲ್ಪಿಸುತ್ತದೆ ಎಂದರು.

ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಚುನಾವಣಾ ಪ್ರಚಾರದ ಸಮಯದಲ್ಲಿ ನಾನು ಪಕ್ಷದೊಂದಿಗಿದ್ದೆ ಮತ್ತು ನಂತರವೂ ಬಳ್ಳಾರಿ ಮತ್ತು ಬೆಳಗಾವಿಯಂತಹ ಸ್ಥಳಗಳಿಗೆ ಭೇಟಿ ನೀಡಿದ್ದೇನೆ ಎಂದು ಹೇಳಿದರು.

'ನನ್ನ ಪತ್ನಿಯನ್ನು ಸಂಸದೆಯಾಗಿ ನೋಡಲು ನಾನು ಇಷ್ಟಪಡುತ್ತೇನೆ. ಎಂಎಲ್ಎ ಅಥವಾ ಎಂಪಿ ಆಗಿ ಅವರು ಮಹಿಳೆಯರಿಗೆ ಪ್ರೇರಕ ಅಂಶವಾಗುತ್ತಾರೆ. ಹಾಗಾಗಿ, ಗೀತಾ ಅವರನ್ನು ಚುನಾಯಿತ ಪ್ರತಿನಿಧಿಯಾಗಿ ನೋಡಲು ನಾನು ಬಯಸುತ್ತೇನೆ' ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದಾರೆ.

ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಟಿಕೆಟ್‌ಗಾಗಿ ಗೀತಾ ಹೆಸರು ಕೇಳಿಬರುತ್ತಿದೆ. ಇದೇ ವೇಳೆ, ರಾಜಕೀಯಕ್ಕೆ ಸೇರುವ ಮತ್ತು ಚುನಾವಣೆಗೆ ಸ್ಪರ್ಧಿಸುವ ಯಾವುದೇ ಉದ್ದೇಶವಿಲ್ಲ. ಆದರೆ, ಪಕ್ಷದ ಹೈಕಮಾಂಡ್ ಟಿಕೆಟ್ ನೀಡಿದರೆ ಗೀತಾ ಪರ ಪ್ರಚಾರ ನಡೆಸುವುದು ಖಚಿತ ಎಂದು ಶಿವರಾಜ್‌ಕುಮಾರ್ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಪ್ಪು ಸಮುದ್ರದಲ್ಲಿ ವಾಣಿಜ್ಯ ಹಡಗಿನ ಮೇಲೆ ಭೀಕರ ದಾಳಿ; ಭಾರತೀಯ ನಾವಿಕ ಬಲಿ, ಭಾರತ ತೀವ್ರ ಖಂಡನೆ..!

26 ದಿನ ಉಪವಾಸ ಮಾಡಿದ್ದೇನೆ... ಇನ್ನೂ ನನ್ನ ಪ್ರಾಮಾಣಿಕತೆಗೆ ಸಾಕ್ಷಿ ಬೇಕೇ?; ಟೀಕಾಕಾರರಿಗೆ ಸೋನಂ ವಾಂಗ್ಚುಕ್ ತಿರುಗೇಟು

Instagramನಲ್ಲಿ 30 ಕೋಟಿ ವೀಕ್ಷಣೆ ದಾಟಿದ Video: ನಿಮ್ಮ ಪ್ರೀತಿ-ಸಲಹೆಗಳು ಹೀಗೆ ಮುಂದುವರಿಯಲಿ; ಯುವ ಜನತೆಗೆ ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ

NEET ಪರೀಕ್ಷೆ ನಡೆಸುವ NTA ನಲ್ಲಿ ಮೇಜರ್ ಸರ್ಜರಿ: 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ!

ಇರಾನ್ ಜಲ ಪ್ರದೇಶದಲ್ಲಿ 28 ಭಾರತೀಯ ಸಿಬ್ಬಂದಿಯಿದ್ದ LPG ಟ್ಯಾಂಕರ್ ಮೇಲೆ ದಾಳಿ!