ಸುಮಲತಾ ಅಂಬರೀಷ್ 
ರಾಜಕೀಯ

ಯಶ್ ಈಗ ಪ್ಯಾನ್ ಇಂಡಿಯಾ ಸ್ಟಾರ್, ಚುನಾವಣಾ ಪ್ರಚಾರಕ್ಕೆ ಬರದಿದ್ದರೇ ಬೇಜಾರಿಲ್ಲ: ಸುಮಲತಾ

ಯಶ್ ಈಗ ಪ್ಯಾನ್ ಇಂಡಿಯಾ ಸ್ಟಾರ್, ಅವರು ಪ್ರಚಾರಕ್ಕೆ ಬರಬೇಕೆಂದು ನಿರೀಕ್ಷಿಸುವುದು ಸರಿಯಲ್ಲ. ಅವರಾಗಿಯೇ ಬರುವುದಾದರೆ ಸಂತೋಷಪಡುತ್ತೇನೆ ಎಂದು ಸುಮಲತಾ ಅಂಬರೀಷ್ ಹೇಳಿದ್ದಾರೆ.

ಮಂಡ್ಯ: ಯಶ್ ಈಗ ಪ್ಯಾನ್ ಇಂಡಿಯಾ ಸ್ಟಾರ್, ಅವರು ಪ್ರಚಾರಕ್ಕೆ ಬರಬೇಕೆಂದು ನಿರೀಕ್ಷಿಸುವುದು ಸರಿಯಲ್ಲ. ಅವರಾಗಿಯೇ ಬರುವುದಾದರೆ ಸಂತೋಷಪಡುತ್ತೇನೆ ಎಂದು ಸುಮಲತಾ ಅಂಬರೀಷ್ ಹೇಳಿದ್ದಾರೆ.

ನಾಗಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಶ್ ಚುನಾವಣೆ ಪ್ರಚಾರದಲ್ಲಿ ಭಾಗವಹಿಸೋಲ್ಲ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದರು. ಯಶ್, ರಾಜಕಾರಣ ಗಲೀಜು ಎಂದು ಹೇಳಿದ್ದಾರೆ. ಟೀಕೆಗಳ ಬಗ್ಗೆ ತಿಳಿದುಕೊಂಡಿದ್ದಾರೆ. ಅವರು ಈಗ ದೇಶ ಮಟ್ಟದಲ್ಲಿ ಸ್ಟಾರ್. ದರ್ಶನ್ ಮತ್ತು ಯಶ್ ನನ್ನ ಮನೆಯ ಮಕ್ಕಳಿದ್ದಂತೆ. ಅವತ್ತಿನ ಸ್ಥಿತಿಯಲ್ಲಿ ನನ್ನ ಜೊತೆ ನಿಂತಿದ್ದರು. ಅವರು ಪ್ರಚಾರಕ್ಕೆ ಬರಲಿಲ್ಲವೆಂದರೂ ನಾನು ಬೇಜಾರು ಮಾಡಿಕೊಳ್ಳುವುದಿಲ್ಲ ಎಂದು ಹೇಳಿದರು.

ಯಶ್, ದರ್ಶನ್ ಪ್ರಚಾರಕ್ಕೆ ಬಂದರೆ ಬಲ ಇರುತ್ತೆ, ಎಲ್ಲರೂ ನನಗೆ ಬೆಂಬಲವಾಗಿ ನಿಂತಿದ್ದಾರೆ. ಕಳೆದ ಚುನಾವಣೆ ಸಮಯದಲ್ಲಿ ಸ್ವಾರ್ಥ ಇಲ್ಲದೆ ನನ್ನ ಪರ ನಿಂತಿದ್ದರು. ಪದೇ ಪದೇ ಎಲ್ಲಾ ಬಿಟ್ಟು ಪ್ರಚಾರಕ್ಕೆ ಬನ್ನಿ ಎಂದು ಕರೆಯೋದು ಸರಿಯಲ್ಲ. ಅದಕ್ಕೆ ನನ್ನ ಮನಸ್ಸೂ ಒಪ್ಪುವುದಿಲ್ಲ. ಯಶ್, ದರ್ಶನ್ ಒಂದೊಂದು ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಅದನ್ನೆಲ್ಲ ಬಿಟ್ಟು ನನ್ನ ಪರ ಪ್ರಚಾರಕ್ಕೆ ಬನ್ನಿ ಎಂದು ಕರೆಯೋದು ಸರಿಯಲ್ಲ. ಅವರೇ ಪ್ರಚಾರಕ್ಕೆ ಬರೋದಾದರೆ ಖಂಡಿತವಾಗಿಯೂ ಸ್ವಾಗತಿಸುತ್ತೇನೆ. ದೊಡ್ಡ ಶಕ್ತಿಯಾಗಿ ಅವರ ಬೆಂಬಲ ನನಗೆ ಇರುತ್ತೆ ಎಂದರು.

ಕಳೆದ ಬಾರಿ ಯಶ್ ಹಾಗೂ ದರ್ಶನ್ ಅವರು ಸುಮಲತಾ ಪರ ಪ್ರಚಾರ ಮಾಡಿದಾಗ ಕೆಲವು ಪಕ್ಷಗಳು ಅವರ ವಿರುದ್ಧ ಟೀಕೆ ಮಾಡಿದ್ದವು. ಮಾಜಿ ಸಿಎಂ ಕುಮಾರಸ್ವಾಮಿ ಬಳಕೆ ಮಾಡಿದ ಪದಗಳು ಅವರಿಗೆ ನೋವು ತಂದಿತ್ತು. ರಾಜಕೀಯದ ನಿಜವಾದ ಅನುಭವ ಪಡೆದ ಯಶ್ ಅವರು ಆ ಬಗ್ಗೆ ಬೇಸರ ಮಾಡಿಕೊಂಡಿದ್ದರಂತೆ. ಈ ವಿಚಾರವನ್ನು ಸುಮಲತಾ ರಿವೀಲ್ ಮಾಡಿದ್ದಾರೆ.

‘ಯಶ್ ಬರ್ತೀನಿ ಎಂದರೆ ನನಗಿಂತ ಖುಷಿ ಪಡೋರು ಯಾರೂ ಇಲ್ಲ. ಬರಲ್ಲ ಅಂದ್ರೂ ನನಗೇನು ಬೇಸರ ಇಲ್ಲ. ಅಂಬರೀಷ್ ಅವರ ಗೌರವದ ಮೇಲೆ ಬಂದರು. ನಾನು ಅವರನ್ನು ಕರೆದಿಲ್ಲ’ ಎಂದಿದ್ದಾರೆ ಸುಮಲತಾ. ಈ ಮೂಲಕ ಹಲವು ವಿಚಾರಕ್ಕೆ ಸ್ಪಷ್ಟನೆ ನೀಡಿದ್ದಾರೆ

ಪಕ್ಷದ ಚಿಹ್ನೆಯಿಂದಲೇ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ಪಕ್ಷದ ಹೈಕಮಾಂಡ್ ಏನು ಹೇಳುತ್ತಾರೋ ನೋಡಬೇಕು. ಇದು ಬೇರೆ ರೀತಿಯಲ್ಲಿ ಚುನಾವಣೆ ನಡೆಯುತ್ತದೆ. ಪ್ರಚಾರ, ಹೋರಾಟ, ಕ್ಯಾಂಪೇನ್ ಎಲ್ಲವೂ ಡಿಫರೆಂಟ್ ಆಗಿರುತ್ತದೆ ಎಂದರು.

ಆದಿಚುಂಚನಗಿರಿ ಶ್ರೀಗಳನ್ನು ಭೇಟಿ ಮಾಡಿರುವುದು ಪ್ರಚಾರ ಆರಂಭಿಸಲು ಎಂದು ಹೋಗಿಲ್ಲ. ನಾಗಮಂಗಲದಲ್ಲಿ ಇಂದು ನನಗೆ ಒಂದಷ್ಟು ಕಾರ್ಯಕ್ರಮ ಇತ್ತು. ಕಳೆದ ಬಾರಿ ಚುನಾವಣೆಗೂ ಮೊದಲೇ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದೆ. ಒಳ್ಳೆಯದಾಗಿತ್ತು. ಶುಭವಾಗಿತ್ತು. ಹಾಗಾಗಿ ನಂಬಿಕೆ ವಿಶ್ವಾಸ ಇದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT