ನರೇಂದ್ರ ಮೋದಿ ಮತ್ತು ಎಚ್.ಡಿ ದೇವೇಗೌಡ 
ರಾಜಕೀಯ

ಲೋಕಸಭೆ ಚುನಾವಣೆ: 'ಮೋದಿ ಕಾ ಪರಿವಾರ್' ಹೆಸರಲ್ಲಿ ಕಣಕ್ಕಿಳಿಯಲಿದೆ 'ದೇವೇಗೌಡರ ಪರಿವಾರ'!

ಪ್ರಧಾನಿ ಮೋದಿಗೆ ಕುಟುಂಬವಿಲ್ಲ ಎಂಬ ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಹೇಳಿಕೆಗೆ ಪ್ರತಿಯಾಗಿ ಬಿಜೆಪಿ ‘ಮೋದಿ ಕಾ ಪರಿವಾರ್’ ಅಭಿಯಾನ ಆರಂಭಿಸಿದೆ.

ಬೆಂಗಳೂರು: ಪ್ರಧಾನಿ ಮೋದಿಗೆ ಕುಟುಂಬವಿಲ್ಲ ಎಂಬ ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಹೇಳಿಕೆಗೆ ಪ್ರತಿಯಾಗಿ ಬಿಜೆಪಿ ‘ಮೋದಿ ಕಾ ಪರಿವಾರ್’ ಅಭಿಯಾನ ಆರಂಭಿಸಿದೆ. ಇದೇ ವೇಳೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೋದಿ ಅವರ ಇಮೇಜ್ ಮೇಲೆ ತನ್ನ ಮೈತ್ರಿಕೂಟದ ಪಾಲುದಾರ ಮತ್ತು ಕರ್ನಾಟಕದ ಫ್ಯಾಮಿಲಿ ಪಾರ್ಟಿ ಎಂದೇ ಗುರುತಿಸಿಕೊಂಡಿರುವ ಜೆಡಿಎಸ್ ಕಣಕ್ಕಿಳಿಯುತ್ತಿದೆ.

ರಾಷ್ಟ್ರೀಯ ಅಧ್ಯಕ್ಷರಾಗಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪ್ರಾದೇಶಿಕ ಪಕ್ಷವು ಬಿಜೆಪಿಯೊಂದಿಗೆ ಸೀಟು ಹಂಚಿಕೆ ಒಪ್ಪಂದದಲ್ಲಿ 2-3 ಕ್ಷೇತ್ರಗಳಿಗೆ ತೃಪ್ತಿಪಡುವ ಸಾಧ್ಯತೆಯಿದೆ. ದೇವೇಗೌಡ ಪರಿವಾರ’ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸುವ ಸಾಧ್ಯತೆಯೂ ಇದೆ. ದೇವೇಗೌಡರ ಅಳಿಯ ಮತ್ತು ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯ ನಿವೃತ್ತ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಅವರು ಜೆಡಿಎಸ್ ಬದಲಿಗೆ ಬಿಜೆಪಿಯಿಂದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗುವ ಸಾಧ್ಯತೆಯಿದೆ.

ಮೈಸೂರು-ಕೊಡಗು ಹಾಲಿ ಸಂಸದ ಪ್ರತಾಪ್ ಸಿಂಹ ಅವರ ಸ್ಥಾನಕ್ಕೆ ಜೆಡಿಎಸ್ ಮಾಜಿ ಸಚಿವ ಸಾ.ರಾ.ಮಹೇಶ್ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಿದ್ದತೆ ನಡೆಸಿದ್ದಾರೆ, ಹೀಗಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಅನುಮತಿಯ ನಿರೀಕ್ಷೆಯಲ್ಲಿದ್ದಾರೆ.

ಚುನಾವಣೆಯಲ್ಲಿ ಪಕ್ಷದ ಚಿಹ್ನೆ ದೊಡ್ಡ ಪಾತ್ರವನ್ನು ವಹಿಸುವ ಸಾಧ್ಯತೆಯಿದೆ, ವಿಶ್ಲೇಷಕರ ಪ್ರಕಾರ ಬಿಜೆಪಿ ಮತದಾರರು ಮೋದಿ ಅಂಶದಿಂದಾಗಿ ಹೆಚ್ಚಿನ ಉತ್ಸಾಹವನ್ನು ತೋರಿಸಿದ್ದಾರೆ. ಬಿಜೆಪಿ ಮತಗಳನ್ನು ತನ್ನ ಪರವಾಗಿ ಪರಿವರ್ತಿಸಿಕೊಳ್ಳುವುದು ಪ್ರಾದೇಶಿಕ ಪಕ್ಷಕ್ಕೆ ಕಠಿಣವಾಗಿರುವುದರಿಂದ ಹಳೇ ಮೈಸೂರು ಭಾಗದಲ್ಲಿ ಕೇವಲ 2-3 ಸ್ಥಾನಗಳಿಗೆ ತೃಪ್ತಿಪಡಬಹುದು.

ಕಾಂಗ್ರೆಸ್ ಅಭ್ಯರ್ಥಿಯಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಕಣಕ್ಕಿಳಿದರೆ ಜೆಡಿಎಸ್ ಅಭ್ಯರ್ಥಿಗೆ ತೀವ್ರ ಪೈಪೋಟಿ ಎದುರಾಗುವ ಸಾಧ್ಯತೆಯಿರುವುದರಿಂದ ಕೋಲಾರವನ್ನು ಕೈಗೆತ್ತಿಕೊಳ್ಳಲು ಪಕ್ಷ ಮುಂದಾಗಿತ್ತು. ಬಿಜೆಪಿ-ಜೆಡಿಎಸ್ ನಾಯಕತ್ವವು ಬಿಜೆಪಿ ಟಿಕೆಟ್‌ನಲ್ಲಿ ಜೆಡಿಎಸ್ ನಾಯಕನನ್ನು ಕಣಕ್ಕಿಳಿಸುವ ಬಗ್ಗೆ ಎರಡನೇ ಚಿಂತನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಅವರು ಹಾಲಿ ಸಂಸದ ಎಸ್ ಮುನಿಸ್ವಾಮಿ ಅವರ ಹೆಸರನ್ನು ಸೂಚಿಸುವ ಸಾಧ್ಯತೆಯಿದೆ.

ಹಳೇ ಮೈಸೂರು ಭಾಗದ ಜೆಡಿಎಸ್‌ಗೆ ಸಿಗುವ ಕೆಲವೇ ಕೆಲವು ಸ್ಥಾನಗಳಲ್ಲಿಯೂ ಬಿಜೆಪಿ ಮತಗಳು ಜೆಡಿಎಸ್‌ ಅಭ್ಯರ್ಥಿಗಳ ಪರವಾಗಿ ಪರಿವರ್ತನೆಯಾಗುವ ಪ್ರಮಾಣ ನಿರೀಕ್ಷಿತ ಮಟ್ಟದಲ್ಲಿರುವುದಿಲ್ಲ. ಹಾಸನದಲ್ಲಿಯೂ ಮಂಡ್ಯದ ಮಟ್ಟಿಗೆ ಒಳ್ಳೆಯದಾಗುವುದಿಲ್ಲ, ಸ್ಥಳೀಯ ಬಿಜೆಪಿ ನಾಯಕತ್ವ ಜೆಡಿಎಸ್ ಕುಟುಂಬದತ್ತ ಒಲವು ತೋರುತ್ತಿಲ್ಲ.

ಹೆಚ್ ಡಿ ಕುಮಾರಸ್ವಾಮಿ ಸ್ಪರ್ಧಿಸಿದರೆ ಬಿಜೆಪಿ ಮತಗಳು ಪರಿವರ್ತನೆಯಾಗುವ ಸಾಧ್ಯತೆ ಇರುವುದರಿಂದ ಮಂಡ್ಯದಲ್ಲಿ ಜೆಡಿಎಸ್ ತನ್ನ ಚಿಹ್ನೆಯ ಮೇಲೆ ಆರಾಮವಾಗಿ ಗೆಲ್ಲುವ ಸುರಕ್ಷಿತ ಕ್ಷೇತ್ರವಾಗಿದೆ. ಕೇಸರಿ ಶಾಲು ಧರಿಸಿ ಹನುಮಾನ್ ಧ್ವಜದ ಮೇಲೆ ಬಿಜೆಪಿಯೊಂದಿಗೆ ಪ್ರತಿಭಟನೆಯಲ್ಲಿ ಕುಮಾರಸ್ವಾಮಿ ಭಾಗವಹಿಸಿದ್ದ ಪ್ಲಸ್ ಪಾಯಿಂಟ್ ಆಗಲಿದೆ ಎಂದು ಬಿಜೆಪಿ ಮುಖಂಡರೊಬ್ಬರು ಅಭಿಪ್ರಾಯ ಪಟ್ಟಿದ್ದಾರೆ.

ಎರಡು ಪಕ್ಷಗಳ ನಡುವಿನ ಸೀಟು ಹಂಚಿಕೆ ಒಪ್ಪಂದವು ಒಂದು ವಾರದ ಅವಧಿಯಲ್ಲಿ ಆಗುವ ಸಾಧ್ಯತೆಯಿದೆ ಮತ್ತು ಕೆಲವು ಅಚ್ಚರಿ ನಿರ್ಧಾರಗಳು ಹೊರಬೀಳಲಿದೆ ಎಂದು ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT