ಡಿಸಿಎಂ ಡಿಕೆ ಶಿವಕುಮಾರ್ ANI
ರಾಜಕೀಯ

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ: ನಾಳೆ ದೆಹಲಿಯಲ್ಲಿ ಸಭೆ, ಶೀಘ್ರದಲ್ಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ!

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಗುರುವಾರ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಸಭೆಯಲ್ಲಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಕುರಿತು...

ಹುಬ್ಬಳ್ಳಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಗುರುವಾರ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಸಭೆಯಲ್ಲಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಹೇಳಿದರು.

ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲೇ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಇದೇ ವೇಳೆ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಕ್ಕೆ ಜಗದೀಶ ಶೆಟ್ಟರ್ ಸದ್ಯದಲ್ಲಿಯೇ ಪಶ್ಚಾತ್ತಾಪದ ಹೇಳಿಕೆ ನೀಡಲಿದ್ದಾರೆ. ಇನ್ನೊಂದು ತಿಂಗಳು ಕಾದುನೋಡಿ. ಅವರಿಂದ ಪಶ್ಚಾತ್ತಾಪದ ಹೇಳಿಕೆ ಬರಲಿದೆ ಎಂದು ತಿಳಿಸಿದರು.

ಇದೋ ಮಹದಾಯಿ ನೀರು ತಂದೆ ಬಿಟ್ಟೆವು ಎನ್ನುವ ರೀತಿಯಲ್ಲಿ ಹುಬ್ಬಳ್ಳಿಯಲ್ಲಿ‌ ವಿಜಯೋತ್ಸವ ಮಾಡಿದ್ದರು. ರಸ್ತೆಯುದ್ದಕ್ಕೂ ಫ್ಲೆಕ್ಸ್ ಗಳನ್ನು ಹಾಕಿ ಶುಭ ಕೋರಿದ್ದರು. ಯಾಕೆ ಆಗಲಿಲ್ಲ ಎಂದು ಅವರನ್ನು ನೀವು ಗಟ್ಟಿಯಾಗಿ ಪ್ರಶ್ನಿಸಬೇಕು. ಯಾಕೆ ಇನ್ನೂ ಮಹದಾಯಿ ತೊಡಕುಗಳ ನಿವಾರಣೆ ಮಾಡುತ್ತಿಲ್ಲ..? ಕೂಡಲೇ ಸಂಬಂಧಿಸಿದ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸಿದರೆ ಅವರಿಗೂ ಒಂದು ಗೌರವ. ಆದರೆ ಈ ಬಗ್ಗೆ ಜೋಶಿಯವರು ಚಕಾರ ಎತ್ತುತ್ತಿಲ್ಲ ಎಂದು ಹೇಳಿದರು.

ಶಾಸಕರಾದ ಶಿವರಾಮ ಹೆಬ್ಬಾರ್ ಹಾಗೂ ಸೋಮಶೇಖರ ಕಾಂಗ್ರೆಸ್ ಗೆ ಸೇರ್ಪಡೆ ವಿಚಾರ ಕುರಿತ ಪ್ರಶ್ನೆಗೆ ಉತ್ತರಿಸಿ, ಬಿಜೆಪಿಯಲ್ಲಿನ ವೈಫಲ್ಯತೆಗೆ ಬೇಸತ್ತು ಒಬ್ಬರು, ಇಬ್ಬರಲ್ಲ ಹಲವರು ಕಾಂಗ್ರೆಸ್ ಗೆ ಬರಲು ಮುಂದಾಗಿದ್ದಾರೆಂದು ಹೇಳಿದರು.

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸುತ್ತಿರುವುದಕ್ಕೆ ಪ್ರತಿಕ್ರಿಯಿಸಿ, ಯಾವಾಗ ಬೇಕಂತೆ ರಾಜೀನಾಮೆ? ಕೊಡೋಣ... ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಶಾಲು ಹಾಕಿಕೊಂಡು ಪಾಕ್ ಪರ ಘೋಷಣೆ ಕೂಗಿದ್ದರು. ಅವರನ್ನು ಯಾಕೆ ಬಂಧನ ಮಾಡಲಿಲ್ಲ. ಬಿಜೆಪಿಯವರಿಗೆ ಬದ್ಧತೆ ಇದೆಯಾ? ಎಂದು ತಿರುಗೇಟು ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT