ವಿ ಸೋಮಣ್ಣ 
ರಾಜಕೀಯ

ತುಮಕೂರು ಲೋಕಸಭಾ ಕ್ಷೇತ್ರ; ಸೋಮಣ್ಣ ಸ್ಪರ್ಧೆಗೆ ಜೆಡಿಎಸ್ ನಾಯಕರ ಬೆಂಬಲ, ಸ್ವಪಕ್ಷಿಯರಿಂದಲೇ ವಿರೋಧ

ತುಮಕೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಟಿಕೆಟ್‌ಗೆ ಪ್ರಬಲ ಆಕಾಂಕ್ಷಿಯಾಗಿರುವ ಮಾಜಿ ಸಚಿವ ವಿ ಸೋಮಣ್ಣ ಅವರಿಗೆ ಈಗಾಗಲೇ ಜೆಡಿಎಸ್‌ನ ಒಂದು ವರ್ಗದ ಮುಖಂಡರ ಬೆಂಬಲ ಸಿಗುತ್ತಿದೆ. ಆದರೆ, ಸ್ವಪಕ್ಷಿಯರಿಂದಲೇ ವಿರೋಧ ವ್ಯಕ್ತವಾಗಿದೆ.

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಟಿಕೆಟ್‌ಗೆ ಪ್ರಬಲ ಆಕಾಂಕ್ಷಿಯಾಗಿರುವ ಮಾಜಿ ಸಚಿವ ವಿ ಸೋಮಣ್ಣ ಅವರಿಗೆ ಈಗಾಗಲೇ ಜೆಡಿಎಸ್‌ನ ಒಂದು ವರ್ಗದ ಮುಖಂಡರ ಬೆಂಬಲ ಸಿಗುತ್ತಿದೆ. ಆದರೆ, ಸ್ವಪಕ್ಷಿಯರಿಂದಲೇ ವಿರೋಧ ವ್ಯಕ್ತವಾಗಿದೆ.

ಬಿಜೆಪಿ ಹೈಕಮಾಂಡ್ ಇನ್ನೂ ಟಿಕೆಟ್ ಘೋಷಣೆ ಮಾಡದಿದ್ದರೂ, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಸೋಮಣ್ಣ ಅವರೇ ಎಂಬ ಊಹೆಯಲ್ಲಿ ತುರುವೇಕೆರೆ ಶಾಸಕ ಎಂಟಿ ಕೃಷ್ಣಪ್ಪ ನೇತೃತ್ವದಲ್ಲಿ ಜೆಡಿಎಸ್ ಸಭೆ ನಡೆಸಿದ್ದು, ಸೋಮಣ್ಣ ಅವರನ್ನು ಸನ್ಮಾನಿಸಲಾಗಿದೆ. ಸೋಮಣ್ಣ ಈ ಹಿಂದೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರನ್ನು ಭೇಟಿ ಮಾಡಿ, ಜೆಡಿಎಸ್ ಸ್ಥಳೀಯ ನಾಯಕರ ವಿಶ್ವಾಸ ಗಳಿಸಿದ್ದರು.

ಆದರೆ, ಸೋಮಣ್ಣ ಅವರು ತಮ್ಮದೇ ಪಕ್ಷದವರ ವಿರೋಧವನ್ನು ಎದುರಿಸುತ್ತಲೇ ಇದ್ದಾರೆ. ಸೋಮಣ್ಣ ಅವರಿಗೆ ಹಾಲಿ ಸಂಸದ ಜಿಎಸ್ ಬಸವರಾಜು ಈಗಾಗಲೇ ಬೆಂಬಲ ನೀಡಿದ್ದು, ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಬಿಜೆಪಿ ಬೆಂಬಲಿಗರು ಮಾಧುಸ್ವಾಮಿ ಅಥವಾ ಬಸವರಾಜು ಬೆಂಬಲಿಗರಾಗಿ ವಿಭಜನೆ ಹೊಂದುತ್ತಾರೆ ಎಂಬ ಮಾತುಗಳು ಕೇಳಿಬಂದಿವೆ ಎಂದು ಬಿಜೆಪಿ ಮುಖಂಡರೊಬ್ಬರು ತಿಳಿಸಿದ್ದಾರೆ.

ಮಾಧುಸ್ವಾಮಿ ಕೂಡ ಈ ಬಾರಿ ಬಿಜೆಪಿ ಟಿಕೆಟ್‌ಗೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಮಾಧುಸ್ವಾಮಿ ಅವರಲ್ಲದೆ, ಸಿದ್ದಗಂಗಾ ಮಠದ ಮಠಾಧೀಶ ಶ್ರೀ ಸಿದ್ದಲಿಂಗ ಸ್ವಾಮಿಗಳ ಸೋದರಸಂಬಂಧಿ ಡಾ. ಎಸ್ ಪರಮೇಶ್, ಯುವ ಮುಖಂಡರಾದ ವಿನಯ್ ಬಿದರೆ ಚಂದ್ರಶೇಖರ್, ಎಸ್ಪಿ ಚಿದಾನಂದ್ ಸೇರಿದಂತೆ ಇತರ ಟಿಕೆಟ್ ಆಕಾಂಕ್ಷಿಗಳು ಸೋಮಣ್ಣ ಅವರನ್ನು ಕಣಕ್ಕಿಳಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!