ಜಯಪ್ರಕಾಶ್ ಹೆಗಡೆ, ಸುರೇಶ್ ಮತ್ತು ಮುದ್ದಹನುಮೇಗೌಡ 
ರಾಜಕೀಯ

ಲೋಕಸಭೆ ಚುನಾವಣೆ: ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಡಿ.ಕೆ ಸುರೇಶ್, ಮುದ್ದಹನುಮೇಗೌಡ, ಜಯಪ್ರಕಾಶ್ ಹೆಗ್ಡೆಗೆ ಸ್ಥಾನ !

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಅವರ ಹೆಸರು ಕೆಪಿಸಿಸಿ ಪ್ರಸ್ತಾಪಿಸಿದ ಪಟ್ಟಿಯಲ್ಲಿ ಇಲ್ಲ, ಏಕೆಂದರೆ ಅವರನ್ನು ಮೈಸೂರು-ಕೊಡಗಿನಿಂದ ಕಣಕ್ಕೆ ಇಳಿಸದಿರಲು ಸಿಎಂ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಗುರುವಾರ ರಾಷ್ಟ್ರ ರಾಜಧಾನಿಯಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಸಮಿತಿ (ಸಿಇಸಿ) ಕರ್ನಾಟಕದ 28 ಸ್ಥಾನಗಳ ಪೈಕಿ 14-15 ಸ್ಥಾನಗಳಿಗೆ ಪಕ್ಷದ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಇನ್ನೆರಡು ದಿನದಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ.

ಕಲಬುರಗಿಯಿಂದ ಖರ್ಗೆ ಅವರ ಅಳಿಯ ರಾಧಾಕೃಷ್ಣ, ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್, ತುಮಕೂರಿನಿಂದ ಎಸ್‌ಪಿ ಮುದ್ದಹನುಮೇಗೌಡ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ.ಜಯಪ್ರಕಾಶ ಹೆಗಡೆ ಸೇರಿದಂತೆ ಹಲವರಿಗೆ ಮೊದಲ ಪಟ್ಟಿಯಲ್ಲಿ ಸ್ಥಾನ ದೊರೆತಿದೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಅವರ ಹೆಸರು ಕೆಪಿಸಿಸಿ ಪ್ರಸ್ತಾಪಿಸಿದ ಪಟ್ಟಿಯಲ್ಲಿ ಇಲ್ಲ, ಏಕೆಂದರೆ ಅವರನ್ನು ಮೈಸೂರು-ಕೊಡಗಿನಿಂದ ಕಣಕ್ಕೆ ಇಳಿಸದಿರಲು ಸಿಎಂ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬದಲಾಗಿ ಮೈಸೂರು ಡಿಸಿಸಿ ಅಧ್ಯಕ್ಷ ವಿಜಯಕುಮಾರ್, ಒಕ್ಕಲಿಗರು ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ತೋಟಗಾರಿಕಾ ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ್‌ ಅವರ ಪತ್ನಿ ಪ್ರಭಾ ಅವರ ಹೆಸರು ಕೈಬಿಟ್ಟಿರುವುದರಿಂದ ಕುರುಬ ಜನಾಂಗದ ವಿನಯ್‌ಕುಮಾರ್‌ ಅವರಿಗೆ ದಾವಣಗೆರೆ ಲೋಕಸಭೆ ಟಿಕೆಟ್‌ ದೊರೆಯುವ ಸಾಧ್ಯತೆ ಇದೆ . ಈ ಪಟ್ಟಿಯಲ್ಲಿ ಬಾಗಲಕೋಟೆಯಿಂದ ವೀಣಾ ಕಾಶಪ್ಪನವರ್ ಮತ್ತು ಕೊಪ್ಪಳದಿಂದ ರಾಜಶೇಖರ್ ಹಿಟ್ನಾಳ್ ಸೇರಿದಂತೆ ಇತರರು ಇದ್ದಾರೆ ಎಂದು ತಿಳಿದು ಬಂದಿದೆ.

ಸಂಜೆ 7 ಗಂಟೆ ಸುಮಾರಿಗೆ ಆರಂಭವಾದ ಸಭೆ ನಾಲ್ಕು ಗಂಟೆಗಳ ಕಾಲ ನಡೆಯಿತು. ಶೇ. 50 ರಷ್ಟು ರಾಜ್ಯದ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು ಮತ್ತು ಎರಡು ಹಂತಗಳಲ್ಲಿ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಶಿವಕುಮಾರ್ ಸಭೆ ಆರಂಭವಾಗುವುದಕ್ಕೆ ಮೊದಲು ಸುದ್ದಿಗಾರರಿಗೆ ತಿಳಿಸಿದರು.

ಬಿಜೆಪಿ ತನ್ನ ಪಟ್ಟಿಯನ್ನು ಪ್ರಕಟಿಸಿದ ನಂತರ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯ ರಾಜಕೀಯಕ್ಕೂ ನಮ್ಮ ರಾಜಕೀಯಕ್ಕೂ ಬಹಳ ವ್ಯತ್ಯಾಸವಿದೆ. ಕಾಂಗ್ರೆಸ್‌ನಲ್ಲಿ ವ್ಯಕ್ತಿಗತವಾಗಿ ರಾಜಕೀಯ ಮಾಡುವುದಿಲ್ಲ. ನಾವು ಪಕ್ಷದ ಆಧಾರದಲ್ಲಿ, ನಮ್ಮ ಗ್ಯಾರಂಟಿ ಯೋಜನೆಗಳ ಮೇಲೆ ರಾಜಕೀಯ ಮಾಡುತ್ತೇವೆ. ಅವರಿಗೆ ಅವರ ಲೆಕ್ಕಾಚಾರವಿದ್ದರೆ ನಮಗೂ ನಮ್ಮದೇ ಲೆಕ್ಕಾಚಾರವಿರುತ್ತದೆ ಎಂದರು.

ಹಿರಿಯ ನಾಯಕರಾದ ಸೋನಿಯಾ ಗಾಂಧಿ, ಅಂಬಿಕಾ ಸೋನಿ, ಉತ್ತಮಕುಮಾರ್ ರೆಡ್ಡಿ, ಅಧೀರ್ ರಂಜನ್ ಚೌಧರಿ, ಸಲ್ಮಾನ್ ಖುರ್ಷೀದ್, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆಸಿ ವೇಣುಗೋಪಾಲ್, ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಿಇಸಿ ಸದಸ್ಯ ಮತ್ತು ಕರ್ನಾಟಕ ಇಂಧನ ಸಚಿವ ಕೆಜೆ ಜಾರ್ಜ್ ಅವರು ಉನ್ನತ ಮಟ್ಟದ ಸಭೆಯಲ್ಲಿ ಉಪಸ್ಥಿತರಿದ್ದರು.

ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ಭಾಗವಹಿಸದಿದ್ದರೂ, ಅಭ್ಯರ್ಥಿಗಳ ಆಯ್ಕೆ ಕುರಿತು ಅವರ ಹೇಳಿಕೆಗೆ ಸೂಕ್ತ ಪರಿಗಣನೆ ನೀಡಲಾಗಿದೆ. ಈ ಸಭೆಯಲ್ಲಿ ಕರ್ನಾಟಕ ಮತ್ತು ತೆಲಂಗಾಣ ಸೇರಿದಂತೆ 10 ರಾಜ್ಯಗಳ ಸುಮಾರು 60 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT