ಡಿ.ಕೆ ಸುರೇಶ್ 
ರಾಜಕೀಯ

ನಮಗೆ ನಮ್ಮ ಕೆಲಸ ಕಾರ್ಯ ಮುಖ್ಯ, ಯಾರೇ ಅಭ್ಯರ್ಥಿಯಾದರೂ ಹೋರಾಟಕ್ಕೆ ಸಿದ್ಧ: ಡಿ.ಕೆ ಸುರೇಶ್

ಹಳೇ ವೈರಿಗಳು ಒಂದಾಗ್ತಿದ್ದಾರೋ, ಕಿತ್ತಾಡ್ತಿದ್ದಾರೋ ಗೊತ್ತಿಲ್ಲ. ಟಾರ್ಗೆಟ್ ಮಾಡೋದೆಲ್ಲವು ರಾಜಕಾರಣದಲ್ಲಿ ಸ್ವಾಭಾವಿಕ. ಇದಕ್ಕೆಲ್ಲಾ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಜನ ಉತ್ತರ ಕೊಡುತ್ತಾರೆ ಎಂದರು.

ರಾಮನಗರ: ಬಿಜೆಪಿ-ಜೆಡಿಎಸ್ ಮೈತ್ರಿಕೂಟವು ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ್ ಅವರನ್ನು ಸೋಲಿಸಲು ಯೋಜನೆ ರೂಪಿಸುತ್ತಿದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಸಂಸದ ಸುರೇಶ್ ಪ್ರತಿಕ್ರಿಯಿಸಿದ್ದಾರೆ.

ಚುನಾವಣಾ ವರ್ಷದಲ್ಲಿ ವಿರೋಧ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗುವುದು ಸಹಜ. ನಾವು ಚುನಾವಣೆಯ ಹೊಸ್ತಿಲಲ್ಲಿದ್ದೇವೆ, ಅಭ್ಯರ್ಥಿ ಯಾರೇ ಬಂದರೂ ಅವರ ವಿರುದ್ಧ ಹೋರಾಟ ನಡೆಸಬೇಕಾಗಿರುವುದರಿಂದ ನಾನು ಮಾಡಿದ ಕೆಲಸವೇ ಮುಖ್ಯವಾಗುತ್ತದೆ ಎಂದು ಹೇಳಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಳಿಯ, ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದ ನಿವೃತ್ತ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರನ್ನು ಕಣಕ್ಕಿಳಿಸಲು ಬಿಜೆಪಿ-ಜೆಡಿಎಸ್ ಮೈತ್ರಿ ಮುಂದಾಗಿದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸುರೇಶ್, ನಮಗೆ ನಮ್ಮ ಕೆಲಸ ಕಾರ್ಯ ಮುಖ್ಯ, ಯಾರೇ ಅಭ್ಯರ್ಥಿ ಆದರೂ ಹೋರಾಟ ಮಾಡಬೇಕು. ಹಳೇ ವೈರಿಗಳು ಒಂದಾಗ್ತಿದ್ದಾರೋ, ಕಿತ್ತಾಡ್ತಿದ್ದಾರೋ ಗೊತ್ತಿಲ್ಲ. ಟಾರ್ಗೆಟ್ ಮಾಡೋದೆಲ್ಲವು ರಾಜಕಾರಣದಲ್ಲಿ ಸ್ವಾಭಾವಿಕ. ಇದಕ್ಕೆಲ್ಲಾ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಜನ ಉತ್ತರ ಕೊಡುತ್ತಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT