ಗೃಹ ಸಚಿವ ಪರಮೇಶ್ವರ್ 
ರಾಜಕೀಯ

ಸಂವಿಧಾನದ ಬಗ್ಗೆ ಕೀಳಾಗಿ ಮಾತನಾಡುವ ಸಂಸದ ಅನಂತ್ ಕುಮಾರ್‌ ರನ್ನು ಪಕ್ಷದಿಂದ ಹೊರಹಾಕಲಿ:‌ ಗೃಹ ಸಚಿವ ಪರಮೇಶ್ವರ್

ಸಂವಿಧಾನದ ಬಗ್ಗೆ ಕೀಳುಮಟ್ಟದ ಹೇಳಿಕೆಗಳನ್ನು ನೀಡುತ್ತಿರುವ ಸಂಸದ ಅನಂತಕುಮಾರ್ ಹೆಗಡೆ ಅವರನ್ನು ಪಕ್ಷದಿಂದ ಹೊರಹಾಕಲಿ ಎಂದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ಸೋಮವಾರ ಹೇಳಿದ್ದಾರೆ.

ಬೆಂಗಳೂರು: ಸಂವಿಧಾನದ ಬಗ್ಗೆ ಕೀಳುಮಟ್ಟದ ಹೇಳಿಕೆಗಳನ್ನು ನೀಡುತ್ತಿರುವ ಸಂಸದ ಅನಂತಕುಮಾರ್ ಹೆಗಡೆ ಅವರನ್ನು ಪಕ್ಷದಿಂದ ಹೊರಹಾಕಲಿ ಎಂದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ಸೋಮವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ಅಂಬೇಡ್ಕರ್ ಅವರನ್ನು ಪ್ರಧಾನಿ ಮೋದಿ ಮುಕ್ತ ಕಂಠದಿಂದ ಹೊಗಳಿದ್ದಾರೆ. ಸಂವಿಧಾನ ಇಲ್ಲದೇ ಹೋಗಿದ್ದರೆ ನಾನು ಪ್ರಧಾನಮಂತ್ರಿ ಆಗುತ್ತಿರಲಿಲ್ಲ ಎಂದು ಹೇಳಿದ್ದಾರೆ. ಆದರೆ, ಅವರ ಪಕ್ಷದ ಸಂಸದರೊಬ್ಬರು ಪದೇ ಪದೇ ಸಂವಿಧಾನ ಬದಲಾವಣೆಯ ಮಾತುಗಳನ್ನು ಆಡುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಹೇಳಿದರು.

ಅನಂತಕುಮಾರ್ ಹೆಗಡೆ ಅವರ ಹೇಳಿಕೆಯಿಂದ ದೂರ ಇದ್ದೇವೆ ಎಂದು ಬಿಜೆಪಿ ನಾಯಕರು ಹೇಳಿದರೆ ಸಾಲದು, ಪಕ್ಷದಿಂದ ಹೊರಹಾಕಬೇಕು ಅಥವಾ ನಿಯಂತ್ರಿಸಬೇಕು.‌ ಸಂವಿಧಾನದ ಬಗ್ಗೆ ಕೀಳುಮಟ್ಟದ ಹೇಳಿಕೆಗಳನ್ನು ಕೊಡುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಸರಿಯಾದ ಅಭ್ಯರ್ಥಿಯೇ ಇಲ್ಲ ಎಂದು ಬಿಜೆಪಿಯವರು ಹೇಳಿಕೊಳ್ಳಬಹುದು.‌ ಆದರೆ, ಚುನಾವಣೆ ನಂತರ ವಾಸ್ತವಾಂಶ ಏನೆಂಬುದು ಗೊತ್ತಾಗಲಿದೆ. ಸಚಿವ ಎಚ್.ಸಿ.ಮಹದೇವಪ್ಪ ಅವರ ಸ್ಪರ್ಧೆಯ ಮಾತುಗಳು ಕೇಳಿಬರುತ್ತಿವೆ. ತನಗೆ ಟಿಕೆಟ್ ಬೇಡ, ಮಗನಿಗೆ ನೀಡುವಂತೆ ಮಹದೇವಪ್ಪ ಅವರು ಹೇಳುತ್ತಿದ್ದಾರೆ. ಅಂತಿಮ ತೀರ್ಮಾನ ಹೈಕಮಾಂಡ್ ಮಾಡಲಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war: ಕುವೈತ್‌ ಪ್ರಮುಖ ತೈಲ ಶುದ್ಧೀಕರಣ ಘಟಕದ ಮೇಲೆ ಇರಾನ್ ಡ್ರೋನ್ ದಾಳಿ, ಭಾರೀ ಬೆಂಕಿ

ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ಬೇಡ: ಟ್ರಂಪ್ ಸೂಚನೆ ಬೆನ್ನಲ್ಲೇ ಹಿಂದೆ ಸರಿದ ಇಸ್ರೇಲ್, ಇರಾನ್ 'ನಾಶವಾಗಿದೆ' ಎಂದ ನೆತನ್ಯಾಹು

ಇಂಧನ ಮೂಲಸೌಕರ್ಯದ ಮೇಲೆ ದಾಳಿ ಮಾಡಿ ದೊಡ್ಡ ತಪ್ಪು ಮಾಡಿದ್ದೀರಿ, ಮತ್ತೆ ದಾಳಿಯಾದರೆ ಒತ್ತಡಕ್ಕೆ ಮಣಿಯದೆ ಅನಿಯಂತ್ರಿತ ದಾಳಿ: ಇರಾನ್ ಕಠಿಣ ಎಚ್ಚರಿಕೆ

West Asia war: ಇರಾನ್ ಗ್ಯಾಸ್ ಫೀಲ್ಡ್ ಮೇಲಿನ ದಾಳಿ ‘ಸೋಲೋ ಆಪರೇಷನ್’; ಅಮೆರಿಕಾ ಪಾತ್ರವಿಲ್ಲ- ಇಸ್ರೇಲ್ ಸ್ಪಷ್ಟನೆ

ಯುಗಾದಿ ಆಯ್ತು, ಇದೀಗ ಎಲ್ಲೆಡೆ ಹೊಸ ತೊಡಕು ಸಂಭ್ರಮ: ಮಾಂಸ ಖರೀದಿಗೆ ಪಾಪಣ್ಣ ಮಟನ್‌ ಸ್ಟಾಲ್‌ ಮುಂದೆ ಜನರ ಕ್ಯೂ..!

SCROLL FOR NEXT