ಪ್ರಕಾಶ್ ಹುಕ್ಕೇರಿ 
ರಾಜಕೀಯ

ಕೊಟ್ಟ ಭರವಸೆ ಈಡೇರಿಸಿಲ್ಲ; ಲೋಕಸಭೆಗೆ ನಾನು, ಪುತ್ರ ಇಬ್ಬರೂ ಸ್ಪರ್ಧಿಸಲ್ಲ: ಸಿಎಂ ವಿರುದ್ಧ ಪ್ರಕಾಶ ಹುಕ್ಕೇರಿ ಕಿಡಿ

ಈ ಕಡೆ ಒದ್ದ ಮೇಲೆ ಆ ಕಡೆ ಹೋಗೋದು, ಆ ಕಡೆ ಒದ್ದರೆ ಈ ಕಡೆ ಬರುವುದಕ್ಕೆ ನಾನೇನು ಫುಟ್ಬಾಲ್ ಅಲ್ಲ. ಲೋಕಸಭೆಗೆ ನಾನು ಮತ್ತು ನನ್ನ ಪುತ್ರ ಗಣೇಶ ಹುಕ್ಕೇರಿ ಇಬ್ಬರೂ ಸ್ಪರ್ಧಿಸುವುದಿಲ್ಲ.

ಬೆಳಗಾವಿ: ಈ ಕಡೆ ಒದ್ದ ಮೇಲೆ ಆ ಕಡೆ ಹೋಗೋದು, ಆ ಕಡೆ ಒದ್ದರೆ ಈ ಕಡೆ ಬರುವುದಕ್ಕೆ ನಾನೇನು ಫುಟ್ಬಾಲ್ ಅಲ್ಲ. ಲೋಕಸಭೆಗೆ ನಾನು ಮತ್ತು ನನ್ನ ಪುತ್ರ ಗಣೇಶ ಹುಕ್ಕೇರಿ ಇಬ್ಬರೂ ಸ್ಪರ್ಧಿಸುವುದಿಲ್ಲ. ಚಿಕ್ಕೋಡಿ ಲೋಕಸಭೆ ಟಿಕೆಟ್ ಕುರುಬ ಸಮಾಜಕ್ಕೆ ಕೊಟ್ಟರೆ, ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಕಾಂಗ್ರೆಸ್ ಹಿರಿಯ ವಿಧಾನಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, 2014 ರಲ್ಲಿ ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಮಂತ್ರಿ ಇದ್ದರೂ ಲೋಕಸಭೆಗೆ ಸ್ಪರ್ಧಿಸಿ ಗೆಲುವು ದಾಖಲಿಸಿದ್ದೆ. ಆಗ ಪುತ್ರ ಗಣೇಶ ಹುಕ್ಕೇರಿಯನ್ನು ಶಾಸಕನನ್ನಾಗಿ ಮಾಡಿ ಮಂತ್ರಿ ಮಾಡುತ್ತೇವೆ ಎಂದು ವರಿಷ್ಠರು ಭರವಸೆ ಕೊಟ್ಟಿದ್ದರು.

ಆದರೆ, ಪುತ್ರ ಗಣೇಶ ಶಾಸಕನಾದರೂ ಬಳಿಕ ಮಂತ್ರಿ ಮಾಡಿಲ್ಲ. 2023 ರ ಚುನಾವಣೆಯಲ್ಲಿ ಗಣೇಶ 78 ಸಾವಿರ ಮತಗಳ ಅಂತರದಿಂದ ಗೆದ್ದರೂ ಸಚಿವ ಸ್ಥಾನ ನೀಡಿಲ್ಲ. ನಾನಾಗಲಿ, ನನ್ನ ಮಗನಾಗಲಿ ಮಂತ್ರಿ ಸ್ಥಾನ ಕೇಳಿಲ್ಲ, ಕೇಳುವುದೂ ಇಲ್ಲ ಎಂದರು.

ಈಗ ಮತ್ತೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಡಗಳು ಬರುತ್ತಿದೆ. ನಾನು‌ ಸ್ಪರ್ಧೆ ಮಾಡಿದರೆ ಚಿಕ್ಕೋಡಿ ಲೋಕಸಭೆಯಲ್ಲಿ ಗೆಲ್ಲುತ್ತೇವೆ ಅಂತಾ ಲೆಕ್ಕಾಚಾರವಿದೆ. ಆದರೆ, ನಾನು ಯಾವುದೇ ಕಾರಣಕ್ಕೂ ಲೋಕಸಭೆಗೆ ಸ್ಪರ್ಧೆ ಮಾಡುವುದಿಲ್ಲ.

ನನ್ನ ವಯಸ್ಸು ಈಗ 78 ವರ್ಷ. ಮೇಲಾಗಿ ನನ್ನ ಎಂಎಲ್​ಸಿ ಅಧಿಕಾರಾವಧಿ ಇನ್ನೂ 4 ವರ್ಷವಿದೆ. ನನ್ನನ್ನು ನಂಬಿ ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಶಿಕ್ಷಕರು ಮತ ಹಾಕಿ ಗೆಲ್ಲಿಸಿದ್ದಾರೆ. ನನಗೆ ಮತ ನೀಡಿದ ಶಿಕ್ಷಕರಿಗೆ ಮೋಸ ಮಾಡುವುದಿಲ್ಲ ಎಂದು ತಿಳಿಸಿದರು.

ಈಗಾಗಲೇ ಬೆಳಗಾವಿ ಟಿಕೆಟ್​ಗೆ ಲಿಂಗಾಯತ, ಚಿಕ್ಕೋಡಿಗೆ ಕುರುಬ ಸಮುದಾಯ ಅಂತಾ ಚರ್ಚೆ ಆಗಿದೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ 3 ಲಕ್ಷ ಕುರುಬ ಸಮುದಾಯದರು ಇದ್ದಾರೆ. ಕುರುಬ ಸಮುದಾಯದ ಮುಖಂಡ ಲಕ್ಷ್ಮಣರಾವ್ ಚಿಂಗಳೆಗೆ ಟಿಕೆಟ್ ಕೊಡಿ, ನಾವೆಲ್ಲರೂ ಸೇರಿ ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಪ್ರಕಾಶ ಹುಕ್ಕೇರಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

'ವೃದ್ಧ ಸಮಾಜದತ್ತ ಶ್ರೀಲಂಕಾ': ಅತ್ಯಂತ ವೇಗವಾಗಿ ಹೆಚ್ಚುತ್ತಿದೆ ಹಿರಿಯರ ಸಂಖ್ಯೆ; 40 ವರ್ಷಗಳಲ್ಲಿ ಮೂರು ಪಟ್ಟು ಜಾಸ್ತಿ!

ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ; ಸಂಸತ್ ಭವನದ ಬಳಿ ಪ್ರಧಾನಿ ಮೋದಿ-Rahul Gandhi ಅಪರೂಪದ ಮುಖಾಮುಖಿ! Video

SCROLL FOR NEXT