ಆರ್.ಅಶೋಕ್ 
ರಾಜಕೀಯ

‘ಅಜ್ಜಿಗೆ ಅರಿವೆ ಚಿಂತೆಯಾದ್ರೆ’.. ಸಿದ್ದು ಸರ್ಕಾರ ಗ್ಯಾರೆಂಟಿ ಸಮಾವೇಶದ ಹೆಸರಿನಲ್ಲಿ ಜನರ ದುಡ್ಡಿನಲ್ಲಿ ಜಾತ್ರೆ ಮಾಡುತ್ತಿದೆ: ಸಿಎಂ ವಿರುದ್ಧ ಬಿಜೆಪಿ ಕಿಡಿ

ಅಜ್ಜಿಗೆ ಅರಿವೆ ಚಿಂತೆಯಾದರೆ ಮೊಮ್ಮಗಳಿಗೆ ಇನ್ನೇನೋ ಚಿಂತೆ ಎಂಬಂತೆ ಇಲ್ಲಿ ಜನ ಜಲಕ್ಷಾಮದಿಂದ ಹನಿ ನೀರಿಗೂ ಹಾಹಾಕಾರ ಪಡುತ್ತಿದ್ದರೆ, ಅತ್ತ ಸಿಎಂ ಸಿದ್ದರಾಮಯ್ಯ ಅವರು ಗ್ಯಾರೆಂಟಿ ಸಮಾವೇಶದ ಹೆಸರಿನಲ್ಲಿ ಜನರ ದುಡ್ಡಿನಲ್ಲಿ ಜಾತ್ರೆ ಮಾಡುತ್ತಿದ್ದಾರೆಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಬೆಂಗಳೂರು: ಅಜ್ಜಿಗೆ ಅರಿವೆ ಚಿಂತೆಯಾದರೆ ಮೊಮ್ಮಗಳಿಗೆ ಇನ್ನೇನೋ ಚಿಂತೆ ಎಂಬಂತೆ ಇಲ್ಲಿ ಜನ ಜಲಕ್ಷಾಮದಿಂದ ಹನಿ ನೀರಿಗೂ ಹಾಹಾಕಾರ ಪಡುತ್ತಿದ್ದರೆ, ಅತ್ತ ಸಿಎಂ ಸಿದ್ದರಾಮಯ್ಯ ಅವರು ಗ್ಯಾರೆಂಟಿ ಸಮಾವೇಶದ ಹೆಸರಿನಲ್ಲಿ ಜನರ ದುಡ್ಡಿನಲ್ಲಿ ಜಾತ್ರೆ ಮಾಡುತ್ತಿದ್ದಾರೆಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ರಾಜ್ಯದಲ್ಲಿ ಜಲ ಕ್ಷಾಮದ ಸೂತಕ ಮನೆ ಮಾಡಿದ್ದರೆ, ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಉತ್ಸವದ ಸಂಭ್ರಮದಲ್ಲಿದೆ ಎಂದು ಹರಿಹಾಯ್ದಿದ್ದಾರೆ.

ಅಜ್ಜಿಗೆ ಅರಿವೆ ಚಿಂತೆಯಾದರೆ ಮೊಮ್ಮಗಳಿಗೆ ಇನ್ನೇನೋ ಚಿಂತೆ ಎಂಬಂತೆ ಇಲ್ಲಿ ಜನ ಜಲಕ್ಷಾಮದಿಂದ ಹನಿ ನೀರಿಗೂ ಹಾಹಾಕಾರ ಪಡುತ್ತಿದ್ದರೆ, ಅತ್ತ ಸಿಎಂ ಸಿದ್ದರಾಮಯ್ಯ ನವರು ಗ್ಯಾರೆಂಟಿ ಸಮಾವೇಶದ ಹೆಸರಿನಲ್ಲಿ ಜನರ ದುಡ್ಡಿನಲ್ಲಿ ಜಾತ್ರೆ ಮಾಡುತ್ತಿದ್ದಾರೆ.

ರಾಜ್ಯದಲ್ಲಿ 900 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಲಕ್ಷಾಂತರ ಕೃಷಿ ಕಾರ್ಮಿಕರು ಹೊಟ್ಟೆಪಾಡಿಗಾಗಿ ಊರು ಬಿಟ್ಟು ಗುಳೇ ಹೋಗಿದ್ದಾರೆ, 40ಕ್ಕೂ ಹೆಚ್ಚು ನೇಕಾರರು ದಿಕ್ಕು ಕಾಣದೆ ಜೀವ ಬಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಜನ ತೊಟ್ಟು ನೀರಿಗೂ ಪರದಾಡುತ್ತಿದ್ದಾರೆ.

ರಾಜ್ಯದಲ್ಲಿ ಇಂತಹ ಸೂತಕದ ವಾತಾವರಣ ಇರುವಾಗ ಗ್ಯಾರೆಂಟಿ ಸಮಾವೇಶದ ಹೆಸರಿನಲ್ಲಿ ಪ್ರತಿ ತಾಲೂಕಿಗೆ 50 ಲಕ್ಷ, ಪ್ರತಿ ಜಿಲ್ಲೆಗೆ ಒಂದು ಕೋಟಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಭಾಗವಹಿಸುವ ಕಾರ್ಯಕ್ರಮಗಳಿಗೆ ಎರಡು ಕೋಟಿ ಖರ್ಚು ಮಾಡಿ ಉತ್ಸವ ಮಾಡುತ್ತಿದೀರಲ್ಲ ಸಿಎಂ ಸಿದ್ದರಾಮಯ್ಯ ನವರೇ, ನಿಮಗೆ ಕಿಂಚಿತ್ತಾದರೂ ಮಾನವೀಯತೆ, ಕರ್ತವ್ಯ ಪ್ರಜ್ಞೆ ಇದೆಯೇ?

ಗ್ಯಾರೆಂಟಿ ಸಮಾವೇಶಕ್ಕಾಗಿ ನೂರಾರು ಕೋಟಿ ಪೋಲು ಮಾಡುವ ಬದಲು ಜನರಿಗೆ ನೀರಿನ ವ್ಯವಸ್ಥೆ ಮಾಡಬಹುದಿತ್ತಲ್ಲ? ಅದೇ ದುಡ್ಡಿನಲ್ಲಿ ರೈತರಿಗೆ ಬರ ಪರಿಹಾರ ಕೂಡಬಹುದಿತ್ತಲ್ಲವೆ? ರಾಜ್ಯದ ಜನತೆ ಇಲ್ಲಿ ಅವಸ್ಥೆ ಪಡುತ್ತಿದ್ದರೆ ನಿಮಗೆ ಚುನಾವಣಾ ಪ್ರಚಾರವೇ ಹೆಚ್ಚಾಗಿ ಹೋಯಿತೇ? ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಪ್ರಕಾರ ಈ ಕಾರ್ಯಕ್ರಮಕ್ಕೆ ಹಾಜರಾಗುವ ಜನರಿಗೆ ಊಟ, ವಸತಿ, ಪೆಂಡಾಲು ಸೇರಿದಂತೆ ಇನ್ನಿತರ ಸೌಲಭ್ಯ ಕಲ್ಪಿಸಲಾಗುವುದು ಎಂದು ವಿವರಿಸಲಾಗಿದೆ. ತಾಲ್ಲೂಕು ಹಾಗೂ ಹೋಬಳಿ ಮಟ್ಟದ ಕಾರ್ಯಕ್ರಮಗಳಿಗಾಗಿ ಪ್ರತಿ ತಾಲ್ಲೂಕಿಗೆ 50 ಲಕ್ಷ ರೂ. ಜಿಲ್ಲಾ ಮಟ್ಟದ ಕಾರ್ಯಕ್ರಮಗಳಿಗೆ 1 ಕೋಟಿ ರೂ. ಹಾಗೂ ಸಿಎಂ, ಡಿಸಿಎಂ ಭಾಗವಹಿಸುವ ಕಾರ್ಯಕ್ರಮಗಳಿಗೆ 2 ಕೋಟಿ ರೂ. ವೆಚ್ಚ ಮಾಡಲು ಉದ್ದೇಶಿಸಲಾಗಿದೆ.

ಕರ್ನಾಟಕ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಪ್ರಕಾರ ಈ ಕಾರ್ಯಕ್ರಮಕ್ಕೆ ಹಾಜರಾಗುವ ಜನರಿಗೆ ಊಟ, ವಸತಿ, ಪೆಂಡಾಲು ಸೇರಿದಂತೆ ಇನ್ನಿತರ ಸೌಲಭ್ಯ ಕಲ್ಪಿಸಲಾಗುವುದು ಎಂದು ವಿವರಿಸಲಾಗಿದೆ. ತಾಲ್ಲೂಕು ಹಾಗೂ ಹೋಬಳಿ ಮಟ್ಟದ ಕಾರ್ಯಕ್ರಮಗಳಿಗಾಗಿ ಪ್ರತಿ ತಾಲ್ಲೂಕಿಗೆ 50 ಲಕ್ಷ ರೂ. ಜಿಲ್ಲಾ ಮಟ್ಟದ ಕಾರ್ಯಕ್ರಮಗಳಿಗೆ 1 ಕೋಟಿ ರೂ. ಹಾಗೂ ಸಿಎಂ, ಡಿಸಿಎಂ ಭಾಗವಹಿಸುವ ಕಾರ್ಯಕ್ರಮಗಳಿಗೆ 2 ಕೋಟಿ ರೂ. ವೆಚ್ಚ ಮಾಡಲು ಉದ್ದೇಶಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಕಾಂಗ್ರೆಸ್ ಗೆ ಅವಮಾನವಾಗುವ ಹೇಳಿಕೆ ನೀಡಲು ನಿಮಗೆ ಯಾರ ಒತ್ತಡವಿದೆ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

SCROLL FOR NEXT