ಸಂಸದ ಅನಂತ್ ಕುಮಾರ್ ಹೆಗಡೆ
ಸಂಸದ ಅನಂತ್ ಕುಮಾರ್ ಹೆಗಡೆ 
ರಾಜಕೀಯ

ಮಾಧ್ಯಮಗಳನ್ನು ನಾಯಿಗೆ ಹೋಲಿಸಿ ನಾಲಿಗೆ ಹರಿಬಿಟ್ಟ ಸಂಸದ ಅನಂತ್ ಕುಮಾರ್ ಹೆಗಡೆ!

Manjula VN

ಬೆಂಗಳೂರು: ಸಂವಿಧಾನ ಬದಲಾವಣೆ ಮಾಡಬೇಕು ಎಂದು ಹೇಳಿಕೆ ನೀಡಿ ಮುಜುಗರಕ್ಕೊಳಗಾಗಿದ್ದ ಸಂಸದ ಅನಂತಕುಮಾರ್‌ ಹೆಗಡೆ ಅವರು, ಇದೀಗ ಮಾಧ್ಯಮಗಳನ್ನು ನಾಯಿಗೆ ಹೋಲಿಸಿ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಅಂಕೊಲಾ ತಾಲೂಕಿನ ಹಿಲ್ಲೂರು ಗ್ರಾಮದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, “ಆನೆ ಹೊಗಿದ್ದೆ ದಾರಿ ಎಂಬಂತೆ ನಾವು ಈರಬೇಕು. ಮಾಧ್ಯಮಗಳು ಏನೂ ಬೆಕಾದ್ರೂ ಬರೆದುಕೊಳ್ಳಲಿ. ಬೇಕಾದ ಬೇವರ್ಸಿಗಳು ಏನೂ ಬೇಕಾದ್ರೂ ವದರಾಡಲಿ” ಎಂದು ಹೇಳಿದ್ದಾರೆ.

ವಿವಾದ ಸೃಷ್ಟಿಯಾದರೂ ದೃಢವಾಗಿ ನಿಲ್ಲುವುದು ನಿಜವಾದ ನಾಯಕತ್ವ, ಪತ್ರಿಕೆಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಚರ್ಚೆಗೆ ಕಾರ್ಯಕರ್ತರು ತಲೆಕೆಡಿಸಿಕೊಳ್ಳಬಾರದು.

ಸಾಮಾಜಿಕ ಜಾಲತಾಣದಲ್ಲಿ ಬೇಕಾದ್ದು ಚರ್ಚೆ ಆಗಲಿ. ಆದರೆ, ನಿವೆಲ್ಲ ಇದಕ್ಕೆ ವಿಚಲಿತರಾಗಬಾರದು. ನೀವು ಯಾವುದೋ ಸಾಮಾನ್ಯ ಪಕ್ಷದ ಕಾಯರ್ತರಲ್ಲ. ದೇಶ ಆಡಳಿತ ಮಾಡುತ್ತಿರುವ ಪಕ್ಷದ ಕಾರ್ಯಕರ್ತರು. ಆನೆ ನಡೆದಿದ್ದೆ ದಾರಿ ಎಂಬಂತೆ ನಾವು ನಡಿಯಬೇಕು ಕಣ್ರಿ. ಆನೆ ನಡೆಯುತ್ತಿದ್ದರೆ ನಾಯಿಗಳು ಬೋಗಳುತ್ತಾ ಇರುತ್ತವೆ. ಆನೆ ನಡೆಯುತ್ತಿದ್ದರೆ ಯಾವಗಲಾದರೂ ನಾಯಿ ಕಡೆ ಗಮನ ಕೊಡುತ್ತಾ? ನಾಯಿಗಳಿಗೂ ಗೊತ್ತು ನಾವು ಎಷ್ಟೆ ಬೊಗಳಿದ್ರು ಆನೆಗೆ ಏನು ಮಾಡುವುದಕ್ಕೂ ಆಗಲ್ಲ. ನಾಯಿಗಳು ಬೋಗಳದೆ ಇದ್ರೆ ಆನೆ ಗಾಂಭೀರ್ಯಕ್ಕೆ ಬೆಲೆ ಇರಲ್ಲ ಎಂದು ತಿಳಿಸಿದ್ದಾರೆ.

SCROLL FOR NEXT