ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ನನ್ನ ಸಹೋದರಿ ಕಣ್ಣೀರು ಹಾಕುತ್ತಿದ್ದಾರೆ; ನನ್ನ ನೋವು ನನಗೇ ಗೊತ್ತು: ಮಂಜುನಾಥ್ ಸ್ಪರ್ಧೆ ಬಗ್ಗೆ ಎಚ್ ಡಿಕೆ ಮಾತು!

ಹೆಚ್.ಡಿ.ದೇವೇಗೌಡರು ಕಣ್ಣೀರು ಹಾಕೋದು ಅವರ ಕುಟುಂಬಕ್ಕಾಗಿ ಎಂದು ಡಿ.ಕೆ.ಶಿವಕುಮಾರ್ ಹೇಳುತ್ತಾರೆ. ಅವರಿಗೆ ಆತ್ಮಸಾಕ್ಷಿ ಅನ್ನೋದು ಇದೆಯಾ? ಅವರು ಏನೆಲ್ಲಾ ಮಾಡಿದ್ದಾರೆ, ಏನೆಲ್ಲಾ ಕೆಡುಕು ಮಾಡಿದ್ದಾರೆ ಎನ್ನುವುದು ಈ ರಾಜ್ಯಕ್ಕೆ ಗೊತ್ತಿದೆ.

ಬೆಂಗಳೂರು: ನನ್ನ ಸಹೋದರಿ ಮನೆಯಲ್ಲಿ ಕಣ್ಣೀರು ಹಾಕುತ್ತಿದ್ದಾರೆ. ನಮ್ಮನ್ನು ಯಾಕೆ ರಾಜಕೀಯಕ್ಕೆ ಎಳೆಯುತ್ತೀರಿ, ನೆಮ್ಮದಿಯಿಂದ ಇದ್ದೇವೆ, ನಮಗೆ ರಾಜಕೀಯ ಬೇಡ ಅಂತ ಅಳುತ್ತಾ ಕೂತಿದ್ದಾರೆ. ಇದು ನಮ್ಮ ಮನೆಯ ಪರಿಸ್ಥಿತಿ. ನನ್ನ ನೋವು ನನಗೇ ಗೊತ್ತು. ಆದರೆ, ವಿರೋಧಿಗಳನ್ನು ಮಣಿಸಲೇಬೇಕು. ಇದು ನನ್ನ ಗುರಿ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ರಾಮನಗರ ಕ್ಷೇತ್ರದ ನಾಯಕರ ಜೊತೆಗೆ ಎಚ್ ಡಿ ಕೆ ಸಭೆ ನಡೆಸಿದರು. ಸಿ.ಪಿ.ಯೋಗೇಶ್ವರ್ ಅವರು ಎನ್ ಡಿಎ ಅಭ್ಯರ್ಥಿ ಆಗಬೇಕು ಎಂದು ನಾನು ಹೇಳಿದ್ದೇನೆ. ಸ್ವತಃ ಯೋಗೇಶ್ವರ್ ಅವರಿಗೂ ಹೇಳಿದ್ದೇನೆ. ಆದರೆ, ಯೋಗೇಶ್ವರ್ ಅವರು ಕೂಡ ಡಾ.ಮಂಜುನಾಥ್ ಅವರೇ ನಿಲ್ಲಬೇಕು ಎಂದು ಒತ್ತಡ ಹಾಕುತ್ತಿದ್ದಾರೆ. ಮಿತ್ರ ಪಕ್ಷದ ವರಿಷ್ಠರು, ರಾಜ್ಯದ ಬಿಜೆಪಿ ನಾಯಕರ ಭಾವನೆಗಳನ್ನು ನಾವು ಗೌರವಿಸಬೇಕಿದೆ ಎಂದು ಕುಮಾರಸ್ವಾಮಿ ಅವರು ಸಭೆಯಲ್ಲಿ ಹೇಳಿದರು. 2 ನಾನು ನಮ್ಮ ತಂದೆಯವರ ಜತೆ ಎರಡು ಗಂಟೆ ಕಾಲ ಚರ್ಚೆ ಮಾಡಿದೆ. ಡಾ.ಮಂಜುನಾಥ್ ಅವರ ಸ್ಪರ್ಧೆ ವಿಚಾರವನ್ನು ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ ಎಂದರು.

ಜಯದೇವ ಹೃದ್ರೋಗ ಸಂಸ್ಥೆಯ ವಿಶ್ರಾಂತ ನಿರ್ದೇಶಕರಾದ ಡಾ.ಸಿ.ಎನ್.ಮಂಜುನಾಥ್ ಅವರನ್ನೇ ಬೆಂಗಳೂರು ಗ್ರಾಮಾಂತರ ನಿಲ್ಲಿಸಬೇಕು ಎಂಬುದು ಬಿಜೆಪಿ ಹೈಕಮಾಂಡ್ ಹಾಗೂ ರಾಜ್ಯ ಬಿಜೆಪಿ ನಾಯಕರ ಒತ್ತಾಸೆ ಇದೆ. ನಮ್ಮ ಪಕ್ಷದ ನಾಯಕರು, ಮುಖಂಡರು ಅದೇ ಅಭಿಲಾಷೆ ಹೊಂದಿದ್ದಾರೆ. ಎನ್ ಡಿಎ ಮೈತ್ರಿಕೂಟದ ಒಮ್ಮತ ಅಭ್ಯರ್ಥಿ ಆಗಬೇಕು ಎರಡೂ ಪಕ್ಷಗಳೂ ಬಯಸಿವೆ, ಡಾ. ಮಂಜುನಾಥ್‌ ಅವರು ಚುನಾವಣೆಗೆ ನಿಲ್ಲಬೇಕೋ ಬೇಡವೋ ಎನ್ನುವ ತೀರ್ಮಾನವನ್ನು ಮುಖಂಡರಾದ ನಿಮಗೆ ಬಿಡುತ್ತೇನೆ ಎಂದು ಸಭೆಯಲ್ಲಿ ಕುಮಾರಸ್ವಾಮಿ ಅವರು ಹೇಳಿದರು

ಈ ಚುನಾವಣೆಯನ್ನು ಸವಾಲಾಗಿ ಸ್ವೀಕಾರ ಮಾಡಿ. ರಾಮನಗರ ಜನರು ನಿಖಿಲ್ ರನ್ನು ಸೋಲಿಸಿದ್ದಾರೆ ಎಂದು ನಾನು ಆರೋಪ ಮಾಡಲ್ಲ. ನಮ್ಮದೇ ತಪ್ಪುಗಳಿಂದ ನಿಖಿಲ್ ಸೋತಿದ್ದಾರೆ, ಆ ತಪ್ಪುಗಳನ್ನು ಸರಿ ಮಾಡೋಣ ಎಂದರು. ರಾಮನಗರ ಕ್ಷೇತ್ರದ ಜನರು ಯಾವತ್ತೂ ಜಾತಿ ಮೇಲೆ ಚುನಾವಣೆ ಮಾಡಿದವರಲ್ಲ. ನಾನೆಂದೂ ಗುತ್ತಿಗೆದಾರರಿಂದ ಹಣ ಕೇಳಿದವನಲ್ಲ, ಚುನಾವಣೆ ಅದ ಮೇಲೆ ನಾನು ಊರುಗಳಲ್ಲಿ ಜಗಳ ತಂದಿಡಲಿಲ್ಲ. ನಿಮ್ಮಲ್ಲಿ ಒಬ್ಬನಾಗಿ ಪಕ್ಷಕ್ಕೆ ದುಡಿಮೆ ಮಾಡಿದ್ದೇನೆ. ಇವತ್ತು ಕಾಂಗ್ರೆಸ್ ನವರು ಯಾವ ರೀತಿ ನಡೆದುಕೊಳ್ಳುತ್ತಿದ್ದಾರೆ.ನಾನು ಯಾವ ರೀತಿ ನಡೆದುಕೊಂಡಿದ್ದೇನೆ ಎನ್ನುವುದು ರಾಜ್ಯಕ್ಕೆ ಗೊತ್ತಿದೆ ಎಂದು ಮುಖಂಡರಿಗೆ ಮಾಜಿ ಮುಖ್ಯಮಂತ್ರಿಗಳು ತಿಳಿಸಿದರು.

ಇನ್ನೂ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಕಣ್ಣೀರು ಹಾಕೋದು ಅವರ ಕುಟುಂಬಕ್ಕೆ ಎಂದು ಡಿ.ಕೆ.ಶಿವಕುಮಾರ್ ಹೇಳುತ್ತಾರೆ. ಅವರಿಗೆ ಆತ್ಮಸಾಕ್ಷಿ ಅನ್ನೋದು ಇದೆಯಾ? ಅವರು ಏನೆಲ್ಲಾ ಮಾಡಿದ್ದಾರೆ, ಏನೆಲ್ಲಾ ಕೆಡುಕು ಮಾಡಿದ್ದಾರೆ ಎನ್ನುವುದು ಈ ರಾಜ್ಯಕ್ಕೆ ಗೊತ್ತಿದೆ. ನಾವು ಹಾಗೆ ಮಾಡಿದ್ದೇವೆಯಾ? ಖಂಡಿತಾ ಇಲ್ಲ ಎಂದು ಕುಮಾರಸ್ವಾಮಿ ಹೇಳಿದರು. ಇಡೀ ವಿಶ್ವವೇ ಮೋದಿ ಅವರನ್ನು ಗೌರವಿಸುತ್ತದೆ. ಅಂತಹ ಮೋದಿ ಅವರು ದೇವೇಗೌಡರು ಬಂದರೆ ಎಷ್ಟು ಗೌರವ ಕೊಡುತ್ತಾರೆ ಎನ್ನುವುದನ್ನು ಇಡೀ ದೇಶವೇ ನೋಡಿದೆ. ಯಾವ ರೀತಿ ಅವರು ದೇವೆಗೌಡರನ್ನು ಆದರಿಸುತ್ತಾರೆ ಎಂಬುದನ್ನು ಆ ವ್ಯಕ್ತಿ ಅರ್ಥ ಮಾಡಿಕೊಳ್ಳಬೇಕು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT