ಹೆಚ್ ಡಿ ದೇವೇಗೌಡ  
ರಾಜಕೀಯ

'ಪ್ರಜ್ವಲ್ ಸೋಲಿಸಿ ಗೌಡರ ಕುಟುಂಬಕ್ಕೆ ಶಿಕ್ಷೆ ಕೊಡಬೇಡಿ, ನಮ್ಮಿಂದ ಏನಾದ್ರು ತಪ್ಪುಗಳಾಗಿದ್ದರೆ ಕ್ಷಮಿಸಿ': ಹಾಸನದಲ್ಲಿ ಕಾರ್ಯಕರ್ತರ ಮುಂದೆ ದೇವೇಗೌಡ ಅಂಡ್ ಸನ್ಸ್ ಭಾವುಕ!

ಹಾಸನ ಲೋಕಸಭಾ ಕ್ಷೇತ್ರಕ್ಕೆ ಜೆಡಿಎಸ್-ಬಿಜೆಪಿ ಮೈತ್ರಿಕೂಟ ಇನ್ನೂ ಅಭ್ಯರ್ಥಿಯನ್ನು ಘೋಷಿಸದಿದ್ದರೂ, ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಪ್ರಜ್ವಲ್ ರೇವಣ್ಣ ಪುನಾರಾಯ್ಕೆಗೆ ಸ್ಪರ್ಧಿಸುವ ಎಲ್ಲಾ ಸಾಧ್ಯತೆಗಳಿವೆ.

ಹಾಸನ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ಅವರ ಪುತ್ರರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಹೆಚ್.ಡಿ.ರೇವಣ್ಣ ಹಾಗೂ ಮೊಮ್ಮಗ ಪ್ರಜ್ವಲ್ ರೇವಣ್ಣ ನಿನ್ನೆ ಬುಧವಾರ ಪಕ್ಷದ ಕಾರ್ಯಕರ್ತರಲ್ಲಿ ಕ್ಷಮೆಯಾಚಿಸಿದ್ದಾರೆ. ತಮ್ಮ ಕಡೆಯಿಂದ ಏನಾದರೂ ತಪ್ಪುಗಳಾಗಿದ್ದರೆ ಮತ್ತು ಅಜಾಗರೂಕತೆಯಿಂದ ಯಾವುದೇ ತಪ್ಪುಗಳನ್ನು ಮಾಡಿದ್ದರೆ ಕ್ಷಮಿಸಿ ಎಂದು ಹೇಳಿದ್ದಾರೆ.

ಹಾಸನ ಲೋಕಸಭಾ ಕ್ಷೇತ್ರಕ್ಕೆ ಜೆಡಿಎಸ್-ಬಿಜೆಪಿ ಮೈತ್ರಿಕೂಟ ಇನ್ನೂ ಅಭ್ಯರ್ಥಿಯನ್ನು ಘೋಷಿಸದಿದ್ದರೂ, ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಪ್ರಜ್ವಲ್ ರೇವಣ್ಣ ಪುನಾರಾಯ್ಕೆಗೆ ಸ್ಪರ್ಧಿಸುವ ಎಲ್ಲಾ ಸಾಧ್ಯತೆಗಳಿವೆ. ನಿನ್ನೆ ಬುಧವಾರದ ಸಭೆಯು ಪಕ್ಷದ ಅಧಿಕೃತ ಚುನಾವಣಾ ಪ್ರಚಾರವಾಗಿತ್ತು. ಜೆಡಿಎಸ್ ವರಿಷ್ಠ ಹೆಚ್ . ಡಿ.ದೇವೇಗೌಡರ ಭದ್ರಕೋಟೆಯಾಗಿರುವ ಹಾಸನ ಕ್ಷೇತ್ರದಿಂದ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ದಿವಂಗತ ಜಿ.ಪುಟ್ಟಸ್ವಾಮಿಗೌಡ ಅವರ ಮೊಮ್ಮಗ ಶ್ರೇಯಸ್ ಪಟೇಲ್ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಘೋಷಿಸಿದೆ.

ತಮ್ಮ 35 ನಿಮಿಷಗಳ ಭಾವನಾತ್ಮಕ ಭಾಷಣದಲ್ಲಿ ಕುಮಾರಸ್ವಾಮಿ ಅವರು ಪ್ರಜ್ವಲ್‌ಗಾಗಿ ಕೆಲಸ ಮಾಡುವಂತೆ ಸಭೆಯಲ್ಲಿ ಕಾರ್ಯಕರ್ತರನ್ನು ಒತ್ತಾಯಿಸಿದರು. ದೇವೇ ಗೌಡರ ಹುಟ್ಟೂರಾದ ಹಾಸನದಲ್ಲಿ ಪ್ರಜ್ವಲ್ ಅವರನ್ನು ಸೋಲಿಸಿ ಗೌಡರ ಕುಟುಂಬಕ್ಕೆ ಶಿಕ್ಷೆ ನೀಡಬೇಡಿ ಎಂದು ಕೇಳಿಕೊಂಡರು.

ಹಾಸನ ಕ್ಷೇತ್ರವನ್ನು ಉಳಿಸಿಕೊಳ್ಳಲು ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು. ನೀವು ಅವನನ್ನು ನನ್ನ ಮಗನಂತೆ ನೋಡಬೇಕು. ಈ ಚುನಾವಣೆ ಸವಾಲಿನದ್ದಾಗಿದೆ, ಅವರನ್ನು ಆಯ್ಕೆ ಮಾಡುವ ಮೂಲಕ ರಾಷ್ಟ್ರಕ್ಕೆ ಇಲ್ಲಿಂದ ಸಕಾರಾತ್ಮಕ ಸಂದೇಶವನ್ನು ರವಾನಿಸಬೇಕು. ಜೆಡಿಎಸ್ ಮೇಲೆ ಬೇರೆ ಪಕ್ಷಕ್ಕೆ ಪ್ರೀತಿ ಮತ್ತು ನಂಬಿಕೆ ಇರುವವರೆಗೆ ಬಿಜೆಪಿಯೊಂದಿಗೆ ಜೆಡಿಎಸ್ ಉತ್ತಮ ಬಾಂಧವ್ಯ ಹೊಂದಿರಲಿದೆ ಎಂದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ರಾಜ್ಯದಲ್ಲಿನ ಅಲ್ಪಸಂಖ್ಯಾತರ ಶಾಲೆಗಳು ಮತ್ತು ಹಾಸ್ಟೆಲ್‌ಗಳಿಗೆ 200 ಕೋಟಿ ಅನುದಾನವನ್ನು ಬಿಡುಗಡೆ ಮಾಡುವ ಮೂಲಕ ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ಕಾಪಾಡುತ್ತಿದೆ ಎಂದರು.

ಜಾತಿ ಗಣತಿ ಹಾಗೂ ಜಯಪ್ರಕಾಶ್ ಆಯೋಗದ ವರದಿಯನ್ನು ಸಿದ್ದರಾಮಯ್ಯ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು. "ಅವನ ಕೈಗಳನ್ನು ಯಾರು ಕಟ್ಟಿದ್ದಾರೆ" ಎಂದು ಕುಮಾರಸ್ವಾಮಿ ಪ್ರಶ್ನಿಸಿದರು,

ಲೋಕಸಭೆ ಚುನಾವಣೆಗೆ ಸ್ಪರ್ಧಿಸದಿರಲು ನಿರ್ಧರಿಸಿರುವುದಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದು, ಜೆಡಿಎಸ್ ನ್ನು ಮುಗಿಸಲು ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಜೆಡಿಎಸ್ ನ್ನು ಸಾಯಲು ಬಿಡುವುದಿಲ್ಲ. ಪಕ್ಷವನ್ನು ಬಲಪಡಿಸಲು ಶ್ರಮಿಸುವುದಾಗಿ ಹಾಸನ ಕ್ಷೇತ್ರದಲ್ಲಿ ಕಾರ್ಯಕರ್ತರಿಗೆ ಕುಮಾರಸ್ವಾಮಿ ಮಾತು ಕೊಟ್ಟರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT