ರಾಜಕೀಯ

ಬೇಡ ಎಂದರೂ ಬೆಳಗಾವಿ ಕ್ಷೇತ್ರಕ್ಕೆ ಜಗದೀಶ್ ಶೆಟ್ಟರ್‌ ಫಿಕ್ಸ್? ಮಾತುಕತೆ ವೇಳೆ ಶೆಟ್ಟರ್​ಗೆ BSY ಕೊಟ್ಟ ಅಭಯವೇನು?

ಮುಂಬರುವ ಲೋಕಸಭೆ ಚುನಾವಣಗೆ ಧಾರವಾಡ ಕ್ಷೇತ್ರಕ್ಕೆ ಪಟ್ಟು ಹಿಡಿದಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರಿಗೆ ಹೈಕಮಾಂಡ್‌ ಮತ್ತು ರಾಜ್ಯ ನಾಯಕರು ಬೆಳಗಾವಿಯಿಂದಲೇ ಸ್ಪರ್ಧಿಸುವಂತೆ ಒತ್ತಾಯಿಸಿದ್ದಾರೆ.

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣಗೆ ಧಾರವಾಡ ಕ್ಷೇತ್ರಕ್ಕೆ ಪಟ್ಟು ಹಿಡಿದಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರಿಗೆ ಹೈಕಮಾಂಡ್‌ ಮತ್ತು ರಾಜ್ಯ ನಾಯಕರು ಬೆಳಗಾವಿಯಿಂದಲೇ ಸ್ಪರ್ಧಿಸುವಂತೆ ಒತ್ತಾಯಿಸಿದ್ದಾರೆ.

ಕಳೆದ ರಾತ್ರಿ ಬಿಎಸ್ ಯಡಿಯೂರಪ್ಪ ಮನೆಯಲ್ಲಿ ಸುದೀರ್ಘ ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದ ಜಗದೀಶ್ ಶೆಟ್ಟರ್ ಅವರು ಕೊನೆಗೂ ಬಿಜೆಪಿ ಹಿರಿಯ ನಾಯಕ ಅಮಿತ್‌ ಶಾ ಮತ್ತು ಬಿ.ಎಸ್‌. ಯಡಿಯೂರಪ್ಪ ಅವರ ಮಾತಿಗೆ ಕಟ್ಟುಬಿದ್ದು ಬೆಳಗಾವಿಯಿಂದ ಸ್ಪರ್ಧಿಸಲು ಒಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಬಿಜೆಪಿ ಎರಡನೇ ಪಟ್ಟಿಯಂತೆ ಹಾವೇರಿ ಮತ್ತು ಧಾರವಾಡ ಎರಡೂ ಕ್ಷೇತ್ರಗಳು ಮಿಸ್‌ ಆದ ಹಿನ್ನೆಲೆಯಲ್ಲಿ ಶೆಟ್ಟರ್‌ ಬಿಜೆಪಿ ವಿರುದ್ಧ ಅಸಮಾಧಾನಗೊಂಡಿದ್ದರು. ಅಲ್ಲದೆ ತಮ್ಮ ಆಪ್ತರ ಜತೆ ಮಾತುಕತೆ ನಡೆಸಿ ಮುಂದಿನ ನಿರ್ಣಯ ತೆಗೆದುಕೊಳ್ಳುವ ಬಗ್ಗೆ ಮಾತನಾಡಿದ್ದರು. ಆದರೆ ಬಿಎಸ್ ವೈ ಜೊತೆಗಿನ ಮಾತುಕತೆ ನಂತರ ಜಗದೀಶ್ ಶೆಟ್ಟರ್ ಸಮಾಧಾನಗೊಂಡಿದ್ದಾರೆ.

ಮಂಗಳಾ ಅಂಗಡಿ ಅವರು ಬೆಳಗಾವಿಯ ಹಾಲಿ ಸಂಸದರಾಗಿದ್ದು ಅವರನ್ನು ಬದಲಿಸುವುದಿದ್ದರೆ ಅವರ ಇಬ್ಬರ ಮಕ್ಕಳಲ್ಲಿ ಯಾರಿಗಾದರೂ ಒಬ್ಬರಿಗೆ ಟಿಕೆಟ್ ನೀಡಿ, ಆಗ ಅಂಗಡಿ ಮತ್ತು ನಮ್ಮ ಕುಟುಂಬಕ್ಕೆ ನ್ಯಾಯ ಒದಗಿಸಿದಂತೆ ಆಗುತ್ತದೆ ಎಂದು ಹೇಳಿದ್ದರು. ಆದರೆ ಬೆಳಗಾವಿಯಿಂದಲೇ ಸ್ಪರ್ಧೆ ಮಾಡುವಂತೆ ಜಗದೀಶ್ ಶೆಟ್ಟರ್ ಅವರನ್ನು ಯಡಿಯೂರಪ್ಪ ಮತ್ತು ವಿಜಯೇಂದ್ರ ಮನವೊಲಿಸಿದ್ದಾರೆ ಎಂದು ತಿಳಿದು ಬಂದಿದೆ. ಹಾಗಾಗಿ ಬೆಳಗಾವಿಯಿಂದ ಜಗದೀಶ್ ಶೆಟ್ಟರ್ ಅವರೇ ಸ್ಪರ್ಧೆ ಮಾಡೋದು ಖಚಿತ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT