ಡಿಕೆ ಶಿವಕುಮಾರ್ 
ರಾಜಕೀಯ

ಕರ್ನಾಟಕದ 20ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು: ಡಿಕೆ ಶಿವಕುಮಾರ್ ವಿಶ್ವಾಸ

ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ 20ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಹೇಳಿದ್ದಾರೆ.

ಕಲಬುರಗಿ: ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ 20ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಹೇಳಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ಬಿಜೆಪಿ 10ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಬದಲಾಯಿಸುತ್ತಿದೆ. ಏಕೆಂದರೆ, ಅವರ ಸಂಸದರು ಯಾವುದೇ ಕೆಲಸ ಮಾಡಿಲ್ಲ ಎಂದರು.

ಬೆಂಗಳೂರಿನ ನೀರಿನ ಸಮಸ್ಯೆ ಕುರಿತು ಮಾತನಾಡಿದ ಅವರು, 'ನಮ್ಮ ಸರ್ಕಾರ ಕುಡಿಯುವ ನೀರು ಒದಗಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. 7,000ಕ್ಕೂ ಹೆಚ್ಚು ಕೊಳವೆ ಬಾವಿಗಳು ಬತ್ತಿ ಹೋಗಿವೆ. ನೀರಿನ ಕೊರತೆ ಉಂಟಾಗಿದೆ. ನಾವು ಈ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಂಡಿದ್ದೇವೆ ಮತ್ತು ನಾವು ಅದರ ಮೇಲೆ ಕೆಲಸ ಮಾಡುತ್ತಿದ್ದೇವೆ' ಎಂದು ಹೇಳಿದರು.

ನೀರಿನ ಕೊರತೆ ನೀಗಿಸಲು ಮಹಾರಾಷ್ಟ್ರದಿಂದ ಭೀಮಾ ನದಿ ನೀರು ಬಿಡುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ‘ನಮ್ಮ ಸರ್ಕಾರ ಈಗಾಗಲೇ ಪತ್ರ ಬರೆದಿದೆ. ತೆಲಂಗಾಣ ರಾಜ್ಯ ಕೂಡ ನೀರು ಕೇಳಿದೆ. ಆದರೆ, ಇಲ್ಲಿ ನೀರು ಕಡಿಮೆಯಿದೆ. ಈ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯಗಳು ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ' ಎಂದು ತಿಳಿಸಿದರು.

ಖಾತರಿ ಯೋಜನೆಗಳು ಜನರ ಜೀವನೋಪಾಯಕ್ಕಾಗಿಯೇ ಹೊರತು ಚುನಾವಣೆಗಾಗಿ ಅಲ್ಲ. ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವುದಕ್ಕಿಂತ ದೊಡ್ಡ ತೃಪ್ತಿ ಪಕ್ಷ ಅಥವಾ ಸರ್ಕಾರಕ್ಕೆ ಮತ್ತೊಂದಿಲ್ಲ. ಈ ಯೋಜನೆಗಳು ಜನರಿಗಾಗಿಯೇ ಹೊರತು ಯಾವುದೇ ಚುನಾವಣೆಯನ್ನು ಉದ್ದೇಶಿಸಿಲ್ಲ. ಈ ಯೋಜನೆಗಳು ಬೆಲೆ ಏರಿಕೆ ಮತ್ತು ಹಣದುಬ್ಬರದ ಹೊರೆಯನ್ನು ತಗ್ಗಿಸಲು ಉದ್ದೇಶಿಸಲಾಗಿದೆ ಎಂದು ಸಮರ್ಥಿಸಿಕೊಂಡರು.

'ದೇಶದ ಜನರು ನಮ್ಮ ಖಾತರಿ ಯೋಜನೆಗಳನ್ನು ಇಷ್ಟಪಟ್ಟಿದ್ದಾರೆ. ಈ ಯೋಜನೆಗಳ ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ನಾವು ವಿವಿಧ ಹಂತಗಳಲ್ಲಿ ಖಾತರಿ ಅನುಷ್ಠಾನ ಯೋಜನೆಗಳನ್ನು ರೂಪಿಸಲು ನಿರ್ಧರಿಸಿದ್ದೇವೆ. ನಮ್ಮ ಸರ್ಕಾರವು ಒಟ್ಟು 3.74 ಲಕ್ಷ ಕೋಟಿ ರೂಪಾಯಿಗಳ ಬಜೆಟ್ ಗಾತ್ರದಲ್ಲಿ 1.26 ಲಕ್ಷ ಕೋಟಿ ರೂ. ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿಟ್ಟಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT