ರಾಜಕೀಯ

ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ದೊಡ್ಡ ತಿರುವು​; ಅಮಿತ್ ಶಾ ಭೇಟಿ ಮಾಡಿದ ಗಾಲಿ ಜನಾರ್ದನ ರೆಡ್ಡಿ, ತೀವ್ರ ಕುತೂಹಲ

ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿದ್ದು, ಈ ನಡುವಲ್ಲೇ ರಾಜಕೀಯ ವಲಯದಲ್ಲಿ ದೊಡ್ಡ ತಿರುವು ಎಂಬಂತೆ ಗಂಗಾವತಿ ಕ್ಷೇತ್ರದ ಶಾಸಕ, ಕೆಆರ್​ಪಿಪಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಅವರು ಕೇಂದ್ರ ಗೃಹ ಸಚಿವ ಅಮಿತ್​ ಶಾರನ್ನು...

ಬೆಂಗಳೂರು: ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿದ್ದು, ಈ ನಡುವಲ್ಲೇ ರಾಜಕೀಯ ವಲಯದಲ್ಲಿ ದೊಡ್ಡ ತಿರುವು ಎಂಬಂತೆ ಗಂಗಾವತಿ ಕ್ಷೇತ್ರದ ಶಾಸಕ, ಕೆಆರ್​ಪಿಪಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಅವರು ಕೇಂದ್ರ ಗೃಹ ಸಚಿವ ಅಮಿತ್​ ಶಾರನ್ನು ಗುರುವಾರ ಭೇಟಿ ಮಾಡಿದ್ದು, ಇಬ್ಬರ ಭೇಟಿ ಸಾಕಷ್ಟು ಕುತೂಹಲಗಳನ್ನು ಕೆರಳಿಸಿದೆ.

ಭೇಟಿ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜನಾರ್ಧನ ರೆಡ್ಡಿಯವರು, ಕೇಂದ್ರ ಗೃಹ ಮಂತ್ರಿಗಳಾದ ಅಮಿತ್ ಶಾ ಅವರ ಆಹ್ವಾನದ ಮೇರೆಗೆ ನವದೆಹಲಿಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷನಾಗಿ ಭೇಟಿ ಮಾಡಿ ಕರ್ನಾಟಕ ರಾಜ್ಯದ ಕೆಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದು ನನಗೆ ಬಹಳ ಸಂತೋಷವನ್ನು ತಂದಿದೆ ಎಂದು ಬರೆದುಕೊಂಡಿದ್ದಾರೆ.

ಕಳೆದ ವರ್ಷ ನಡೆದ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯಿಂದ ಜನಾರ್ದನ ರೆಡ್ಡಿ ಗಂಗಾವತಿ ಕ್ಷೇತ್ರದ ಟಿಕೆಟ್​ ಬಯಸಿದ್ದರು. ಆದರೆ, ಬಿಜೆಪಿ ಹೈಕಮಾಂಡ್​ ಜರ್ನಾದನ ರೆಡ್ಡಿ ಆಸೆಗೆ ಮಣೆ ಹಾಕದ ಕಾರಣ ಅವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಸ್ಥಾಪಿಸಿದ್ದರು.

ಕೆಲ ದಿನಗಳ ಹಿಂದೆ ನಡೆದ ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ಜನಾರ್ದನ ರೆಡ್ಡಿ ಕಾಂಗ್ರೆಸ್‌ ಬೆಂಬಲಸಿದ್ದರು. ಆದರೆ, ಇದೀಗ ಏಕಾಏಕಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT